30
April, 2026

A News 365Times Venture

30
Thursday
April, 2026

A News 365Times Venture

ರೈತರೇ ಗಮನಿಸಿ: ವಿವಿಧ ಬೆಳೆಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಿ

Date:

ಬೆಂಗಳೂರು ಗ್ರಾಮಾಂತರ ಮೇ 26,2025 (www.justkannada.in):  2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಸಮಗ್ರ ತೋಟಗಾರಿಕೆ ಅಧಿವೃದ್ದಿ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ನೆಲಮಂಗಲ ತಾಲ್ಲೂಕಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ತೋಟಗಾರಿಕಾ ಇಲಾಖೆ ವತಿಯಿಂದ ರೈತರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM) ಹಾಗೂ ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯಡಿ(CHD) ರೈತರು ಬಾಳೆ, ಮಾವು, ಪಪ್ಪಾಯ ಹೈಬ್ರಿಡ್ ತರಕಾರಿ ಮತ್ತು ಹೂವಿನ ಬೆಳೆ ಬೆಳೆಯಬಹುದು. ಹಾಗೇ ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಪ್ರಾಥಮಿಕ ಸಂಸ್ಕರಣ ಘಟಕಗಳು, ಸಂರಕ್ಷಿತ ಬೇಸಾಯ, ವೈಯಕ್ತಿಕ ಕೃಷಿಹೊಂಡ, ಫಾರಂ ಗೇಟ್ ಪ್ಯಾಕ್ ಹೌಸ್ ನಿರ್ಮಾಣ, ಜೇನುಸಾಕಾಣಿಕೆ, ಮೊಬೈಲ್ ವೆಂಡಿಂಗ್ ಕಾರ್ಟ್ ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹೊಸ ಪ್ರದೇಶ ಕಾರ್ಯಕ್ರಮದಡಿ ದಾಳಿಂಬೆ, ಡ್ರ್ಯಾಗನ್ ಪ್ರೂಟ್ ಗಳಿಗೆ ಫಲಾನುಭವಿಗಳು  ತೋಟಗಾರಿಕೆ ಇಲಾಖೆಯಿಂದ  ಸಹಾಯಧನವನ್ನು ಪಡೆಯಬಹುದಾಗಿದೆ.

ಅರ್ಜಿಯನ್ನು ಮೇ 31ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ಹೋಬಳಿ, ದೂರವಾಣಿ ಸಂಖ್ಯೆ: 7337866626. ಸಹಾಯಕ ತೋಟಗಾರಿಕೆ ಅಧಿಕಾರಿ, ಸೋಂಪುರ ಹೋಬಳಿ, ದೂರವಾಣಿ ಸಂಖ್ಯೆ: 8884829971. ಸಹಾಯಕ ತೋಟಗಾರಿಕೆ ಅಧಿಕಾರಿ, ತ್ಯಾಮಗೊಂಡ್ಲು ಹೋಬಳಿ, ದೂರವಾಣಿ ಸಂಖ್ಯೆ: 8197655732.  ಸಹಾಯಕ ತೋಟಗಾರಿಕೆ ನಿರ್ದೇಶಕರು ನೆಲಮಂಗಲ, ದೂರವಾಣಿ ಸಂಖ್ಯೆ: 9902581832. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ನೆಲಮಂಗಲ, ದೂರವಾಣಿ ಸಂಖ್ಯೆ: 9880461607 ಸಂಪರ್ಕಿಸುವುದು ಎಂದು ನೆಲಮಂಗಲ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Farmers, Apply, incentives, various, crops

The post ರೈತರೇ ಗಮನಿಸಿ: ವಿವಿಧ ಬೆಳೆಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...