30
July, 2025

A News 365Times Venture

30
Wednesday
July, 2025

A News 365Times Venture

ಮೇ 22 ರಂದು ಉಚಿತ ಸಾಮೂಹಿಕ ವಿವಾಹ: ಅರ್ಹ ಜೋಡಿಗಳು ನೋಂದಾಯಿಸಿಕೊಳ್ಳಿ – ಡಾ ಪಿ. ಶಿವರಾಜು

Date:

ಮೈಸೂರು,ಮೇ.13,2025 (www.justkannada.in): ಮೇ 22 ರಂದು ಉಚಿತ ಸಾಮೂಹಿಕ ವಿವಾಹವನ್ನು ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದು, ಅರ್ಹ ಜೋಡಿಗಳು ಉಚಿತ ಸಾಮೂಹಿಕ ವಿವಾಹಕ್ಕೆ ಮೇ 15 ರೊಳಗೆ ನೋಂದಾಯಿಸಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾಂಗಲ್ಯ ಭಾಗ್ಯ ಯೋಜನೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರಳ ಹಾಗೂ ಸಾಮೂಹಿಕ ವಿವಾಹದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆಡಂಬರ ರಹಿತವಾಗಿ ಉಚಿತ ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹವನ್ನು ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ನಡೆಸಲು ತೀರ್ಮಾನಿಸಲಾಗಿರುವುದರಿಂದ ಈ ಯೋಜನೆಯನ್ನು ಹೆಚ್ಚು ಹೆಚ್ಚು ಜನರು ಉಪಯೋಗಿಸಿಕೊಳ್ಳಬೇಕೆಂದು ಹೇಳಿದರು.

ವಧುವಿಗೆ ಚಿನ್ನದ ತಾಳಿ ಮತ್ತು ಎರಡು ಚಿನ್ನದ ಗುಂಡು(ಅಂದಾಜು 8 ಗ್ರಾಂ ತೂಕ)ನೀಡಲಾಗುತ್ತದೆ. ಈ ಯೋಜನೆಯಡಿ ವಿವಾಹವಾಗಲು ಬಯಸುವವರು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯ, ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ, ತಲಕಾಡಿನ ವೈದ್ಯನಾಥೇಶ್ವರಸ್ವಾಮಿ ಹಾಗೂ ಸಮೂಹ ದೇವಾಲಯಗಳು, ಜಿಲ್ಲಾಧಿಕಾರಿಗಳ ಕಚೇರಿಯ ಧಾರ್ಮಿಕ ದತ್ತಿ ತಹಶೀಲ್ದಾರ್ ಕಛೇರಿ, ಅರಮನೆ ಮುಜರಾಯಿ ದೇವಾಲಯಗಳ ವ್ಯವಸ್ಥಾಪಕರ ಬಳಿ ಹಾಗೂ ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕು ತಹಶೀಲ್ದಾರ್ ರವರ ಕಚೇರಿಯಲ್ಲಿ ಅರ್ಜಿಯನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಅರ್ಜಿ ಪಡೆದ ವಧುವರರು ಅಗತ್ಯ ದಾಖಲೆಗಳನ್ನು ನೋಂದಾಯಿಸಿಕೊಳ್ಳಬೇಕು. ವಧು-ವರರ ತಂದೆ ತಾಯಿಯವರು ವಿವಾಹಕ್ಕೆ ಒಪ್ಪಿ ವಿವಾಹ ದಿನದಂದು ಉಪಸ್ಥಿತರಿರಬೇಕು, ಜೊತೆಗೆ ವರನ ಸಾಕ್ಷಿದಾರರು ಇದ್ದಲ್ಲಿ ಮಾತ್ರ ವಿವಾಹವನ್ನು ನಡೆಸಲಾಗುವುದು. ತಂದೆ ತಾಯಿ ನಿಧನರಾಗಿದ್ದಲ್ಲಿ ಅವರ ವಾರಸುದಾರರರ ಸಂಪೂರ್ಣ ಒಪ್ಪಿಗೆ ಇದ್ದು ಅವರ ವಿವಾಹ ದಿನದಂದು ಕಡ್ಡಾಯವಾಗಿ ಹಾಜರಿರಬೇಕು ಹಾಗೂ ತಂದೆ ತಾಯಿ ನಿಧನದ ಬಗ್ಗೆ ಕಡ್ಡಾಯವಾಗಿ ಮರಣ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕೆಂದು ಎಂದರು.

ಸರ್ಕಾರದ ನಿಯಮದಂತೆ ವರನಿಗೆ ಕನಿಷ್ಠ 21 ವರ್ಷ ವಧುವಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಮೊದಲನೇ ಮದುವೆಗೆ ಮಾತ್ರ ಅವಕಾಶವಿದ್ದು, ಎರಡನೇ ಮದುವೆಗೆ ಅವಕಾಶವಿರುವುದಿಲ್ಲ. ಅಂತರ್ಜಾತಿಯವರಾಗಿದ್ದರೆ ಧೃಢೀಕೃತ ಜಾತಿ ಪ್ರಮಾಣವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು ಎಂದು ಹೇಳಿದರು.

ವಧುವರರ ಕಡೆಯಿಂದ ಕಡ್ಡಾಯವಾಗಿ ಯಾವುದೇ ವರದಕ್ಷಿಣೆಯನ್ನು ಪಡೆಯುವಂತಿಲ್ಲ, ಸಾರ್ವಜನಿಕರಿಂದ ಯಾವುದೇ ದೂರು ಬಂದಲ್ಲಿ ಅಂತಹ ವಿವಾಹವಾಗುವ ವಧುವರರ ಬಗ್ಗೆ ಪುನರ್ ಪರಿಶೀಲಿಸಲಾಗುತ್ತದೆ ಹಾಗೂ ವಿವಾಹಕ್ಕೆ ಸಲ್ಲಿಸಿದ ದಾಖಲೆಗಳು ಸುಳ್ಳು ದಾಖಲೆಗಳೆಂದು ಧೃಡಪಟ್ಟಲ್ಲಿ ಅಂತಹವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈ ಸಭೆಯಲ್ಲಿ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಯಲಯ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಹರೀಶ್ ಟಿ.ಕೆ. ಅವರು ಸೇರಿದಂತೆ ತಹಶೀಲ್ದಾರರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Free, mass marriage, May 22, Eligible couples, Dr P. Shivaraju

The post ಮೇ 22 ರಂದು ಉಚಿತ ಸಾಮೂಹಿಕ ವಿವಾಹ: ಅರ್ಹ ಜೋಡಿಗಳು ನೋಂದಾಯಿಸಿಕೊಳ್ಳಿ – ಡಾ ಪಿ. ಶಿವರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...