15
April, 2026

A News 365Times Venture

15
Wednesday
April, 2026

A News 365Times Venture

ಮುಂದಿನ ಟಾರ್ಗೆಟ್ ನಾನೇ ಎಂದು ಪ್ರಚಾರ: ಸಿದ್ದರಾಮಯ್ಯ, ಡಿಕೆಶಿ ಜೊತೆ ಚರ್ಚೆ ಮಾಡ್ತೇನೆ- ಸಚಿವ ಜಮೀರ್

Date:

ಬೆಂಗಳೂರು,ಏಪ್ರಿಲ್,15,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಅಬ್ದುಲ್ ಜಬ್ಬಾರ್ ರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಅಮಾನತು ಮಾಡಲಾಗಿದ್ದು ಇತ್ತ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ಅವರನ್ನು ಬಿಡುಗಡೆಗೊಳಿಸಲಾಗಿದೆ. ಮುಂದಿನ ಟಾರ್ಗೆಟ್ ಸಚಿವ ಜಮೀರ್ ಅಹ್ಮದ್ ಖಾನ್ ಎಂಬ ಸುದ್ದಿ ಹರಡಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿದ್ದಾರೆ. ಮುಂದಿನ ಟಾರ್ಗೆಟ್ ನಾನೇ ಎಂದು ಮಾಧ್ಯಮಗಳಲ್ಲಿ ಬರುತ್ತಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿದ್ದೇನೆ.  ನಾಳೆ ಡಿಕೆ ಶಿವಕುಮಾರ್ ರನ್ನೂ ಕೂಡ ಭೇಟಿ ಮಾಡಿ ಚರ್ಚಿಸುತ್ತೇನೆ ಎಂದರು.

ಕೇರಳಕ್ಕೆ ನಾನು ಪಾರ್ಟಿ ಕೆಲಸ ಮಾಡುವುದಕ್ಕೆ ಹೋಗಿದ್ದು ಮೋಜು ಮಸ್ತಿ ಮಾಡುವುದಕ್ಕೆ ಕಳ್ಳಾಟ ಆಡಲು ಹೋಗಿರಲಿಲ್ಲ.  ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಹಾಲಿಡೇಸ್ ಹೋಗಿದ್ರೆ ತಪ್ಪು. ಹಗಲು ರಾತ್ರಿ ಬಿಸಿಲು  ಎನ್ನದೇ ಪಕ್ಷದ ಕೆಲಸ ಮಾಡಿದ್ದೇನೆ. ದಿನಕ್ಕೆ 350  ಕಿ.ಮೀ ಪ್ರಯಾಣಿಸಿ ಪ್ರಚಾರ ಮಾಡಿದ್ದೇನೆ ಹೈಕಮಾಂಡ್ ಕೊಟ್ಟ ಕೆಲಸ ಮಾಡಲು ತಾನೇ ನಾನು ಹೋಗಿದ್ದು ಏ.7ರವರೆಗೆ ಕೇರಳದಲ್ಲಿ ಇರುವುದಕ್ಕೆ ನನಗೆ ಹೇಳಿದ್ದರು. ಆದರೆ ಸಿಎಂ ಫೋನ್ ಮಾಡಿ ಪ್ರಚಾರ ಮಾಡು ಬಾ ಅಂದರು. ಅದಕ್ಕಾಗಿ ನಾನು ಬಾಗಲಕೋಟೆ ದಾವಣಗೆರೆಗೆ ಹೋಗಿದ್ದೆ ನನ್ನನ್ನು ಕರೆದಿದ್ದರೆ ಮತ್ತೆ ಪ್ರಚಾರಕ್ಕೆ ಹೋಗುತ್ತಿದ್ದೆ ಎಂದರು.

ಸಿಎಂ ರಾಜಕೀಯ  ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಮಾಡಿದ್ದರಿಂದ ನನಗೂ ಬೇಸರವಾಗಿದೆ ನಸೀರ್ ಅಹ್ಮದ್ ಕಾಂಗ್ರೆಸ್ ಪಾರ್ಟಿಯಲ್ಲಿ ತುಂಬಾ ಹಿರಿಯರು  ನಸೀರ್ ಅಹ್ಮದ್ ಗೆ ಸಮಾಧಾನ ಮಾಡಲು ಪ್ರಯತ್ನಿಸುತ್ತೇನೆ. ನಾನು ಬಹಳ ಸಣ್ಣವನು ನಾನು ಪಕ್ಷದ ಸೇವಕ ಯಾವತ್ತೂ ನಾನು ಜಾತಿ ರಾಜಕರಣ ಮಾಡಲ್ಲ. ಯಾರೂ ಕೂಡ ನನ್ನ ಹೆಸರು ಹೇಳಿ ಆರೋಪ ಮಾಡಿಲ್ಲ. ಇಂತವರು ತಪ್ಪು ಮಾಡಿದ್ದಾರೆ ಅಂತ ಹೆಸರು ಹೇಳಬೇಕಲ್ವಾ ಯಾರೂ ಹೆಸರು ಹೇಳದೆಯೇ ನನ್ನ ಮೇಲೆ ಹೇಳಿದರೆ ಹೇಗೆ?   ಎಂದು ಪ್ರಶ್ನಿಸಿದರು.

Key words: next target, discuss, Siddaramaiah, DK Shivakumar, Minister, Jameer

The post ಮುಂದಿನ ಟಾರ್ಗೆಟ್ ನಾನೇ ಎಂದು ಪ್ರಚಾರ: ಸಿದ್ದರಾಮಯ್ಯ, ಡಿಕೆಶಿ ಜೊತೆ ಚರ್ಚೆ ಮಾಡ್ತೇನೆ- ಸಚಿವ ಜಮೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆ: ವಿದ್ಯಾರ್ಥಿಗಳಿಗಾಗಿ ಉಚಿತ ತರಬೇತಿ ಕಾರ್ಯಾಗಾರ.

  ಮೈಸೂರು, ಏ.೧೫,೨೦೨೬: ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ...

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್,15,2026 (www.justkannada.in): ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಜನರಿಗೆ ಕುಡಿಯುವ...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವ...

ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅಪರಾಧಿ- ಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು,ಏಪ್ರಿಲ್,15,2026 (www.justkannada.in):  ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್...