30
July, 2025

A News 365Times Venture

30
Wednesday
July, 2025

A News 365Times Venture

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಈಗಾಗಲೇ 230 ಎಕರೆ ಭೂ ಸ್ವಾಧೀನ –ಸಚಿವ ಹೆಚ್.ಸಿ ಮಹದೇವಪ್ಪ

Date:

ಮೈಸೂರು,ಜೂನ್,11,2025 (www.justkannada.in): ಮೈಸೂರಿನ ವಿಮಾನ ನಿಲ್ದಾಣ ವಿಸ್ತರಣೆಗೆ ಈಗಾಗಲೇ 230 ಎಕರೆ ಭೂ ಸ್ವಾಧೀನ ಮಾಡಲಾಗಿದೆ. ಉಳಿದ ಇನ್ನು 10 ಎಕರೆ ಶೀಘ್ರದಲ್ಲೇ ಭೂಸ್ವಾಧೀನ ಮಾಡಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹಾದೇವಪ್ಪ, ಮೈಸೂರು ಊಟಿ ಹೈವೆ ರಸ್ತೆ ಸ್ಥಳಾಂತರಕ್ಕೂ ಸುಮಾರು 60 ಎಕರೆ ಭೂ ಪ್ರದೇಶವನ್ನ ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಜೊತೆಗೆ ವಿಮಾನ ನಿಲ್ದಾಣ ವಿಸ್ತರಣೆ ವೇಳೆ ಮೂರು ನೀರಾವರಿ ಚಾನಲ್ ನಿಲ್ದಾಣದ ಒಳಗೆ ಸೇರ್ಪಡೆ ಆಗುತ್ತದೆ. ಹಾಗಾಗಿ ಚಾನೆಲ್ ಗಳಿಗೆ ಬಾಕ್ಸ್ ಬ್ರಿಡ್ಜ್ ನಿರ್ಮಾಣಕ್ಕೆ ಸರ್ಕಾರದಿಂದಲೇ 100 ಕೋಟಿ ಮೀಸಲಿಡಲು ನಿರ್ಧಾರ ಮಾಡಿದೆ. ಜೊತೆಗೆ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸುಮಾರು 800 ಎಕರೆ ಜಾಗ ಮೀಸಲಿರಿಸಿದ್ದು ಈಗಾಗಲೇ ಭೂ ಸ್ವಾಧೀನ ಪ್ರಕ್ರಿಯೆ ನಡೆದಿದೆ ಎಂದರು.

ರೈತರಿಗೆ ಸೂಕ್ತ ಪರಿಹಾರ ಕೊಟ್ಟು ಭೂಮಿ ಖರೀದಿ ಮಾಡಲಾಗುತ್ತದೆ. ತಕರಾರು ಮಾಡಿ ಕೋರ್ಟ್ ಮೊರೆ ಹೋಗುವವರ ಮನ ಒಲಿಸಲಾಗುತ್ತದೆ. ಡೀಮ್ಡ್ ಫಾರೆಸ್ಟ್ ಅಡಿ ಒಂದಷ್ಟು ರೈತರ ಜಮೀನುಗಳನ್ನ ಅರಣ್ಯ ಇಲಾಖೆ ವಶಪಡಿಸಿಕೊಂಡು ರೈತರಿಗೆ ತೊಂದರೆ ಕೊಡುತ್ತಿದೆ. ಮರು ಸರ್ವೆ ಮಾಡಿ ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಮಹದೇವಪ್ಪ ತಿಳಿಸಿದರು.vtu

Key words: 230 acres, land acquisition, expansion, Mysore Airport, HC Mahadevappa

The post ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಈಗಾಗಲೇ 230 ಎಕರೆ ಭೂ ಸ್ವಾಧೀನ –ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...