3
July, 2026

A News 365Times Venture

3
Friday
July, 2026

A News 365Times Venture

ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ;  ಆದೇಶ ಮಾರ್ಪಾಡು ಕೋರಿದ್ದ ನಟ ದರ್ಶನ್ ಅರ್ಜಿ ತಿರಸ್ಕಾರ

Date:

ನವದೆಹಲಿ,ಜುಲೈ,3,2026 (www.justkannada.in): 1 ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ ವಿಧಿಸಿರುವ  ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿದ್ದ ನಟ ದರ್ಶನ್ ಅರ್ಜಿ ತಿರಸ್ಕಾರಯನ್ನು ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ ತಿರಸ್ಕರಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್  ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್ ​​ಗೆ ಈ ಹಿಂದೆ ವೈದ್ಯಕೀಯ ಆಧಾರದಲ್ಲಿ ಜಾಮೀನು ದೊರಕಿತ್ತು, ಕೆಲ ತಿಂಗಳುಗಳ ಕಾಲ ಜೈಲಿನಿಂದ ಹೊರಗಿದ್ದರು, ಆದರೆ ನಂತರ ಸುಪ್ರೀಂಕೋರ್ಟ್, ಜಾಮೀನು ರದ್ದು  ಮಾಡಿದ್ದು ಜೊತೆಗೆ ಇನ್ನೊಂದು ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸದಂತೆ ನಿರ್ಬಂಧ ವಿಧಿಸಿದೆ. ಕಳೆದ ಬಾರಿ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ‘ದರ್ಶನ್ ಪ್ರಕರಣದಲ್ಲಿ ಒಂದು ವರ್ಷದ ಒಳಗಾಗಿ ಸುಮಾರು 60 ಸಾಕ್ಷಿಗಳ ವಿಚಾರಣೆ ಮಾಡದಿದ್ದರೆ ಆಗ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್, ಹೇಳಿತ್ತು. ಆ ಮೂಲಕ ಮುಂದಿನ ಒಂದು ವರ್ಷದ ವರೆಗೆ ದರ್ಶನ್​​ಗೆ ಜಾಮೀನು ಸಲ್ಲಿಸಲು ಅವಕಾಶವನ್ನು ನಿರಾಕರಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಈ ಆದೇಶವನ್ನು ಮಾರ್ಪಾಡು ಮಾಡುವಂತೆ ಆರೋಪಿ ನಟ ದರ್ಶನ್ ಪರ ವಕೀಲರು ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು, ಆದರೆ ಇದು ವಿಚಾರಣೆಗೆ ಅರ್ಹವಲ್ಲದ ಅರ್ಜಿ ಎಂದು ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ ತಿರಸ್ಕರಿಸಿದ್ದಾರೆ.

ತುರ್ತು ಪರಿಸ್ಥಿತಿಗಳಲ್ಲಿ ಜಾಮೀನು ಕೋರಲು ಅನುವು ಮಾಡಿಕೊಡುವಂತೆ ಕೋರಿ ನಟ ದರ್ಶನ್ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ ತಮ್ಮ ಜಾಮೀನಿನ ಕುರಿತಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ತಿದ್ದುಪಡಿಗೆ ಸಹ ದರ್ಶನ್ ಆಗ್ರಹಿಸಿದ್ದರು. ಆದರೆ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ವಿಚಾರಣೆಗೆ ಬರುವುದಕ್ಕೆ ಮುಂಚೆಯೇ ಅರ್ಜಿ ತಿರಸ್ಕೃತಗೊಂಡಿದೆ.

Key words: Actor, Darshan, petition, order, barred, bail

The post ವರ್ಷದವರೆಗೆ ಜಾಮೀನು ಕೋರಲು ನಿರ್ಬಂಧ;  ಆದೇಶ ಮಾರ್ಪಾಡು ಕೋರಿದ್ದ ನಟ ದರ್ಶನ್ ಅರ್ಜಿ ತಿರಸ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೊಡಗಿನಲ್ಲಿ ಮಾನವ–ಆನೆ ಸಂಘರ್ಷ ನಿವಾರಣೆ: ಸಂಸದ ಯದುವೀರ್ ಮನವಿಗೆ ಕೇಂದ್ರದಿಂದ ಸ್ಪಂದನೆ

ಮೈಸೂರು, ಜುಲೈ,3, 2026 (www.justkannada.in): ಕೊಡಗು ಜಿಲ್ಲೆಯಲ್ಲಿನ ಮಾನವ–ಆನೆ ಸಂಘರ್ಷ ಸಮಸ್ಯೆ...

ಬೆಂಗಳೂರಿನ ISRO ಕಚೇರಿಗೆ ಬಾಂಬೆ ಬೆದರಿಕೆ ಹಾಕಿದ್ದ ಆರೋಪಿ ಅಂದರ್

ಬೆಂಗಳೂರು,ಜುಲೈ,3,2026 (www.justkannada.in):  ಬೆಂಗಳೂರಿನ ಇಸ್ರೋ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ...

ನನಗೆ ಪ್ರಧಾನಿ ಆಗೋ ಆಸೆ ಇದೆ, ಆದ್ರೆ ಆಗಬೇಕಲ್ಲ? ಶಾಸಕ ಬಸವರಾಜ ರಾಯರೆಡ್ಡಿ ವ್ಯಂಗ್ಯ

ಕೊಪ್ಪಳ,ಜುಲೈ3,2026 (www.justkannada.in):  ಡಿಕೆ ಶಿವಕುಮಾರ್ ರಾಜ್ಯದ ಸಿಎಂ ಆಗಿ ಒಂದು ತಿಂಗಳು...

ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ: ವಿಶ್ವದರ್ಜೆಯ ಸೌಲಭ್ಯ ಕಲ್ಪಿಸಲು ಸಚಿವ ಕೆ.ಜೆ ಜಾರ್ಜ್ ಸೂಚನೆ

ಬೆಂಗಳೂರು, ಜುಲೈ ,3,2026 (www.justkannada.in):  ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ...