13
August, 2026

A News 365Times Venture

13
Thursday
August, 2026

A News 365Times Venture

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ-ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಆಗಸ್ಟ್,12,2026 (www.justkannada.in):  ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ ವಲಯದಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಲೂಫ್ತಾನ್ಸಾ ಟೆಕ್ನಿಕ್ ಕಂಪನಿಯು ತನ್ನ ಕಾರ್ಯ ಚಟುವಟಿಕೆಗಳ ವಿಸ್ತರಣೆಗೆ ಮುಂದಾಗಿದ್ದು, ಬೆಂಗಳೂರನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ಹೊಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಬುಧವಾರ ತಮ್ಮನ್ನು ಇಲ್ಲಿನ ಖನಿಜ ಭವನದಲ್ಲಿ ಭೇಟಿಯಾಗಿದ್ದ ಕಂಪನಿಯ ಸಿಇಒ ಮಾರ್ಸೆಲ್ ಪಾಸ್ಟೂಸ್ಕ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಅವರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ಜರ್ಮನ್ ಡೆಪ್ಯುಟಿ ಕಾನ್ಸುಲ್ ಜನರಲ್ ಅನೆಟ್ ಬೇಸ್ಲರ್ ಕೂಡ ಇದ್ದರು.

ಈ ಬಗ್ಗೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಬೆಂಗಳೂರಿನಲ್ಲಿ ಇರುವ ವೈಮಾನಿಕ ಕ್ಷೇತ್ರದ ಸುಸ್ಥಿತಿ, ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತೆ ಹೊಂದಿರುವ ಅತ್ಯುತ್ತಮ ವಿಮಾನಸೇವೆ, ಕೌಶಲ್ಯ ಹೊಂದಿರುವ ಪ್ರತಿಭಾ ಸಂಪನ್ಮೂಲ, ಸಂಶೋಧನೆ ಮತ್ತು ಅಭಿವೃದ್ಧಿ, ಹೂಡಿಕೆಸ್ನೇಹಿ ನೀತಿಗಳು, ವಿಶ್ವ ದರ್ಜೆಯ ಎಂಜಿನಿಯರಿಂಗ್, ಏರೋಸ್ಪೇಸ್ ಮತ್ತು ರಕ್ಷಣಾ ಪರಿವ್ಯವಸ್ಥೆ ಇವುಗಳನ್ನು ಲೂಫ್ತಾನ್ಸಾ ಟೆಕ್ನಿಕ್ ನಿಯೋಗಕ್ಕೆ ಮನದಟ್ಟು ಮಾಡಿಕೊಡಲಾಗಿದೆ ಎಂದಿದ್ದಾರೆ.

ಕಂಪನಿಯ ಹೂಡಿಕೆ ಪ್ರಸ್ತಾವನೆಯನ್ನು ನಾವು ಸರಿಯಾಗಿ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಇನ್ವೆಸ್ಟ್ ಇಂಡಿಯಾ ಮುಂತಾದ ಉಪಕ್ರಮಗಳೊಂದಿಗೆ ಕೆಲಸ ಮಾಡಲಾಗುವುದು. ಇದು ಸಾಧ್ಯವಾದರೆ, ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ರಾಜ್ಯದ ಸ್ಥಾನವು ಮತ್ತಷ್ಟು ದೃಢವಾಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ನಿಯೋಗದಲ್ಲಿ ಕಂಪನಿಯ ಉನ್ನತಾಧಿಕಾರಿಗಳಾದ ಜೂಲಿಯಾ ಶ್ಮಿಟ್, ಫಿಲಿಪ್ ಜೆಸೆಲ್, ಜಯಂತ್ ಸಿಂಗ್ ಕೂಡ ಇದ್ದರು.

Key words: Lufthansa Technik, Bengaluru, Minister, M.B. Patil

The post ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ-ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ – ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಆಗಸ್ಟ್, 12,2026 (www.justkannada.in): ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ...

KPSC ಪರೀಕ್ಷಾ ನಿಯಂತ್ರಕರಾಗಿ ಪ್ರಸನ್ನ ಎಚ್. ಐಎಎಸ್‌ ಅವರಿಗೆ ಹೆಚ್ಚುವರಿ ಹೊಣೆ

ಬೆಂಗಳೂರು, ಆಗಸ್ಟ್, 12,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ...

80ನೇ ಸ್ವಾತಂತ್ರ್ಯೋತ್ಸವ: ಅಮೃತ ಸರೋವರಗಳಲ್ಲಿ ಮತ್ತೆ ಹಾರಲಿವೆ ತ್ರಿವರ್ಣ ಧ್ವಜ

ಮೈಸೂರು,ಆಗಸ್ಟ್,12,2026 (www.justkannada.in):  ದೇಶವೇ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಣೆಗೆ ಸಿದ್ಧತೆ ನಡೆಸಿರುವಂತೆ...

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ

ಬೆಂಗಳೂರು,ಆಗಸ್ಟ್,12,2026 (www.justkannada.in):  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ವಿರಾಜಪೇಟೆ ಶಾಸಕ .ಎಸ್ ಪೊನ್ನಣ್ಣ...