30
July, 2025

A News 365Times Venture

30
Wednesday
July, 2025

A News 365Times Venture

ಬೆಂಗಳೂರು ಅರಮನೆ ಜಮೀನು ವಿವಾದ: ರಾಜಮನೆತನಕ್ಕೆ TDR ನೀಡಲು ಸರ್ಕಾರಕ್ಕೆ ಸುಪ್ರೀಂ ಆದೇಶ

Date:

ಬೆಂಗಳೂರು, ಮೇ, 22,2025 (www.justkannada.in): ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಶಾಕ್ ನೀಡಿದ್ದು, ಬೆಂಗಳೂರು ಅರಮನೆಗೆ 3400 ಕೋಟಿ ಟಿಡಿಆರ್ ಅನ್ನು ರಾಜಮನೆತನಕ್ಕೆ ನೀಡಲು ಅದೇಶಿಸಿದೆ.

ಸುಪ್ರೀಂಕೋರ್ಟ್ ನ್ಯಾ. ಅರವಿಂದ್ ಕುಮಾರ್​ ನೇತೃತ್ವದ ದ್ವಿ ಸದಸ್ಯ ಪೀಠವು ಕೂಡಲೇ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಆದೇಶ ಹೊರಡಿಸಿದೆ.  ಒಂದು ವಾರದೊಳಗೆ ಟಿಡಿಆರ್ ಠೇವಣಿ ಇಡುವಂತೆ ರಾಜ್ಯ ಸರ್ಕಾರಕ್ಕೆ ಈ ಹಿಂದೆ ಸೂಚಿಸಲಾಗಿತ್ತು. ಅದರಂತೆ ಬರೋಬ್ಬರಿ 3400 ಕೋಟಿ ರೂ. ಮೊತ್ತದ ಟಿಡಿಆರ್​ ಅನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ ರಿಜಿಸ್ಟ್ರಾರ್​ನಲ್ಲಿ ಇಡಲಾಗಿತ್ತು. ಇದನ್ನು ರಾಜಮನೆತನದ ಪರ ವಕೀಲರು ವಿರೋಧಿಸಿದ್ದರು.ಈ ಟಿಡಿಆರ್​ಗಳನ್ನು ರಾಜಮನೆತನಕ್ಕೆ ನೀಡಬಾರದು ಎಂದು ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು.

ಇದೀಗ ಅಂತಿಮವಾಗಿ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸುಪ್ರೀಂಕೋರ್ಟ್​ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಬೆಂಗಳೂರು ಅರಮನೆ ಮೈದಾನದ ಬಳಿ ರಸ್ತೆ ಅಗಲೀಕರಣಕ್ಕಾಗಿ ಒಟ್ಟು 15.36 ಎಕರೆ ಜಮೀನು ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಉದ್ದೇಶಿಸಿತ್ತು. ಎಕರೆಗೆ 200 ಕೋಟಿ ರೂಪಾಯಿಯಂತೆ  3400 ಕೋಟಿ ಟಿಡಿಆರ್ ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಆದರೆ ಟಿಡಿಆರ್ ನೀಡಲು ಒಪ್ಪದ ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಹೂಡಿತ್ತು. ಹೀಗಾಗಿ ಸುಗ್ರೀವಾಜ್ಞೆ ಮತ್ತು ಪರಿಹಾರ ನೀಡದ್ದಕ್ಕೆ ರಾಜಮನೆತನ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

Key words: Bangalore Palace, land dispute, Supreme Court, government, TDR

The post ಬೆಂಗಳೂರು ಅರಮನೆ ಜಮೀನು ವಿವಾದ: ರಾಜಮನೆತನಕ್ಕೆ TDR ನೀಡಲು ಸರ್ಕಾರಕ್ಕೆ ಸುಪ್ರೀಂ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...