10
November, 2025

A News 365Times Venture

10
Monday
November, 2025

A News 365Times Venture

ಮಡಿವಾಳ ಮಾಚಿದೇವರಂತೆ ವೃತ್ತಿಯಲ್ಲಿ ಕಾಯಕ ನಿಷ್ಠೆ ಕಾಣಬೇಕು : ಬಿ.ಸಿ ಶಿವಾನಂದಮೂರ್ತಿ

Date:

ಮೈಸೂರು,ಫೆಬ್ರವರಿ,1,2025 (www.justkannada.in): ಮಡಿವಾಳ ವೃತ್ತಿಯಲ್ಲಿ ಕಾಯಕ ನಿಷ್ಠೆ ಕಂಡವರುವರು ಮಡಿವಾಳ ಮಾಚಿದೇವ ಎಂದರೆ ತಪ್ಪಾಗುವುದಿಲ್ಲ. ತಮ್ಮ ಕೆಲಸವನ್ನು ಅವರು ವೃತ್ತಿ ಎಂದು ಪರಿಗಣಿಸದೆ ದೇವರ ಕೆಲಸ ಎಂದು ಜನರ ಸೇವೆ ಮಾಡುತ್ತಿದರು. ಅವರ ಆಲೋಚನೆಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ. ಸಿ ಶಿವಾನಂದಮೂರ್ತಿ ಅವರು ಹೇಳಿದರು.

ಇಂದು ಕರ್ನಾಟಕ ಸಂಘದಲ್ಲಿ ಹಮ್ಮಿಕೊಳ್ಳಲ್ಲಾಗಿದ್ದ ಮಡಿವಾಳ ಮಾಚಿದೇವ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಅಂಟಿಕೊಂಡಿದ್ದ ಮೋಸ, ದರೋಡೆ, ವಂಚನೆಗಳಂತಹ ಅನಾಚಾರಗಳನ್ನು ಹೋಗಲಾಡಿಸಲು ದೃಢ ಸಂಕಲ್ಪ ತೊಟ್ಟಿ ನಿಂತ ದಾರ್ಶನಿಕ ವ್ಯಕ್ತಿ. ಸಮಾಜದ ಒಳಿತಿಗಾಗಿ ಶ್ರಮಿಸಿದ ಮಾಚಿದೇವ ಅವರ ಕೊಡುಗೆ ನಿಜಕ್ಕೂ ಅಪಾರವಾದದ್ದು ಎಂದರು.

ಉಪ ಪ್ರಾಂಶುಪಾಲರಾದ ಕೊತ್ತತ್ತಿ ರಾಜು ಅವರು ಮಡಿವಾಳ ಮಾಚಿದೇವ ಅವರ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿದರು.

ಸಮಾಜದಲ್ಲಿ ಹೀನಾಯವಾಗಿ ಕಾಣುತ್ತಿದ ಮಡಿವಾಳ ವೃತ್ತಿಗೆ ಘನತೆ, ಗೌರವ ತಂದು ಕೊಟ್ಟವರು ಮಡಿವಾಳ ಮಾಚಿದೇವ ಅವರು ಎಂದರೆ ತಪ್ಪಾಗಲಾರದು, ಅವರು ಬಟ್ಟೆಯನ್ನು ಮಾತ್ರ ಮಡಿ ಮಾಡಿದವರಲ್ಲ  ಸಮಾಜದಲ್ಲಿದ್ದ ಅನಾಚಾರಗಳನ್ನು ತೊಳೆದು ಸಮಾಜವನ್ನು ಮಡಿ ಮಾಡಿದವರು ಎಂದರು.

12 ನೇ ಶತಮಾನದ ವಚನಕಾರರಲ್ಲಿ ಒಬ್ಬರಾದ ಇವರು ವೇದಾ ಪುರಾಣ, ಪರಾಂಗತ, ಸಾಹಿತ್ಯ, ಸಂಸ್ಕೃತಿ, ಬರವಣಿಗೆಗಳಲ್ಲಿ ಅನೇಕ ಕೊಡುಗೆ ನೀಡಿದ್ದಾರೆ. ನಿಜಕ್ಕೂ ಇವರ ಕೊಡುಗೆ ಅಪಾರವಾದದ್ದು ಇಂದಿನ ಯುವ ಪೀಳಿಗೆಗೆ ಇವರ ವಚನಗಳನ್ನು ಓದುವಂತೆ ನಾವೆಲ್ಲ ಒಟ್ಟುಗೂಡಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಸಮುದಾಯದಲ್ಲಿ ಸಾಧನೆ ಗೈದಿರುವ ಹಾಗೂ ಸಮಾಜ ಸೇವೆ ಮಾಡಿರುವಂತಹ ಗಣ್ಯವ್ಯಕ್ತಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಡಿವಾಳ ಸಂಘದ ಅಧ್ಯಕ್ಷ ಎಂಎನ್  ರವಿ, ನಗರ ಸಭಾ ಅಧ್ಯಕ್ಷ ನಾಗೇಶ್, ಮಾಜಿ ನಗರ ಸಭೆ ಸದಸ್ಯೆ ಪದ್ಮ ನವೀನ್, ವೃತ್ತಿ ಅರೋಗ್ಯ ನಿರೀಕ್ಷಕರಾದ ಗೋವಿಂದ ಮತ್ತು ಮಡಿವಾಳ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Key words: profession, Loyalty, Madiwala Machideva Jayanthi, B.C. Shivanandamurthy

The post ಮಡಿವಾಳ ಮಾಚಿದೇವರಂತೆ ವೃತ್ತಿಯಲ್ಲಿ ಕಾಯಕ ನಿಷ್ಠೆ ಕಾಣಬೇಕು : ಬಿ.ಸಿ ಶಿವಾನಂದಮೂರ್ತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...