3
March, 2026

A News 365Times Venture

3
Tuesday
March, 2026

A News 365Times Venture

ಮುಸ್ಲೀಂ ವೇಷದಲ್ಲಿ RSS ಕಾರ್ಯಕರ್ತರಿಂದ ಗಲಭೆ : ಎಂ.ಲಕ್ಷ್ಮಣ್

Date:

ಮೈಸೂರು,ಫೆಬ್ರವರಿ,11,2024 (www.justkannada.in):  ನಿನ್ನೆ ಉದಯಗಿರಿಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಮುಸ್ಲೀಂ ವೇಷದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರು ಗಲಭೆ ನಡೆಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್,  ಕೋಮು ಗಲಭೆ ಸೃಷ್ಟಿಸುವ ಉದ್ದೇಶದಿಂದ ಬಿಜೆಪಿ ಮತ್ತು ಆರ್.ಎಸ್.ಎಸ್   ಕಾರ್ಯಕರ್ತರನಾಗಿರುವ ಸತೀಶ್ ಅಲಿಯಾಸ್ ಪಾಂಡುರಂಗ ಎಂಬುವನು ರಾಹುಲ್‌ ಗಾಂಧಿ, ಅಖಿಲೇಶ್ ಯಾದವ್, ಅರವಿಂದ ರೀಜ್ರವಾಲ್ ರವರ ಚಿತ್ರಗಳನ್ನು ಆಶ್ಲೀಲವಾಗಿ ಬಿಂಬಿಸಿ ಆಕ್ಷೇಪರ್ಹ ಬರವಣಿಗೆಗಳನ್ನು ಬರೆದು ಪೋಸ್ಟ್ ಮಾಡಿರುವುದಲ್ಲದೆ ಮುಸ್ಲಿಂ ಸಮುದಾಯದ ಧರ್ಮ ಗುರುಗಳ ಬಗ್ಗೆಯೂ ಆಶ್ಲೀಲ ಮತ್ತು ಆಕ್ಷೇಪವಾದ ಚಿತ್ರಗಳನ್ನು ಹಾಕಿದ್ದಾನೆ. ಇದರ ರಾಜಕೀಯ ಲಾಭ ಪಡೆಯಲು ಬಿಜೆಪಿ ಆರ್ ಎಸ್ ಎಸ್ ನ ಹುನ್ನಾರ ಇದು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ದೂರು ಸಲ್ಲಿಸಿದ ನಂತರ ಮಾತನಾಡಿದ ಎಂ.ಲಕ್ಷ್ಮಣ್,  ಆರ್ ಎಸ್ ಎಸ್ ನವರು  ಒಂದುವರೆ ವರ್ಷದಿಂದ ನಿರಂತರ ತೊಂದರೆ ನೀಡುತ್ತಿದ್ದಾರೆ. ಸಣ್ಣ ಸಣ್ಣ ವಿಷಯಗಳನ್ನು ಬೀದಿಗೆ ತಂದು ದೊಡ್ಡದು ಮಾಡುತ್ತೀದ್ದಾರೆ. ಸಿಎಂ ತವರಲ್ಲಿ ಗಲಭೆ ಹಬ್ಬಿಸಬೇಕೆಂದು ಬಿಜೆಪಿ, ಆರ್ ಎಸ್ ಎಸ್ ನಿಂದ ಹುನ್ನಾರ ನಡೆಯುತ್ತಿದೆ. ಅದಕ್ಕಾಗಿ 300 ಮಂದಿ ಆರ್ ಎಸ್ ಎಸ್ ಕಾರ್ಯಕರ್ತರು ವೇಷಧಾರಿಗಳಾಗಿ ಮೈಸೂರಿಗೆ ಆಗಮಿಸಿದ್ದಾರೆ. ನಿನ್ನೆ ನಡೆದ ಗಲಾಟೆಯಲ್ಲಿ 50 ಮಂದಿ ಆರ್ ಎಸ್ ಎಸ್ ನವರಿದ್ದರು ಎನ್ನುವ ಮಾಹಿತಿ ಇದೆ. ಗಲಾಟೆ ತೀವ್ರಗೊಳಿಸಲು ಮಾಜಿ ಸಂಸದ ಪ್ರತಾಪ್ ಪ್ರಯತ್ನ ಮಾಡುತ್ತಿದ್ದಾರೆ. ಹೀಗೆ ಪ್ರಚೋದನೆ ನಡೆಸುತ್ತಿರುವ ಪ್ರತಾಪ್ ಸಿಂಹ ಅರೆಸ್ಟ್ ಆಗಬೇಕು. ನಮ್ಮ ನಾಯಕರ ಭಾವಚಿತ್ರಕ್ಕೆ ಅಪಮಾನ ಮಾಡಿ ಸಿಎಂ ಮೇಲೆ ಆರೋಪ ಮಾಡುವ ಕೆಲಸ ಮಾಡುತ್ತಿದ್ದಾರೆ. ಬಂಧಿತ ಆರ್ ಎಸ್ ಎಸ್ ಮೂಲದವನು ಹಾಗೂ ಪ್ರತಾಪ್ ಸಿಂಹ ಭಂಟ ಈ ಪ್ರಕರಣದ ರೂವಾರಿ ಪ್ರತಾಪ್ ಸಿಂಹ ಮೈಸೂರು ಬಿಟ್ಟು ಎಸ್ಕೇಪ್ ಆಗುವ ಮುಂಚೆ ಅರೆಸ್ಟ್ ಆಗಬೇಕು ಎಂದು ಆಗ್ರಹಿಸಿದ್ದಾರೆ.

Key words: Udayagiri Riots, RSS workers, Muslims, M. Laxman

The post ಮುಸ್ಲೀಂ ವೇಷದಲ್ಲಿ RSS ಕಾರ್ಯಕರ್ತರಿಂದ ಗಲಭೆ : ಎಂ.ಲಕ್ಷ್ಮಣ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖಮನೈ ಹತ್ಯೆ ಖಂಡಿಸಿ ಪ್ರತಿಭಟನೆ ವಿಚಾರ: ತಪ್ಪಾಗಿದ್ರೆ ಪರಿಶೀಲಿಸಿ ಕ್ರಮ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,3,2026 (www.justkannada.in): ಇರಾನ್ ಸರ್ವೋಚ್ಚ ನಾಯಕ ಖಮನೈ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ...

ಒಳಮೀಸಲಾತಿ ಅನುಷ್ಠಾನಕ್ಕೆ ಎಲ್ಲಾ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ- ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು,ಮಾರ್ಚ್,2,2026 (www.justkannada.in): ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ...

ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in):  ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ...

ಯುದ್ಧ ಸಂಪೂರ್ಣ ನಿಲ್ಲುವವರೆಗೂ ಎಲ್ಲರನ್ನ ಅಲ್ಲಿಂದ ಕರೆಸುವುದು ಕಷ್ಟ- ಕೇಂದ್ರ ಸಚಿವ HDK

ಮೈಸೂರು ,ಮಾರ್ಚ್,2,2026 (www.justkannada.in): ಇರಾನ್- ಇಸ್ರೇಲ್ ನಡುವೆ ಸಂಘರ್ಷ ಕನ್ನಡಿಗರು ಸಿಲುಕಿರುವ...