1
September, 2025

A News 365Times Venture

1
Monday
September, 2025

A News 365Times Venture

“ವಿಜಯವಾಣಿ” ಪತ್ರಿಕೆಯ ಈ ಸುದ್ದಿ ಸಂಪೂರ್ಣ ಸುಳ್ಳು: ಡಿಸಿಎಂ ಮಾಧ್ಯಮ ಸಲಹೆಗಾರ

Date:

ಬೆಂಗಳೂರು, ಆ.೧೨,೨೦೨೫: “ಗಣೇಶ ವಿಗ್ರಹ ತಂದದ್ದು ಬಿಜೆಪಿ ಶಾಸಕ, ಪ್ರಧಾನಿಗೆ ಕೊಟ್ಟದ್ದು ಡಿಸಿಎಂ ಡಿ ಕೆ ಶಿವಕುಮಾರ್” ಎಂಬ ಸಾರಾಂಶ ಹೊತ್ತು “ವಿಜಯವಾಣಿ” ಪತ್ರಿಕೆಯಲ್ಲಿ ಪ್ರಕಟವಾಗಿರೋ ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ಡಿಸಿಎಂ ಮಾಧ್ಯಮ ಸಲಹೆಗಾರ ತ್ಯಾಗರಾಜ್‌ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ತ್ಯಾಗರಾಜ್‌ ಹೇಳಿರುವುದು ಹೀಗೆ….

ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ಟ್ರೋಲ್ ಆಗಿದೆ. ಸತ್ಯ, ಅಸತ್ಯ ನೋಡದೇ, ತಲೆಬುಡ ಸೋಸದೇ “ಡಿಸಿಎಂ ಗುರಿ”ಕಾರರು ಈ ಸುದ್ದಿಯನ್ನು ಯದ್ವಾ-ತದ್ವಾ ಹಂಚಿಕೊಂಡಿದ್ದಾರೆ. ಬಾಯಿಗೆ ಬಂದಂತೆ ಟೀಕೆ ಮಾಡಿದ್ದಾರೆ!

ಆದರೆ ವಾಸ್ತವವಾಗಿ ಡಿಸಿಎಂ ಅವರೇ ಈ ಬೆಳ್ಳಿ ಗಣಪತಿ ವಿಗ್ರಹವನ್ನು ಅವರ ಮನೆಯಿಂದ ತೆಗೆದುಕೊಂಡು ಬಂದದ್ದು, ಅವರ ಕಚೇರಿ ಸಿಬ್ಬಂದಿಯೇ ಪ್ರಧಾನಿ ಭದ್ರತೆ ಹೊಣೆ ಹೊತ್ತ ಎಸ್ಪಿಜಿಯವರಿಗೆ ಕೊಟ್ಟು ತಪಾಸಣೆ ನಡೆಸಿದ್ದು, ಎಸ್ಪಿಜಿ ಸಿಬ್ಬಂದಿಯೇ ಈ ವಿಗ್ರಹವನ್ನು ಪ್ರಧಾನಿ ಅವರಿಗೆ ಡಿಸಿಎಂ ಅವರು ನೀಡಲು ನೆರವಾದದ್ದು!!

ಡಿಸಿಎಂ ಡಿ ಕೆ ಶಿವಕುಮಾರ್ ಅವರ ಮಾಧ್ಯಮ ಸಲಹೆಗಾರನಾಗಿ ಈ ಎಲ್ಲಕ್ಕೂ ನಾನು ಪ್ರತ್ಯಕ್ಷ ಸಾಕ್ಷಿ.

ಎಲ್ಲಕ್ಕಿಂತ ಮಿಗಿಲಾಗಿ ಬೆಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎಂ. ಕೃಷ್ಣಪ್ಪ ಅವರೇ ನನಗೆ ದೂರವಾಣಿ ಕರೆ ಮಾಡಿ, “ಪೇಪರ್ ನಲ್ಲಿ ಸುಳ್ಳು ಸುದ್ದಿ ಹಾಕಿದ್ದಾರೆ. ನಾನು ಯಾರಿಗೂ ಈ ರೀತಿ ಹೇಳಿಲ್ಲ. ನಾನು ಸ್ಟೇಜ್ ಮೇಲೆ ಹೋಗೋಕೇ ಅವಕಾಶ ಇರಲಿಲ್ಲ. ಇನ್ನು ಪ್ರಧಾನಿಗೆ ಗಣೇಶ ವಿಗ್ರಹ ಹೇಗೆ ಕೊಡಲಿ? ಈ ಬಗ್ಗೆ ಪತ್ರಿಕೆಯವರಿಗೆ ಸ್ಪಷ್ಟನೆ ಕೊಡ್ತೇನೆ” ಅಂತ ಹೇಳಿದ್ರು.

ಹಾಗಾದರೆ ಈ ಸುದ್ದಿ ಸೃಷ್ಟಿಯಾದದ್ದು ಹೇಗೆ? ವರದಿ ಬರೆದ ಬೃಹಸ್ಪತಿಗೆ ಈ ಸುದ್ದಿ ಕೊಟ್ಟವರು ಯಾರು? ಸುದ್ದಿ ಕೆತ್ತುವ ಮುನ್ನ ಖಚಿತ ಮಾಡಿಕೊಳ್ಳಬೇಕು ಎನ್ನುವ ಸಾಮಾನ್ಯ ಪರಿಜ್ಞಾನ ಬೇಡವೇ?!

“ಸುದ್ದಿ ಸಣ್ಣದು, ಸುಳ್ಳು ದೊಡ್ಡದು, ಪ್ರಭಾವ ಕೆಟ್ಟದ್ದು”. ಪತ್ರಿಕೆಯವರಿಗೆ ಸ್ಪಷ್ಟನೆ ನೀಡಬಹುದು. ಆದರೆ ಸಾಮಾಜಿಕ ಜಾಲತಾಣದವರಿಗೆ?

ಹೀಗಾಗಿ ಈ ಪೋಸ್ಟ್..!

key words:  “Vijayavani” newspaper, completely false, DCM, media advisor

vtu

This news from “Vijayavani” newspaper is completely false: DCM’s media advisor

The post “ವಿಜಯವಾಣಿ” ಪತ್ರಿಕೆಯ ಈ ಸುದ್ದಿ ಸಂಪೂರ್ಣ ಸುಳ್ಳು: ಡಿಸಿಎಂ ಮಾಧ್ಯಮ ಸಲಹೆಗಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...