29
August, 2026

A News 365Times Venture

29
Saturday
August, 2026

A News 365Times Venture

ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ

Date:

ಕಲಬುರುಗಿ,ಜೂನ್,13,2025 (www.justkannada.in):  ನಿನ್ನೆ ಅಹಮದಾಬಾದ್ ನ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನವಾಗಿ 241 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವರು ರಾಜೀನಾಮೆ ನೀಡುವಂತೆ  ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ,  ಕೇಂದ್ರ ಸರ್ಕಾರ ವಿಮಾನ ದುರಂತದ ಘಟನೆ ಹೊಣೆ ಹೊರಬೇಕು. ವಿಮಾನಯಾನ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇಂತಹ ದುರಂತ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆ ವರದಿ ಜನರ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಕಾಲ್ತುಳಿತ ಘಟನೆ ಆದಾಗ ಬಿಜೆಪಿಯವರು ಸಿಎಂ, ಡಿಸಿಎಂ ರಾಜೀನಾಮೆ ಕೇಳುತ್ತಿದ್ದರು. ಆದರೆ ಕುಂಭಮೇಳ , ಪಹಲ್ಗಾಮ್ ಘಟನೆಯಲ್ಲಿ ರಾಜೀನಾಮೆ ಕೊಟ್ಟರಾ? ಸಾವಿನಲ್ಲಿ ಯಾರೂ ರಾಜಕೀಯ ಮಾಡಬಾರದು. ಟಾಟಾ ಗ್ರೂಪ್ ಮೃತ ಕುಟುಂಬಸ್ಥರಿಗೆ ಒಂದು ಕೋಟಿ ಪರಿಹಾರ ನೀಡಿದೆ. ಆದರೆ ಈ ಪರಿವಾರದವರಿಗೆ ಎಷ್ಟು ಕೋಟಿ ಕೊಟ್ಟರು ಕಡಿಮೆಯೇ ನಿರ್ವಹಣೆ ಮಾಡುವ ಡಿಜಿಸಿಎ ವಿಮಾನಯಾನ ಮಂತ್ರಿ ಏನು ಮಾಡುತ್ತಿದ್ದರು ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿರ್ಲಕ್ಷ ವಹಿಸಿದ ಎಲ್ಲರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.vtu

Key words: Plane crash, Ishwar Khandre, demands, resignation, Union Aviation Minister

The post ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾನವ–ಆನೆ ಸಂಘರ್ಷ, ಕಸ್ತೂರಿ ರಂಗನ್ ವರದಿ ಅನುಷ್ಠಾನ: ಸಮಗ್ರ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್

ಬೆಂಗಳೂರು/ಮೈಸೂರು, ಆಗಸ್ಟ್, 28, 2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ...

ಶಿಕ್ಷಕರ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆ: ಅಧಿಕಾರಿಗಳಿಗೆ ಅಗತ್ಯ ಸೂಚನೆ

ಬೆಂಗಳೂರು, ಆಗಸ್ಟ್,28,2026 (www.justkannada.in):   ಸೆಪ್ಟೆಂಬರ್ 5ರಂದು ಆಯೋಜಿಸಲಾಗಿರುವ ರಾಜ್ಯ ಮಟ್ಟದ ಶಿಕ್ಷಕರ...

ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡ್ತೀನಿ- ಸಚಿವ ಬಿ. ನಾಗೇಂದ್ರ

ಬೆಂಗಳೂರು,ಆಗಸ್ಟ್,28,2026 (www.justkannada.in): ನನ್ನಿಂದ ಪಕ್ಷಕ್ಕೆ ಮುಜುಗರವಾದರೆ ರಾಜೀನಾಮೆ ಕೊಡುತ್ತೇನೆ ಎಂದು ಸಚಿವ...

ಮಂಡ್ಯಕ್ಕೆ ಜಪಾನ್‌ ನಿಯೋಗ ಭೇಟಿ: HPV, TT ಲಸಿಕಾ ಅಭಿಯಾನಕ್ಕೆ ಮೆಚ್ಚುಗೆ.

  ಕೆ.ಶೆಟ್ಟಿಹಳ್ಳಿ ಆರೋಗ್ಯ ಕೇಂದ್ರದ ಕಾರ್ಯವೈಖರಿಗೆ ಜಪಾನ್‌ ತಂಡ ಮೆಚ್ಚುಗೆ — ಹೊಸ...