27
August, 2026

A News 365Times Venture

27
Thursday
August, 2026

A News 365Times Venture

ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೊಳಪಟ್ಟು ಶೀಘ್ರ ಚೇತರಿಕೆಯ ಬಗ್ಗೆ ಅನುಭವ ಹಂಚಿಕೊಂಡ ಸಚಿವ ರಾಮಲಿಂಗಾರೆಡ್ಡಿ

Date:

ಬೆಂಗಳೂರು,ಫೆಬ್ರವರಿ,6,2025 (www.justkannada.in):  ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲು ಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ, ಹಲವಾರು ಜನ ಹಲವು ರೀತಿಯ ಸಲಹೆ ನೀಡಿದರು.  ಮಂಡಿನೋವಿಗೆ ತೈಲವನ್ನೂ ಸಹ ಹಚ್ಚಿಬಿಟ್ಟೆ, ಆದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ನಂತರ ಸ್ನೇಹಿತರ ಸಲಹೆಯಂತೆ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಅವರನ್ನು ಭೇಟಿ ಮಾಡಿ, ತಪಾಸಣೆಗೆ ಒಳಗಾದಾಗ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ಸಲಹೆ ನೀಡಿದರು. ಪ್ರಾರಂಭದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಹಿಂಜರಿಕೆ ಇತ್ತು, ಆದರೆ, ರೋಬೋಟ್‌ ನೆರವಿನಿಂದ ನಿಖರವಾಗಿ ಹಾಗೂ ಅತಿವೇಗವಾಗಿ ಚೇತರಿಕೆ ಕಾಣಬಹುದು ಎಂಬುದರ ಬಗ್ಗೆ ವೈದ್ಯರ ಭರವಸೆ ನೀಡಿದ ಬಳಿಕ ತೆರೆದ ಶಸ್ತ್ರಚಿಕಿತ್ಸೆ ಬದಲು ರೋಬೋಟ್‌ ನೆರವಿನ ಶಸ್ತ್ರಚಿಕಿತ್ಸೆ ಆಯ್ದುಕೊಂಡೆ. ಅಂತೆಯೇ ಶಸ್ತ್ರಚಿಕಿತ್ಸೆ ಬಳಿಕ ನನ್ನ ನಿರೀಕ್ಷೆಗೂ ಮೀರಿ ಶೀಘ್ರವಾಗಿ ಚೇತರಿಕೆ ಕಂಡಿದ್ದೇನೆ ಎಂದರು.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷರಾದ ಡಾ.ವಿ.ವಿ. ಚಿನಿವಾಲರ್‌ ಮಾತನಾಡಿ, ನಾನೂ ಸಹ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟು, ಚೇತರಿಕೆ ಕಂಡಿದ್ದೇನೆ, ವೈದ್ಯಕೀಯ ಲೋಕದಲ್ಲಿ ರೋಬೋಟ್‌ನ ಆಗಮನ ರೋಗಿಗಳಿಗೆ ಹೆಚ್ಚು ಅನುಕೂಲವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಉಪಸ್ಥಿತರಿದ್ದರು.

Key words: Minister, Ramalinga Reddy, knee replacement, surgery

The post ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೊಳಪಟ್ಟು ಶೀಘ್ರ ಚೇತರಿಕೆಯ ಬಗ್ಗೆ ಅನುಭವ ಹಂಚಿಕೊಂಡ ಸಚಿವ ರಾಮಲಿಂಗಾರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಪಕ್ಷಗಳು ತಮ್ಮ ಜವಾಬ್ದಾರಿ ಅರಿತುಕೊಂಡಿಲ್ಲ-BJP ವಿರುದ್ದ ಸಚಿವ ಲಕ್ಷ್ಮಣ್ ಸವದಿ ಕಿಡಿ

ಬೆಂಗಳೂರು,ಆಗಸ್ಟ್,25,2026 (www.justkannada.in): ಈ ಬಾರಿ ಅಧಿವೇಶನದಿಂದ ಯಾವ ಅನುಕೂಲ ಆಗಿಲ್ಲ ಎಂಬ...

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...