30
April, 2026

A News 365Times Venture

30
Thursday
April, 2026

A News 365Times Venture

ಮೈಸೂರಿನ ಬನ್ನಿ ಮಂಟಪದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಅಸ್ತು.

Date:

ಮೈಸೂರು,ಮಾರ್ಚ್,3,2025 (www.justkannada.in):  ಮೈಸೂರಿನ ಬನ್ನಿ ಮಂಟಪದಲ್ಲಿ ಹೈಟೆಕ್ ಬಸ್ ನಿಲ್ದಾಣ ತಲೆ ಎತ್ತಲಿದ್ದು,  ಸುಮಾರು 127 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಅಸ್ತು ಎಂದಿದೆ.

ನಗರದ ಸಬರ್ಬನ್ ನಿಲ್ದಾಣದಿಂದ ವಾಹನ ದಟ್ಟನೆ ನಿಯಂತ್ರಣಕ್ಕೆ ಹೊಸ ಯೋಜನೆ ರೂಪಿಸಿದೆ.  ಸಬರ್ಬನ್ ನಿಲ್ದಾಣದಲ್ಲಿ ಪ್ರತಿನಿತ್ಯ  2700 ಕ್ಕೂ ಹೆಚ್ಚು ಬಸ್ ಗಳು ಸಂಚರಿಸುತ್ತವೆ. ಸ್ಥಳಾವಕಾಶದ ಕೊರತೆಯಿಂದಾಗಿ ಹೆಚ್ಚುವರಿ ಬಸ್ ನಿಲ್ದಾಣಕ್ಕೆ ಸರ್ಕಾರ ಮುಂದಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಏಪ್ರಿಲ್ ತಿಂಗಳಲ್ಲಿ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದೆ. ಇನ್ನೆರಡು ವರ್ಷಗಳಲ್ಲಿ ಹೊಸ ಬಸ್ ನಿಲ್ದಾಣ ಆಗಲಿದೆ.

ಬನ್ನಿಮಂಟಪದ 64 ಎಕರೆ ಪ್ರದೇಶದಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ 14 ಎಕರೆ ಪ್ರದೇಶದಲ್ಲಿ ಹೊಸ ಬಸ್ ನಿಲ್ದಾಣ ಕಟ್ಟಲಾಗುತ್ತದೆ ಗ್ರೌಂಡ್ ಫ್ಲೋರ್,ಸೇರಿದಂತೆ ಮೂರು ಹಂತಸ್ತಿನ ಕಟ್ಟಡ ನಿರ್ಮಾಣವಾಗಲಿದೆ. ಈಗಾಗಲೇ ಎಲ್ಲ ತಯಾರಿಗಳ ನಡೆದಿದೆ. ಸರ್ಕಾರದಿಂದ ಅನುದಾನ ಬಿಡುಗಡೆ ಆದ ತಕ್ಷಣ ಕೆಲಸ ಆರಂಭವಾಗಲಿದೆ ಎಂದು ಮೈಸೂರು ಗ್ರಾಮಾಂತರ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದರು.

ನಗರದ ಮಧ್ಯ ಭಾಗದಲ್ಲಿರುವ ಸಬರ್ಬನ್ ನಿಲ್ದಾಣವನ್ನ ಯಾವುದೇ ಕಾರಣಕ್ಕೂ ಸಂಪೂರ್ಣವಾಗಿ ಸ್ಥಳಾಂತರ ಮಾಡುವುದಿಲ್ಲ. ಕೇವಲ ಅಂತರ ರಾಜ್ಯ ಬಸ್ ಗಳನ್ನ ಅಲ್ಲಿಂದ ಕಾರ್ಯಾಚರಣೆ ಮಾಡಲಾಗುತ್ತದೆ. ಮೈಸೂರು,ಮಂಡ್ಯ, ಚಾಮರಾಜನಗರ, ಹಾಸನ ಭಾಗದ ಎಲ್ಲಾ ಬಸ್ ಗಳ ಸಂಚಾರ ಅಲ್ಲೇ ಇರುತ್ತದೆ. ಜನ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

Key words: government, build , high-tech bus stand, Mysore.

The post ಮೈಸೂರಿನ ಬನ್ನಿ ಮಂಟಪದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಅಸ್ತು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....