10
March, 2026

A News 365Times Venture

10
Tuesday
March, 2026

A News 365Times Venture

ಮುಖ್ಯಮಂತ್ರಿ ಗಾದಿಗೇರಲು ಜೆಡಿಎಸ್‌ ಸಹಕಾರ ಕೋರಿದ್ರಾ ಜಾರಕಿಹೊಳಿ..?: ಜೆಡಿಎಸ್‌ ಶಾಸಕ ಜಿಟಿಡಿ ಅಚ್ಚರಿ ಹೇಳಿಕೆ.

Date:

ಮೈಸೂರು, ಮಾ.೨೭,೨೦೨೫: ಸಚಿವ ಸತೀಶ್ ಜಾರಕಿಹೊಳಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಲು ಸಹಕಾರ ಕೋರಿ ಮಾಜಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ ಎಂದು ಜೆಡಿಎಸ್‌ ರೆಬಲ್‌ ಶಾಸಕ ಜಿ.ಟಿ.ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ  ಶಾಸಕ ಜಿ.ಟಿ ದೇವೇಗೌಡ ಹೇಳಿದಿಷ್ಟು..

ಸಚಿವ ಸತೀಶ್‌ ಜಾರಕಿಹೊಳಿಗೆ ಮುಂದೆ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್ ಬೆಂಬಲ ಕೇಳಿರಬಹುದು. ಇರುವ 18 ಶಾಸಕರ ಬೆಂಬಲವನ್ನ ಸತೀಶ್ ಜಾರಕಿಹೊಳಿ ಕೇಳಿರಬಹುದು. ರಾಜಕಾರಣದಲ್ಲಿ ಏನುಬೇಕಾದರೂ ಆಗಬಹುದು. ಸದ್ಯದ ಪರಿಸ್ಥಿತಿ ನೋಡಿದ್ರೆ ಅವರು ಬೇರೆ ಕಾರಣಕ್ಕೆ ಕುಮಾರಸ್ವಾಮಿ ಅವರನ್ನ ಭೇಡಿ ಮಾಡಿಲ್ಲ. ಮಾಜಿ ಪ್ರಧಾನಿ, ಕೇಂದ್ರ ಸಚಿವರನ್ನ ಭೇಟಿ ಮಾಡಿದ್ದಾರೆ ಅಂದ್ರೆ ಅದಕ್ಕೆ ಇದೇ ಕಾರಣ.

ನಾನು ತಟಸ್ಥ:

ಒಂದು ವೇಳೆ ಜೆಡಿಎಸ್ ಸತೀಶ್ ಜಾರಕಿಹೊಳಿಗೆ ಬೆಂಬಲ ನೀಡಿದರೂ ನಾನು ತಟಸ್ಥನಾಗಿರುತ್ತೇನೆ. ಈ ವಿಚಾರದಲ್ಲಿ ಮಾತ್ರ ಅಲ್ಲ ನಾನು ತಟಸ್ಥ ತಟಸ್ಥ ತಟಸ್ಥ. ಮೈಸೂರಿನಲ್ಲಿ ಜೆಡಿಎಸ್ ಹಿರಿಯ ಶಾಸಕ ಜಿ.ಟಿ ದೇವೇಗೌಡ ಹೇಳಿಕೆ.

ಯತ್ನಾಳ್‌ ಉಚ್ಛಾಟನೆ:

ಬಸನಗೌಡ ಯತ್ನಾಳ್ ಉಚ್ಚಾಟನೆ ವಿಚಾರ. ಅದು ಬಿಜೆಪಿಯ ಆಂತರಿಕ ವಿಚಾರ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಈ ಹಿಂದೆ ಅವರ ಬಗ್ಗೆ ಮಾತನಾಡಿದ್ದೆ. ಆಗ ಅವರೇ ಪೋನ್ ಮಾಡಿ ಮಾತನಾಡಿ ಸರಿ ಮಾಡಿಕೊಂಡರು. ಈಗ ನಮ್ಮ ಮಧ್ಯೆ ಏನೂ ಇಲ್ಲ. ಮೇಲಾಗಿ ಇದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಮುಂದೆ ಇನ್ನೂ ಏನೇನು ಬೆಳವಣಿಗೆ ನಡೆಯುತ್ತೆ ಕಾದು ನೋಡೋಣ.

ಹನಿಟ್ರ್ಯಾಪ್ ವಿಚಾರ:

ಈ ಬಗ್ಗೆ ಸದನದಲ್ಲಿ ಸುನಿಲ್ ಕುಮಾರ್, ರಾಜಣ್ಣ ಮಾತನಾಡಿದ್ದಾರೆ. ಕರ್ನಾಟಕ ರಾಜಕಾರಣಕ್ಕೆ ಇತಿಹಾಸ ಇದೆ. ಇತ್ತೀಚಿನ ದಿನಗಳ ಘಟನೆ ನೋಡಿದ್ರೆ ಪ್ರಜಾಪ್ರಭುತ್ವ ವೇಗವಾಗಿ ಬೆಳೆಯುತ್ತಿದೆ. ಶಾಸಕ ಜಿಟಿ ದೇವೇಗೌಡ ವ್ಯಂಗ್ಯ. ಸದನದಲ್ಲಿ ರಾಜ್ಯದ ಅಭಿವೃದ್ಧಿ ವಿಚಾರ ಚರ್ಚೆ ಆಗಬೇಕಿತ್ತು. ಕೇವಲ ಗಲಾಟೆ ಗದ್ದಲದಲ್ಲೇ ಸದನ ಮುಗಿಯುತು. ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಬಜೆಟ್ ಮಂಡನೆ ಮಾಡಿದ್ರು ಅಂತ ಜನತೆಗೆ ಗೊತ್ತಾಗಲೇ ಇಲ್ಲ. ಅಭಿವೃದ್ಧಿ ವಿಚಾರ ಚರ್ಚೆ ಆಗಿದ್ರೆ ಜನ ಖುಷಿ ಪಡ್ತಿದ್ರು. ಹನಿಟ್ರ್ಯಾಪ್ ಯಾಕೆ ಆಯ್ತು ಏನು ಎಂಬುದನ್ನ ತನಿಖೆ ಮಾಡಬೇಕು. ತನಿಖೆ ಮಾಡಿದಾಗಲೇ ಎಲ್ಲವು ತಿಳಿಯುತ್ತದೆ. ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಹೇಳಿಕೆ.

key words: Sathish Jarkiholi, JDS, chief minister, MLA GTD,Mysore

SUMMARY:

Has Jarkiholi sought JD(S)’s cooperation to become chief minister? : JD(S) MLA GTD makes a surprising statement.

The post ಮುಖ್ಯಮಂತ್ರಿ ಗಾದಿಗೇರಲು ಜೆಡಿಎಸ್‌ ಸಹಕಾರ ಕೋರಿದ್ರಾ ಜಾರಕಿಹೊಳಿ..?: ಜೆಡಿಎಸ್‌ ಶಾಸಕ ಜಿಟಿಡಿ ಅಚ್ಚರಿ ಹೇಳಿಕೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...