12
February, 2026

A News 365Times Venture

12
Thursday
February, 2026

A News 365Times Venture

ಮೈಸೂರು: ಸಿಸಿಬಿಯ 8 ಪೊಲೀಸರು ಎತ್ತಂಗಡಿ

Date:

ಮೈಸೂರು,ಫೆಬ್ರವರಿ,6,2026 (www.justkannada.in):  ನಗರದಲ್ಲಿ ಹೆಚ್ಚುತ್ತಿರುವ ಡ್ರಗ್ ಜಾಲಕ್ಕೆ ಕಡಿವಾಣ ಹಾಕುವಲ್ಲಿ ವಿಫಲವಾದ ಆರೋಪದ ನಡುವೆ ಮೈಸೂರಿನ ಸಿಟಿ ಕ್ರೈಂ ಬ್ರಾಂಚ್‌ (CCB)ನಲ್ಲಿ ದೊಡ್ಡ ಮಟ್ಟದ ಬದಲಾವಣೆ ನಡೆದಿದೆ.

ಕರ್ತವ್ಯ ಲೋಪ, ಅಪರಾಧ ಕೃತ್ಯಗಳ ಪತ್ತೆಯಲ್ಲಿ ನಿರ್ಲಕ್ಷ್ಯ ಹಾಗೂ ಡ್ರಗ್ ಪೆಡ್ಲರ್‌ ಗಳ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವ ಆರೋಪಗಳ ಹಿನ್ನೆಲೆ ಎಂಟು ಮಂದಿ ಪೊಲೀಸರನ್ನು ತಕ್ಷಣದಿಂದಲೇ ಎತ್ತಂಗಡಿ ಮಾಡಲಾಗಿದೆ ಎಂದು ಮೂಲಗಳು ಜಸ್ಟ್ ಕನ್ನಡಗೆ ತಿಳಿಸಿವೆ.

ಇದಕ್ಕೆ ಜೊತೆಯಾಗಿ ರೌಡಿ ಪ್ರತಿಬಂಧಕ ದಳದ ಮೂವರು ಸಿಬ್ಬಂದಿಗೂ ವರ್ಗಾವಣೆ ಶಿಕ್ಷೆ ವಿಧಿಸಲಾಗಿದ್ದು, ನಗರದ ಕಾನೂನು ಸುವ್ಯವಸ್ಥೆ ಮತ್ತು ಡ್ರಗ್ ನಿಯಂತ್ರಣದ ಮೇಲಿನ ಒತ್ತಡ ಹೆಚ್ಚಿರುವ ಹಿನ್ನೆಲೆಯಲ್ಲಿ ಇಲಾಖೆ ಕಠಿಣ ಸಂದೇಶ ನೀಡಿದಂತಾಗಿದೆ.

ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಡ್ರಗ್ ಜಾಲ, ಪೆಡ್ಲರ್‌ ಗಳ ಚಟುವಟಿಕೆ ಹಾಗೂ ಯುವಕರ ಸೆಳೆತ ಹೆಚ್ಚುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿತ್ತು. ಈ ಹಿನ್ನೆಲೆ ಮೇಲಾಧಿಕಾರಿಗಳ ಗಮನಕ್ಕೆ ಹಲವು ಅಂಶಗಳು ಬಂದಿದ್ದು, ಕಾರ್ಯಕ್ಷಮತೆ ಪರಿಶೀಲನೆಯ ಬಳಿಕ ಈ ಆಡಳಿತಾತ್ಮಕ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ವಿಭಾಗದೊಳಗೆ ಕಾರ್ಯಕ್ಷಮತೆ ಹೆಚ್ಚಿಸುವುದು, ಡ್ರಗ್ ವಿರುದ್ಧ ವಿಶೇಷ ದಾಳಿ ಬಲಪಡಿಸುವುದು ಮತ್ತು ಅಪರಾಧ ನಿಯಂತ್ರಣಕ್ಕೆ ಹೊಸ ತಂಡಗಳನ್ನು ನಿಯೋಜಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಸಿಸಿಬಿಯಿಂದ ವರ್ಗಾವಣೆಯಾದವರು: ಶಿವಣ್ಣ, ದೊಡ್ಡೇಗೌಡ, ಅನಿಲ್, ರಾಜು, ಉಮಾ ಮಹೇಶ್ವರ್, ರಾಮಸ್ವಾಮಿ, ಪ್ರಕಾಶ್ ಹಾಗೂ ಗೋವಿಂದ

Key words: Mysore, 8 CCB police, Transfer

The post ಮೈಸೂರು: ಸಿಸಿಬಿಯ 8 ಪೊಲೀಸರು ಎತ್ತಂಗಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಉದ್ಘಾಟಿಸಿದ ಸಚಿವ ಡಾ.ಎಂ.ಸಿ ಸುಧಾಕರ್

ಬೆಂಗಳೂರು,ಫೆಬ್ರವರಿ,12,2026 (www.justkannada.in): ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳ ತಂತ್ರಜ್ಞಾನ ಆಲೋಚನೆಗೆ, ಕಲ್ಪನೆಗೆ ಹಾಗೂ...

ಪ್ರಸಕ್ತ ವರ್ಷದಲ್ಲಿ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿ: ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಫೆಬ್ರವರಿ, 12,2026 (www.justkannada.in):  ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ...

ಎಫ್ ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಫೆಬ್ರವರಿ,12,2026 (www.justkannada.in): ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮಹತ್ತ್ವದ ಸುಧಾರಣಾ...

2,500 ಕಾಫಿ ಕಿಯೋಸ್ಕ್ ಸ್ಥಾಪನೆಗೆ ₹25 ಕೋಟಿ: ಎಂ ಬಿ ಪಾಟೀಲ

  ಬೆಂಗಳೂರು, ಫೆ.೧೨,೨೦೨೬ : ಸ್ವಸಹಾಯ ಸಂಘಗಳಲ್ಲಿ ತರಬೇತಿ ಪಡೆದಿರುವ ಮಹಿಳೆಯರೇ ನಿರ್ವಹಿಸುವಂತಹ...