12
March, 2026

A News 365Times Venture

12
Thursday
March, 2026

A News 365Times Venture

ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,15,2025 (www.justkannada.in): ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಮರಳಿದ್ದು ಈ ಸಾಧನೆಯನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯಶಸ್ವಿ ಬಾಹ್ಯಾಕಾಶ ಯಾತ್ರೆಯನ್ನು ಮುಗಿಸಿ, ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ ಅವರನ್ನು ದೇಶವಾಸಿಗಳ ಪರವಾಗಿ ಸ್ವಾಗತಿಸುತ್ತೇನೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿನೀಡಿದ ಮೊದಲ ಭಾರತೀಯನೆಂಬ ದಾಖಲೆ ಬರೆದ ಅವರಿಗೆ ಅಭಿನಂದನೆಗಳು.

ಇಡೀ ರಾಷ್ಟ್ರ ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಂಡು ಹೆಮ್ಮೆಪಡುತ್ತಿದೆ. ಶುಭಾಂಶು ಶುಕ್ಲಾರವರು ತಮ್ಮ ಪರಿಶ್ರಮ ಮತ್ತು ಧೈರ್ಯದ ಮೂಲಕ ಕೋಟ್ಯಂತರ ಜನರ ಕನಸುಗಳಿಗೆ ರೆಕ್ಕೆಯಾಗಿದ್ದಾರೆ. ಅವರ ಈ ಬಾಹ್ಯಾಕಾಶ ಪಯಣವು ಭವಿಷ್ಯದ ಸಂಶೋಧನೆಗಳ ಹಾದಿಯನ್ನು ಸುಗಮವಾಗಿಸಿದೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.vtu

Key words: Space, new milestone, India, CM, Siddaramaiah

The post ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್

ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ ಮಾಡಿದ್ದ...

LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ ,ಮಾರ್ಚ್,12,2026 (www.justkannada.in):  ಕಳೆದ 5 ದಿನಗಳಲ್ಲಿ ಎಲ್ ಪಿಜಿ ಉತ್ಪಾದನೆ...

ಶಾಸಕ ಭೈರತಿ ಬಸವರಾಜುಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು,ಮಾರ್ಚ್,12,2026 (www.justkannada.in): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಭೈರತಿ...

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ, ಗೃಹ...