24
June, 2026

A News 365Times Venture

24
Wednesday
June, 2026

A News 365Times Venture

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

Date:

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವೆ ವಾಗ್ಯುದ್ಧಗಳು ನಡೆಯುತ್ತಿದ್ದು ಈ ವಿಚಾರ ಕುರಿತು ಆರೋಗ್ಯ ಇಲಾಖೆ ಸಚಿವ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಯುಟಿ ಖಾದರ್,  ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ  ಅಧಿಸೂಚನೆ ಮಾಡಿದ್ದು ಯಾರೆಂದು ಜನರಿಗೆ ತಿಳಿಸಲಿ. ಅಧಿಸೂಚನೆ ಯಾರು ಮಾಡಿದರು ಎಂದು ಜೆಡಿಎಸ್ ಮುಖಂಡರು ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಬದಲು ಬಿಡದಿಯ ಬೈರಮಂಗಲಕ್ಕೆ ಚರ್ಚೆಗೆ ಬರುವಂತೆ ಸಿಎಂ ಡಿಕೆ ಶಿವಕುಮಾರ್ ಗೆ ಪತ್ರ ಬರೆದ ಹೆಚ್ ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್,  ರಾಜ್ಯದ ಜನರ ಬಗ್ಗೆ ಚರ್ಚಿಸಲೆಂದೇ ವಿಧಾನಸೌಧ ಇರೋದು ಎಂದು ಹೇಳಿದ್ದಾರೆ.

Key words: Bidadi Township, dispute, Minister, UT Khader, HDK

The post ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...

ಬೇರೆ ಕಡೆ ಇಲ್ಲದ ಕುಮಾರಸ್ವಾಮಿ, ನಿಖಿಲ್ ಹೋರಾಟ ಬಿಡದಿಯಲ್ಲಿ ಮಾತ್ರ ಯಾಕೆ? ಶಾಸಕ ಬಾಲಕೃಷ್ಣ ಕಿಡಿ

ಬೆಂಗಳೂರು, ಜೂನ್,23,2026 (www.justkannada.in): ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ ಯೋಜನೆಗಳಿಗೆ...

ಸಂಪುಟ ವಿಸ್ತರಣೆ ಕುರಿತು HDK ಹೇಳಿಕೆ ಖಂಡನೀಯ- ಎಚ್.ಎ. ವೆಂಕಟೇಶ್

ಮೈಸೂರು,ಜೂನ್,23,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತು...

ಆಹಾರ ವ್ಯಾಪಾರ ಸಂಸ್ಥೆಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ: 5 ನೋಟಿಸ್ ಜಾರಿ, 43.5 ಕೆಜಿ ಆಹಾರ ಪದಾರ್ಥ ವಶ

ಮೈಸೂರು, ಜೂನ್,23,2026 (www.justkannada.in): ಜಿಲ್ಲಾಧಿಕಾರಿಗಳ ಸೂಚನೆಯಂತೆ ಮೈಸೂರು ನಗರ ಆಹಾರ ಸುರಕ್ಷತೆ...