17
April, 2026

A News 365Times Venture

17
Friday
April, 2026

A News 365Times Venture

ವರುಣ, ಕನಕಪುರ ಯಾವುದೇ ಕ್ಷೇತ್ರವಾಗಲಿ, ಅಕ್ರಮ ಆಗಿದ್ದರೆ ಕ್ರಮ ಕೈಗೊಳ್ಳಲಿ- ಡಿಕೆ ಶಿವಕುಮಾರ್

Date:

ಬೆಂಗಳೂರು,ಆಗಸ್ಟ್,8,2025 (www.justkannada.in): ನಾವು ಅನ್ಯಾಯದ ವಿರುದ್ದ ಹೋರಾಡಿದ್ದೇವೆ. ವರುಣ ಕ್ಷೇತ್ರವಾಗಲಿ, ಕನಕಪುರ ಕ್ಷೇತ್ರವೇ ಆಗಲಿ ಯಾವುದೇ ಕ್ಷೇತ್ರದಲ್ಲಿ ಮತದಾನ ಅಕ್ರಮವಾಗಿದ್ದರೇ ಕ್ರಮ ಕೈಗೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಮುಖ್ಯ ಚುನಾವಣಾ ಕಚೇರಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ನಾವು ಅನ್ಯಾಯದ ವಿರುದ್ದ ಹೋರಾಡಿದ್ದೇವೆ. ಮುಖ್ಯ ಚುನಾವಣಾಧಿಕಾರಿ ಭೇಟಿ ಮಾಡಿದ್ದೇವೆ . ಇಂದು ಇಡೀ ದೇಶ ನೋಡುವ ಪ್ರತಿಭಟನೆ ಮಾಡಿದ್ದೇವೆ.  ಇಂದು ಹಬ್ಬ ಇದ್ದರೂ ಮತದಾನದ ಹಕ್ಕಿಗಾಗಿ ಪ್ರತಿಭಟನೆ  ಮಾಡಿದ್ದೇವೆ ಎಂದರು.

ಯಾವ ರೀತಿ ಅನ್ಯಾಯ ಆಗಿದೆ ಎಂದು ನಿನ್ನೆ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ.  ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ದ ಕ್ರಮ ಆಗಬೇಕು. ಅಕ್ರಮ ನಡೆದಿರುವುದಕ್ಕೆ ಬೇಕಾದಷ್ಟು ದಾಖಲೆಗಳಿವೆ ಆಯೋಗಕ್ಕೆ ಮನವಿ ಪತ್ರ ನೀಡಿದ್ದೇವೆ ವಿಸ್ತೃತವಾಗಿ ನೀಡಿಲ್ಲ. ನಾವು ಕೂಡ ರಿಸರ್ಚ್ ಮಾಡಿದ್ದೇವೆ. ವರುಣ ಕ್ಷೇತ್ರ ಆಗಲಿ ಕನಕಪುರ ಕ್ಷೇತ್ರವೇ ಆಗಲಿ ಯಾವುದೇ ಕ್ಷೇತ್ರದಲ್ಲಿ ಅಕ್ರಮ ಆಗಿದ್ದರೂ ಕ್ರಮ ಕೈಗೊಳ್ಳಲಿ ಅಕ್ರಮ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಿ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: illegal Voting, DCM, DK Sivakumar, Election office, visit

The post ವರುಣ, ಕನಕಪುರ ಯಾವುದೇ ಕ್ಷೇತ್ರವಾಗಲಿ, ಅಕ್ರಮ ಆಗಿದ್ದರೆ ಕ್ರಮ ಕೈಗೊಳ್ಳಲಿ- ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...