22
July, 2026

A News 365Times Venture

22
Wednesday
July, 2026

A News 365Times Venture

ವಿಳಂಬ ಕಾಮಗಾರಿ ಮಾಡುವ ಗುತ್ತಿಗೆದಾರರಿಗೆ ಬಿಸಿ ಮುಟ್ಟಿಸಿ: ಸಚಿವ ಯತೀಂದ್ರ ಸಿದ್ದರಾಮಯ್ಯ ಖಡಕ್ ಸೂಚನೆ

Date:

ಬೆಂಗಳೂರು,ಜುಲೈ,21,2026 (www.justkannada.in):  ರಾಜ್ಯದ ವಿವಿಧ ನಗರಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ನಗರಾಭಿವೃದ್ಧಿ ಹಾಗೂ ಕುಡಿಯುವ ನೀರು ಸರಬರಾಜು ಯೋಜನೆಗಳ ವಿಳಂಬ ಕಾಮಗಾರಿಗಳ ಕುರಿತು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (KUIDFC) ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ವಿವಿಧ ಯೋಜನೆಗಳ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಿಯಮಿತವಾಗಿ ಕಾಮಗಾರಿಗಳ ಮೇಲ್ವಿಚಾರಣೆ ನಡೆಸಿ, ನಿಗದಿಪಡಿಸಿದ ಕಾಲಮಿತಿಯೊಳಗೆ ಪ್ರತಿಯೊಂದು ಯೋಜನೆಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸ್ಪಷ್ಟಪಡಿಸಿದರು.

ಕೆಲಸದಲ್ಲಿ ನಿರ್ಲಕ್ಷ್ಯ ವಹಿಸುವ ಹಾಗೂ ಉದ್ದೇಶಪೂರ್ವಕವಾಗಿ ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರ ವಿರುದ್ಧ ಯಾವುದೇ ದಾಕ್ಷಿಣ್ಯ ತೋರದೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಶ್ವ ಬ್ಯಾಂಕ್ ನೆರವಿನ ನಿರಂತರ ನೀರು ಸರಬರಾಜು ಯೋಜನೆಯಡಿ ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಈ ಯೋಜನೆಯಿಂದ 27 ಲಕ್ಷಕ್ಕೂ ಹೆಚ್ಚು ಜನರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.

ಬೆಳಗಾವಿಯ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡದ ಕಾಮಗಾರಿಗಳನ್ನು 2027ರ ಜೂನ್ ವೇಳೆಗೆ ಪೂರ್ಣಗೊಳಿಸಲು ಗಡುವು ನಿಗದಿಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇತ್ತೀಚೆಗೆ ಕಲಬುರಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ನೀರು ಶುದ್ಧೀಕರಣ ಘಟಕ ಹಾಗೂ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದ್ದೇನೆ. ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ನಗರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ವೇಗ

ಕರ್ನಾಟಕದ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಹಾಗೂ ಸುಸ್ಥಿರ ನಗರಾಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ KUIDFC ಹಲವು ಬೃಹತ್ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಅವುಗಳ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ. ಭೂಬಾಲನ್, ಮುಖ್ಯ ಇಂಜಿನಿಯರ್‌ ಗಳಾದ ಜೆ.ಆರ್. ನಂದೀಶ್, ಕೆ.ಪಿ. ಜಯರಾಮ್, ಅಧೀಕ್ಷಕ ಇಂಜಿನಿಯರ್ ಪದ್ಮನಾಭನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Minister, Dr. Yathindra Siddaramaiah, warning, contractors, delay, work

The post ವಿಳಂಬ ಕಾಮಗಾರಿ ಮಾಡುವ ಗುತ್ತಿಗೆದಾರರಿಗೆ ಬಿಸಿ ಮುಟ್ಟಿಸಿ: ಸಚಿವ ಯತೀಂದ್ರ ಸಿದ್ದರಾಮಯ್ಯ ಖಡಕ್ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ

ಬೆಂಗಳೂರು ಜುಲೈ, 21,2026 (www.justkannada.in): ಗೂಗಲ್‌ ಕಂಪನಿಯು ಇತಿಹಾಸದಲ್ಲೇ ಮೊದಲ ಬಾರಿಗೆ...

ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿದ ಯಾರನ್ನೂ ಸಹ ಬಿಡುವುದಿಲ್ಲ- ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಜುಲೈ,21,2026 (www.justkannada.in): ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಿನ ಗಂಭೀರ...

ಬರ ನಿರ್ವಹಣೆಗೆ ಹಣವಿದೆ: ರಾಜಕೀಯಕ್ಕಾಗಿ ಬಿಜೆಪಿ ಆರೋಪ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಜುಲೈ,21,2026 (www.justkannada.in):   ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ನಿರ್ವಹಣೆ ಮಾಡಲು ಸರ್ಕಾರದ ಬಳಿ...

ಸಂಪುಟ ವಿಸ್ತರಣೆ: ನಾಳೆಯೇ ನೂತನ ಸಚಿವರಿಂದ ಪ್ರಮಾಣ ವಚನ

ನವದೆಹಲಿ, ಜುಲೈ,21,2026 (www.justkannada.in):  ಡಿಕೆ ಶಿವಕುಮಾರ್ ಸಿಎಂ ಆಗಿ ಒಂದು ತಿಂಗಳು...