1
July, 2025

A News 365Times Venture

1
Tuesday
July, 2025

A News 365Times Venture

ವಿಪಕ್ಷ ನಾಯಕರ ಮೇಲೆ IT, ED ದಾಳಿ ನಡೆಸುವುದೇ ಕೇಂದ್ರದ ದೊಡ್ಡ ಸಾಧನೆ- ಸಚಿವ ರಾಮಲಿಂಗಾರೆಡ್ಡಿ

Date:

ಬೆಂಗಳೂರು,ಜೂನ್,13,2025 (www.justkannada.in):  ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವು 11 ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ IT, ED ದಾಳಿ ನಡೆಸಿರುವುದೇ ದೊಡ್ಡ ಸಾಧನೆಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಕೇಂದ್ರ ಸರ್ಕಾರವು ವಿಪಕ್ಷ ನಾಯಕರ ಮೇಲೆ ದುರುದ್ದೇಶ ಪೂರ್ವಕವಾಗಿ ಐಟಿ, ಇಡಿ ದಾಳಿ ನಡೆಸಿರುವುದೇ ದೊಡ್ಡ ಸಾಧನೆಯಾಗಿದೆ. ಈ 11 ವರ್ಷದಲ್ಲಿ ಬಿಜೆಪಿ ನೀಡಿದ್ದ ಯಾವುದೇ ಆಶ್ವಾಸನೆ-ಯನ್ನು ಈಡೇರಿಸಲಿಲ್ಲ. ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲಿ ಅಕ್ರಮ ಪತ್ತೆ ಮಾಡುತ್ತಿಲ್ಲ. ಈ ಬಗ್ಗೆ ಐಟಿ, ಇಡಿ ಗಮನ ಕೊಡಬೇಕು ಎಂದು ತಿಳಿಸಿದರು.

ಉದ್ಯೋಗ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿಯ ಅವಧಿಯಲ್ಲಿ ನಿರುದ್ಯೋಗ ಸೃಷ್ಟಿದ್ದೇ ಹೆಚ್ಚು. ಉದ್ಯೋಗ ಸೃಷ್ಟಿ ಮಾಡಲಿಲ್ಲ. ವಿದೇಶದಲ್ಲಿರುವ ಕಪ್ಪು ಹಣ ವಾಪಸ್ ತರಲಿಲ್ಲ. ಡಿಸೇಲ್, ಪೆಟ್ರೋಲ್ ಮತ್ತು ಗ್ಯಾಸ್ ಸಿಲಿಂಡ‌ರ್ ಸೇರಿದಂತೆ ಎಲ್ಲಾ ಬೆಲೆಗಳು ಏರಿಕೆಯಾಗಿವೆ. ಗಾಳಿ ಬೆಳಕು ಬಿಟ್ಟು ಉಳಿದ ಎಲ್ಲಾ ಪದಾರ್ಥಗಳಿಗೂ ಜಿಎಸ್‌ಟಿ ಹಾಕಿದ ಕೀರ್ತಿ ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಲೇವಡಿ ಮಾಡಿದರು

ಸ್ವಾತಂತ್ರ್ಯ ಬಂದ ದಿನದಿಂದಲೂ ಎಲ್ಲಾ ಪ್ರಧಾನಿಗಳು ಸೇರಿ ₹52ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಆದರೆ ನರೇಂದ್ರ ಮೋದಿ  ಅವರು ಅಧಿಕಾರ ನಡೆಸಿದ 11 ವರ್ಷದಲ್ಲಿ ₹150 ಲಕ್ಷ ಕೋಟಿ ರೂ ಸಾಲ ಮಾಡಿ ಸಾರ್ವಜನಿಕರ ಮೇಲೆ ಸಾಲದ ಭಾರ ಹೊರಿಸಿದ್ದಾರೆ. ಇದೇ ಅವರ ದೊಡ್ಡ ಸಾಧನೆ ಎಂದು ಚಾಟಿ ಬೀಸಿದರು.vtu

Key words:  Central government,  biggest, achievement, IT, ED attack, Minister,  Ramalingareddy

The post ವಿಪಕ್ಷ ನಾಯಕರ ಮೇಲೆ IT, ED ದಾಳಿ ನಡೆಸುವುದೇ ಕೇಂದ್ರದ ದೊಡ್ಡ ಸಾಧನೆ- ಸಚಿವ ರಾಮಲಿಂಗಾರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ ಹೋಗ್ತಾರೆ ಕಾದು ನೋಡಿ- ಸ್ನೇಹಮಯಿ ಕೃಷ್ಣ

ಮೈಸೂರು,ಜುಲೈ,1,2025 (www.justkannada.in): ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ...

IPS ಅಧಿಕಾರಿ ಅಮಾನತು ರದ್ದು ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಸೂ‍ಕ್ತ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ,1,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ...

ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ- ಸಂಸದ ಗೋವಿಂದ ಕಾರಜೋಳ

ಬಾಗಲಕೋಟೆ,ಜುಲೈ,1,2025 (www.justkannada.in): ಕಾಂಗ್ರೆಸ್ ಸರ್ಕಾರ ಡಿಸೆಂಬರ್ 31 ದಾಟುವುದಿಲ್ಲ, ಸರ್ಕಾರ ಪತನವಾಗುತ್ತದೆ...

ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ  

ಬೆಂಗಳೂರು ಗ್ರಾಮಾಂತರ, ಜುಲೈ,1,2025 (www.justkannada.in):  ಜುಲೈ 02 ರಂದು ಅಂದರೆ ನಾಳೆ...