21
February, 2026

A News 365Times Venture

21
Saturday
February, 2026

A News 365Times Venture

ಮೈಸೂರು ಅರಣ್ಯ ಭವನಕ್ಕೆ ರೈತಮುಖಂಡರಿಂದ ಮುತ್ತಿಗೆ

Date:

ಮೈಸೂರು,ಫೆಬ್ರವರಿ,19,2026 (www.justkannada.in): ವಿರೋಧದ ನಡುವೆಯೂ ಇಂದಿನಿಂದಲೇ ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಆರಂಭ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ರೈತಸಂಘದಿಂದ ಪ್ರತಿಭಟನೆಗಳಿಗೆ ಕರೆ ನೀಡಿದ್ದು ಇಂದು ರೈತ ಮುಖಂಡರು ಮೈಸೂರಿನ ಅರಣ್ಯ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಸಫಾರಿ ಆರಂಭ ವಿರೋಧಿಸಿ ಮೈಸೂರಿನಲ್ಲಿ ರೈತನಾಯಕ ಹೊನ್ನೂರು ಪ್ರಕಾಶ್, ಮಂಜು ಕಿರಣ್ ಹೋರಾಟದ ಕರೆ ನೀಡಿದ್ದು  ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿಯೂ ಹೋರಾಟ ನಡೆಸಲಾಗುತ್ತಿದೆ.

ಇಂದು ರೈತ ಮುಖಂಡ ಹಳ್ಳಿಕೆರೆ ಭಾಗ್ಯರಾಜ್ ನೇತೃತ್ವದಲ್ಲಿ ರೈತಮುಖಂಡರು  ಮೈಸೂರು ಅರಣ್ಯ ಭವನ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಸಫಾರಿ ಪಾಯಿಂಟ್ ಬಳಿಯೂ ಧರಣಿ ನಡೆಸಲಾಗಿದೆ.

ಕಾಡಿನ ಬದಲು ಕಾಸನ್ನು ಕಾಪಾಡಿದ ಕಾಡುಮಂತ್ರಿ ಎಂದು ರೈತಮುಖಂಡರು ಕಿಡಿ ಕಾರಿದ್ದು,  ಎಷ್ಟು ಜನ ರೈತರ ಪ್ರಾಣ ಬೇಕು ನಿಮಗೆ ? ಅಕ್ರಮ ರೆಸಾರ್ಟ್ಸ್ ಮಾಲೀಕರ ಹಣ ತಿಂದು ರೈತರ ಬಲಿ ಕೊಡ್ತೀರಾ? ರೆಸಾರ್ಟ್ಸ್ ಮಾಲೀಕರ ಕಾಸು ತಿಂದು ರೈತರ ಜೊತೆ ಆಟ ಆಡ್ತೀರಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಫಾರಿ ಆರಂಭಿಸಿದರೆ ಬೀದಿಗಿಳಿದು ಹೋರಾಟ ಮಾಡುವುದು ಗ್ಯಾರೆಂಟಿ.  ಸಫಾರಿಯಿಂದ ಹಲವು ರೈತರ ಪ್ರಾಣ ಹಾನಿ ಆಗಿದೆ. ಸಫಾರಿ ನಿಂತ ಮೇಲೆ ಹುಲಿ ದಾಳಿ ನಿಂತಿದೆ ಎಂದು ರೈತಮುಖಂಡರು ಹರಿಹಾಯ್ದಿದ್ದಾರೆ.

Key words: Mysore, Aranya Bhavan, besieged, farmer leaders

The post ಮೈಸೂರು ಅರಣ್ಯ ಭವನಕ್ಕೆ ರೈತಮುಖಂಡರಿಂದ ಮುತ್ತಿಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...

ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು, ಫೆಬ್ರವರಿ ,21,2026 (www.justkannada.in):  ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ...

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು,ಫೆಬ್ರವರಿ,21,2026 (www.justkannada.in):  ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು,...

CS ಶಾಲಿನಿ ರಜನೀಶ್ ಬಳಿ ಕ್ಷಮೆಯಾಚಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು,ಫೆಬ್ರವರಿ,21,2026 (www.justkannada.in):  ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ದ ಮುಂಬಡ್ತಿ...