5
March, 2026

A News 365Times Venture

5
Thursday
March, 2026

A News 365Times Venture

ಮಳೆ ಆರ್ಭಟ, ಜಲಪ್ರವಾಹ ಭೂಕುಸಿತ ಆತಂಕ :ಕೊಡಗಿನಲ್ಲಿ ಬೀಡುಬಿಟ್ಟ NDRF ತಂಡ

Date:

ಕೊಡಗು,ಮೇ,29,2025 (www.justkannada.in):  ರಾಜ್ಯದಲ್ಲಿ ಬಿರುಗಾಳಿ ಸಹಿತ ಪೂರ್ವ ಮುಂಗಾರು ಅಬ್ಬರಿಸುತ್ತಿದ್ದು, ಕೊಡಗಿನಲ್ಲಿ ಮಳೆಯ ಅರ್ಭಟ ಹೆಚ್ಚಾಗಿದೆ.  ಈ ಹಿನ್ನೆಲೆಯಲ್ಲಿ ಜನರಲ್ಲಿ ಜಲಪ್ರವಾಹ ಭೂಕುಸಿತ ಆತಂಕ ಎದುರಾಗಿದೆ.

ಪೂರ್ವ ಮುಂಗಾರು ಜೋರಾಗಿರುವ ಹಿನ್ನೆಲೆಯಲ್ಲಿ ಮಳೆರಾಯನ ಅಬ್ಬರ ಹೆಚ್ಚಾಗಿದ್ದು ಕೊಡಗಿನಲ್ಲಿ 2018ರ ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಜಲಪ್ರವಾಹ ಭೂಕುಸಿತ ಆತಂಕ ಎದುರಾಗಿದೆ. ನದಿಯಲ್ಲಿ‌ ನೀರಿನ ಮಟ್ಟ ಹೆಚ್ಚಾಗಿದ್ದು ಜಲ  ಪ್ರವಾಹ, ಭೂ ಕುಸಿತ, ಇನ್ನಿತರ ಅನಾಹುತ ಆತಂಕ ಉಂಟಾಗಿದ್ದು ಹೀಗಾಗಿ ರಕ್ಷಣಾ ಕಾರ್ಯಾಚರಣೆಗಾಗಿ  ಜಿಲ್ಲೆಯಲ್ಲಿ  ಎನ್ ಡಿಆರ್ ಎಫ್ ತಂಡ ಬೀಡು ಬಿಟ್ಟಿದೆ.vtu

80 ಯೋಧರ ತಂಡ ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸಿದ್ದು ಈ ಮೂಲಕ ಕೊಡಗು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ವಹಿಸಿದೆ.  ಜನರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ವಿಪತ್ತ ನಿರ್ವಹಣಾ ಪಡೆ ಜಿಲ್ಲೆಗೆ ಆಗಮಿಸಿದೆ.  ಜಿಲ್ಲೆಯಲ್ಲಿ 25 ಇಂಚಿಗೂ ಅಧಿಕ ಮಳೆಯಾಗಿದ್ದು,  ಗಾಳಿ ಮಳೆಯ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೂ ಅಪಾರ ಹಾನಿಯಾಗಿದೆ.

2018, 2019 ಮತ್ತು 2020 ರಲ್ಲಿ ಜಿಲ್ಲೆಯಲ್ಲಿ ಭೂಕುಸಿತ ಹಾಗೂ ಪ್ರವಾಹದ ಅನಾಹುತಗಳ ಸಂಭವಿಸಿತ್ತು. ಇದೀಗ ಎನ್‌ಡಿಆರ್‌ಎಫ್ ವೃತ್ತ ನಿರೀಕ್ಷಕ ಹರಿಶ್ಚಂದ್ರ ಪಾಂಡೆ ನೇತೃತ್ವದಲ್ಲಿ ಮಡಿಕೇರಿಯ ಮೈತ್ರಿ ಸಭಾಂಗಣದಲ್ಲಿ ಎನ್ ಡಿಆರ್ ಎಫ್ ಯೋಧರು ಬೀಡು ಬಿಟ್ಟಿದ್ದಾರೆ.

Key words: Heavy rain, floods, NDRF team, Kodagu

The post ಮಳೆ ಆರ್ಭಟ, ಜಲಪ್ರವಾಹ ಭೂಕುಸಿತ ಆತಂಕ :ಕೊಡಗಿನಲ್ಲಿ ಬೀಡುಬಿಟ್ಟ NDRF ತಂಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...