25
August, 2026

A News 365Times Venture

25
Tuesday
August, 2026

A News 365Times Venture

ಮಲೇ ಮಹದೇಶ್ವರ ಬೆಟ್ಟದಲ್ಲಿ 3 ದಿನ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ

Date:

ಚಾಮರಾಜನಗರ,ಏಪ್ರಿಲ್,21,2025 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ  ಏಪ್ರಿಲ್ 24 ರಂದು ಕರ್ನಾಟಕ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮಲೇ ಮಹದೇಶ್ವರ ಬೆಟ್ಟದಲ್ಲಿ 3 ದಿನ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ.

ಏಪ್ರಿಲ್ 22 ರಿಂದ ಏಪ್ರಿಲ್ 24 ರ ವರೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ವಾಸ್ತವ್ಯಕ್ಕೆ ನಿಷೇಧ ಹೇರಲಾಗಿದೆ. ಈ ಕುರಿತು ಮಲೆ ಮಹದೇಶ್ವರ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಭಕ್ತರಲ್ಲಿ ಗೊಂದಲ ಮೂಡದೆ ಇರಲಿ ಎಂದು ಮುಂಚಿತವಾಗಿಯೇ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಸಚಿವ ಸಂಪುಟ ಸಭೆ ಹಿನ್ನಲೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಮೂರು ದಿನಗಳ ಕಾಲ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ.  ಭಕ್ತರು ಸಹಕಾರ ನೀಡಬೇಕು ಎಂದು ಕಾರ್ಯದರ್ಶಿ ರಘು ಮನವಿ ಮಾಡಿದ್ದಾರೆ.

ಹಿಂದೆ ಹಲವು ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿತ್ತು. ಆದರೆ ಪ್ರತಿ ಬಾರಿಯೂ ಕೊನೆ ಕ್ಷಣದಲ್ಲಿ ಅಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದಾಗುತ್ತಿತ್ತು. ಇದೀಗ ಏ.24ಕ್ಕೆ  ಸಚಿವ ಸಂಪುಟ ಸಭೆ ನಿಗದಿಯಾಗಿದೆ.

Key words: Restriction, devotees, stay, Male Mahadeshwara hill, 3 days

The post ಮಲೇ ಮಹದೇಶ್ವರ ಬೆಟ್ಟದಲ್ಲಿ 3 ದಿನ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ...

ತಮಿಳುನಾಡಿಗೆ ಹರಿದ ಬರೊಬ್ಬರಿ 33 TMC ನೀರು: ಬರಿದಾದ ಕಾವೇರಿ ಜಲಾನಯನ ಪ್ರದೇಶಗಳು  

ಮೈಸೂರು,ಆಗಸ್ಟ್,25,2026 (www.justkannada.in):  ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮುಂಗಾರು ಮಳೆಯಾಗದ ಹಿನ್ನೆಲೆಯಲ್ಲಿ...

225 ಗ್ರೇಡ್-1 ಪಂಚಾಯತ್ ಕಾರ್ಯದರ್ಶಿಗಳಿಗೆ PDO ಹುದ್ದೆಗೆ ಬಡ್ತಿ: ಕೌನ್ಸಿಲಿಂಗ್

ಬೆಂಗಳೂರು,ಆಗಸ್ಟ್,25,2026 (www.justkannada.in): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹತ್ವದ ಬಡ್ತಿ...