14
February, 2026

A News 365Times Venture

14
Saturday
February, 2026

A News 365Times Venture

ಮೈಸೂರು ಪೊಲೀಸರ ಕಾರ್ಯಾಚರಣೆ: 4 ಲಕ್ಷ ಮೌಲ್ಯದ ಮಾದಕ ವಸ್ತು ವಶ: ಆರೋಪಿ ಬಂಧನ

Date:

ಮೈಸೂರು,ಫೆಬ್ರವರಿ,14,2026 (www.justkannada.in): ಮೈಸೂರು ನಗರದಲ್ಲಿ ಅಕ್ರಮ ಮಾದಕ ವಸ್ತು ಮಾರಾಟ ಮತ್ತು ಸಾಗಾಟದ ಮೇಲೆ  ಮಂಡಿ ಠಾಣಾ ಪೊಲೀಸರಿಂದ ಕಾರ್ಯಾಚರಣೆ ಮುಂದುವರೆದಿದ್ದು, ದಾಳಿ ನಡೆಸಿ 4 ಲಕ್ಷ ಮೌಲ್ಯದ 41.31 ಗ್ರಾಂ ಮಾದಕ ವಸ್ತು ಎಂ.ಡಿ.ಎಂ.ಎ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಮೈಸೂರು ನಗರದ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಅಕ್ರಮ ಮಾದಕ ವಸ್ತು ಮಾರಾಟ ಮತ್ತು ಸಾಗಾಟದ ಮೇಲೆ ನಗರದ ಮಂಡಿ ಠಾಣಾ ಪೊಲೀಸರು ದಾಳಿ ನಡಸಿದ್ದು  ,  ಫೆ.11ರಂದು 3.14 ಗ್ರಾಂ ಎಂಡಿಎಂಎ ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಆರೋಪಿಗಳಾದ ಎಂ. ಮೊಹಮ್ಮದ್ ಕರೀಂ, ಎ2. ನಿಷಾದ್‌ ಪಾಷ  ಬಂಧಿಸಿದ್ದರು. ಮೊ.ಸಂ 31/2026 ಕಲಂ: 22(ಬಿ) ಎನ್.ಡಿ.ಪಿ.ಎಸ್ ರೀತ್ಯಾ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಉಳಿದ ಆರೋಪಿಗಳ ದಸ್ತಗಿರಿಗೆ ಕ್ರಮ ಕೈಗೊಂಡು ಕಾರ್ಯಾಚರಣೆ ಮುಂದುವರೆಸಿದ್ದರು.

ಇದೀಗ ಮೊ.ಸಂ 31/2026 ರ 2ನೇ ಆರೋಪಿ ನಿಷಾದ್ ಪಾಷ ಎಂಬಾತನಿಗೆ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ರೋಷನ್ ಎಂಬಾತನನ್ನು ಬಂಧಿಸಿದ್ದು ಬಂಧಿತನಿಂದ 4 ಲಕ್ಷ ರೂ ಮೌಲ್ಯದ 41.31 ಗ್ರಾಂ ಎಂ.ಡಿ.ಎಂ.ಎ ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಕ್ರಮ ಕೈಗೊಂಡಿದ್ದಾರೆ.

ಆರೋಪಿ ಮೊಹಮ್ಮದ್ ರೋಷನ್ ಈತನ ಮೇಲೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಮೊ.ಸಂ 194/2024 ಕಲಂ: 22(ಸಿ) ರೀತ್ಯಾ ಎನ್.ಡಿ.ಪಿ.ಎಸ್ ಪ್ರಕರಣಗಳು ದಾಖಲಾಗಿದೆ ಹಾಗೂ ಆರೋಪಿ ಮೊಹಮ್ಮದ್ ರೋಷನ್ ಇನ್ಸ್ ಸ್ಟಾಗ್ರಾಂ ಮೂಲಕ ಅಪರಿಚಿತ ವ್ಯಕ್ತಿಯಿಂದ ಎಂ.ಡಿ.ಎಂ.ಎನ್ನು ಬೆಂಗಳೂರು ನಗರದಲ್ಲಿ ಪಡೆದು ನಂತರ ಅದನ್ನು ಮೈಸೂರಿನಲ್ಲಿ ಮಾರಾಟ ಮಾಡುತ್ತಿದ್ದುದು ತನಿಖೆಯಿಂದ ತಿಳಿದುಬಂದಿದೆ.

ಈ ಕಾರ್ಯಾಚರಣೆಯಲ್ಲಿ ಮಂಡಿ ಪೊಲೀಸ್ ಠಾಣಾ ಇನ್ಸ್‌ ಪೆಕ್ಟರ್ ದಿವಾಕರ್.ಆರ್, ಪಿ.ಎಸ್.ಐ ರಾಜು ಕೋನಕೇರಿ, ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದು, ಸದರಿ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವೈಖರಿಯನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಹಾಗೂ ಉಪ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

Key words: Mysore ,Police, drugs ,seized, Accused, arrested

The post ಮೈಸೂರು ಪೊಲೀಸರ ಕಾರ್ಯಾಚರಣೆ: 4 ಲಕ್ಷ ಮೌಲ್ಯದ ಮಾದಕ ವಸ್ತು ವಶ: ಆರೋಪಿ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯುತ್‌ ಅವಘಡಗಳ ಪ್ರಮಾಣ ಶೂನ್ಯಕ್ಕೆ ತರುವ ಗುರಿ ಇರಲಿ- ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು, ಫೆಬ್ರವರಿ,14, 2026 (www.justkannada.in): ವಿದ್ಯುತ್ ಅವಘಡಗಳ ಪ್ರಮಾಣ ತಪ್ಪಿಸಿ ಅದನ್ನು...

ಮೈಸೂರು ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ” Gen Z”  ಥೀಮ್ ಪೋಸ್ಟ್ ಆಫೀಸ್ ಯೋಜನೆ

  ಮೈಸೂರು, ಫೆ.೧೪,೨೦೨೬:  ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಶೀಘ್ರದಲ್ಲೇ ‘Gen Z...

ಸರ್ಕಾರಕ್ಕೆ ಸಾವಿರ ದಿನ: ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಿ ವಿಶ್ವಾಸ ಗಳಿಸಿದೆ-ಹೆಚ್.ಎ ವೆಂಕಟೇಶ್

ಬೆಂಗಳೂರು,ಫೆಬ್ರವರಿ,14,2026 (www.justkannada.in): ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯಧಿಕ ಬಹುಮತದಿಂದ ಅಧಿಕಾರಕ್ಕೆ ಬಂದು...

ಅಹಿಂಸಾತ್ಮಕ ಚಳುವಳಿಯಾಗಿ ಗ್ರಾಮ ಸತ್ಯಾಗ್ರಹವನ್ನು ಮುಂದುವರಿಸಬೇಕಿದೆ- ಜಯದೇವ್

ಮೈಸೂರು,ಫೆಬ್ರವರಿ,14,2026 (www.justkannada.in): ಅಹಿಂಸಾತ್ಮಕ ಚಳುವಳಿಯಾಗಿ ಗ್ರಾಮ ಸತ್ಯಾಗ್ರಹವನ್ನು ಮುಂದುವರಿಸಬೇಕಿದೆ ಗಾಂಧಿವಾದಿ ಜಯದೇವ್...