12
March, 2026

A News 365Times Venture

12
Thursday
March, 2026

A News 365Times Venture

ಫೆ.1 ರಂದು ʻನೈಪುಣ್ಯೋತ್ಸವ:  ಪರಿಸರ ಬಗ್ಗೆ ಜಾಗೃತಿ

Date:

ಮೈಸೂರು,ಜನವರಿ,30,2025 (www.justkannada.in): ಫೆಬ್ರವರಿ 1 ರಂದು ನಗರದ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ನ ವಾರ್ಷಿಕೋತ್ಸವದ ʼನೈಪುಣ್ಯೋತ್ಸವʼ ಕಾರ್ಯಕ್ರಮ ಜರುಗಲಿದ್ದು,  ಈ ಬಾರಿ ಪರಿಸರ ಜಾಗೃತಿ ಮೂಡಿಸಲಿದೆ.

ನೈಪುಣ್ಯ ಸಂಸ್ಥೆಯ ಕನಕದಾಸ ನಗರ ಹಾಗೂ ಆರ್ ಟಿ ನಗರದ ಸಿಬಿಎಸ್‌ ಇ ಮತ್ತು ಐಸಿಎಸ್‌ಇ ಪಠ್ಯಕ್ರಮದ ಶಾಲೆಗಳು ಜಂಟಿಯಾಗಿ ಈ ಕಾರ್ಯಕ್ರಮನ್ನು ಆಯೋಜಿಸಿದ್ದು,  ಫೆಬ್ರವರಿ 1  ರ ಶನಿವಾರದಂದು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಈ ಕಾರ್ಯಕ್ರಮ  ಜರುಗಲಿದೆ.

ಮುಂಜಾನೆ 10.00 ಗಂಟೆಗೆ ಆರಂಭವಾಗುವ ಈ ಕಾರ್ಯಕ್ರಮವನ್ನು ಜಯದೇವ ಹೃದ್ರೋಗ ಸಂಶೋಧನಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಕೆ. ಎಸ್. ಸದಾನಂದ ಅವರು ಉದ್ಘಾಟಿಸಲಿದ್ದು, ಪೂರ್ವ ಪ್ರಾಥಮಿಕ ವಿಭಾಗದ (ಕಿಂಡರ್ಗಾರ್ಟನ್) ಪುಟ್ಟ ಮಕ್ಕಳಿಂದ ʻಜನನಿʼ ಹೆಸರಿನ ಕಾರ್ಯಕ್ರಮದಡಿಯಲ್ಲಿ ಮಕ್ಕಳು ಮತ್ತು ಮಾತೃ ಸಂಬಂಧದ ಕುರಿತ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಇದೇ ಸಂದರ್ಭದಲ್ಲಿ ʻಬೇರು-ಬಳ್ಳಿʼ ಹೆಸರಿನಲ್ಲಿ ಕೂಡು ಕುಟುಂಬವನ್ನು ವೇದಿಕೆಯ ಮೇಲೆ ತಂದು ನಮ್ಮ ನೆಲದ ಕುಟುಂಬ ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯಕ್ರಮವನ್ನೂ ಜೋಡಿಸಲಾಗಿದೆ.

ಸಂಜೆ 4.00 ಗಂಟೆಯ ಕಾರ್ಯಕ್ರಮವನ್ನು ರಾಜ್ಯ ಚುನಾವಣಾ ಆಯೋಗದ ಮಾಜಿ ಆಯುಕ್ತರು ಹಾಗೂ ನಿವೃತ್ತ ಹಿರಿಯ ಐ.ಎ.ಎಸ್ ಅಧಿಕಾರಿ ಪಿ. ಎನ್. ಶ್ರೀನಿವಾಸಾಚಾರಿ ಅವರು ಉದ್ಘಾಟಿಸಲಿದ್ದಾರೆ. ಗೌರವ ಅತಿಥಿಗಳಾಗಿ ಗದಗದ ಶ್ರೀ ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರು ಉಪಸ್ಥಿತರಿದ್ದು, ಶಿಕ್ಷಣದ ಕುರಿತು ಉಪನ್ಯಾಸ ನೀಡಲಿದ್ದಾರೆ.

ಮೇಲಿನ ಎರಡೂ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ನೈಪುಣ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ  ಆರ್. ರಘು ಅವರು ವಹಿಸಲಿದ್ದು, ಸಂಜೆ 4.00 ರ ಕಾರ್ಯಕ್ರಮದಲ್ಲಿ ಪರಿಸರ ಜಾಗೃತಿಯನ್ನು ಪಡಿಮೂಡಿಸುವ ನಿಟ್ಟಿನಲ್ಲಿ ʻಆಯಾಮ ಫೈನ್ ಆರ್ಟ್ಸ್ʼ ಅಕಾಡೆಮಿಯ ನಿರ್ದೇಶಕಿ ಡಾ. ಶಾಂಭವಿ ಸ್ವಾಮಿ ಅವರ ನಿರ್ದೇಶನದಲ್ಲಿ ʻಸೃಷ್ಠಿ-ದೃಷ್ಠಿʼ ನೃತ್ಯ ರೂಪಕವನ್ನು ನೈಪುಣ್ಯ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಲಿದ್ದಾರೆ. ನೈಪುಣ್ಯೋತ್ಸವದ ಇಡೀ ದಿನದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರನ್ನು ಆಹ್ವಾನಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಲಾ ಹಾಗೂ ಪರಿಸರ ಪ್ರೇಮಿಗಳು  ಭಾಗವಹಿಸುವಂತೆ ಸಂಸ್ಥೆಯು ವಿನಂತಿಸಿದೆ.

Key words: mysore, Naipunyotsava, on Feb. 1, Awareness, environment

The post ಫೆ.1 ರಂದು ʻನೈಪುಣ್ಯೋತ್ಸವ:  ಪರಿಸರ ಬಗ್ಗೆ ಜಾಗೃತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ ಎಂದು...

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ಮನವಿ

ಬೆಂಗಳೂರು,ಮಾರ್ಚ್,12,2026 (www.justkannada.in): ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ...

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...