15
July, 2025

A News 365Times Venture

15
Tuesday
July, 2025

A News 365Times Venture

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

Date:

ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ  ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಮೈಸೂರಿನ‌ ಚಾಮರಾಜ ಜೋಡಿರಸ್ತೆಯ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಬಂದ ರೋಗಿಗಳೇ ಪ್ರತಿಭಟನೆ ನಡೆಸಿದ್ದು, ವೈದ್ಯರನ್ನ ಬದಲಾಯಿಸಿ, ಇಲ್ಲಾಂದರೆ ಆಸ್ಪತ್ರೆ ಮುಚ್ಚಿ ಎಂದು ಆಸ್ಪತ್ರೆಗೆ ಬೀಗ ಹಾಕಲು ಯತ್ನಿಸಿದ ಘಟನೆ ನಡೆದಿದೆ.

ವೈದ್ಯೆ ಡಾ.ಮಹಾಲಕ್ಷ್ಮಿ‌ ವಿರುದ್ಧ ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ವೈದ್ಯರು ರೋಗಿಗಳ ಜೊತೆ ಸರಿಯಾಗಿ ಸ್ಪಂದಿಸಲ್ಲ. ಚಿಕಿತ್ಸೆ ನೀಡುವ ಬದಲು ರೋಗಿಗಳಿಗೆ ಬಯ್ಯುತ್ತಾರೆ. ಸೌಜನ್ಯದಿಂದ ವರ್ತಿಸದೆ ದುರಹಂಕಾರ ತೋರುತ್ತಾರೆ ಎಂದು ಕಿಡಿಕಾರಿದ್ದಾರೆ.  ಅಲ್ಲದೆ ಸ್ಥಳಕ್ಕೆ ಡಿಎಚ್ಓ ಆಗಮಿಸುವಂತೆ ಬಿಗಿಪಟ್ಟು ಹಿಡಿದರು.

ವಿಷಯ ತಿಳಿದು ಆಸ್ಪತ್ರೆ  ದೌಡಾಯಿಸಿದ ಡಿಎಚ್ ಓ ಕುಮಾರಸ್ವಾಮಿ ತಕ್ಷಣ ವೈದ್ಯರನ್ನ ಬದಲಾಯಿಸುವ ಭರವಸೆ ನೀಡಿದರು. ಆದರೂ ಪ್ರತಿಭಟನೆಗೆ ಬಂದಿದ್ದ ರೋಗಿಗಳು ಚಿಕಿತ್ಸೆ ಪಡೆಯದೆ ವಾಪಸ್ ತೆರಳಿದ್ದಾರೆ.vtu

Key words: doctor, hospital, Patients, protest, Mysore

The post ‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಐದು ಹುಲಿಗಳ ಸಾವು ಕೇಸ್: ಡಿಸಿಎಫ್  ಸಸ್ಪೆಂಡ್

ಚಾಮರಾಜನಗರ, ಜುಲೈ,15,2025 (www.justkannada.in): ಚಾಮರಾಜನಗರ ಮಲೆ ಮಹದೇವಶ್ವರ ಬೆಟ್ಟದ ಮೀಣ್ಯಂ ಅರಣ್ಯ...

ಆಕ್ಸಿಯಂ-4 ಯಶಸ್ವಿ ಲ್ಯಾಂಡ್: ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಶುಭಾಂಶು ಶುಕ್ಲಾ.

ಕ್ಯಾಲಿಫೋರ್ನಿಯಾ,ಜುಲೈ,15,2025 (www.justkannada.in): ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ...

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ: ತಿರುಗೇಟು ಕೊಟ್ಟ ಆರ್.ಅಶೋಕ್

ಬೆಂಗಳೂರು, ಜುಲೈ, 15,2025 (www.justkannada.in):  ಸಿಗಂದೂರು ಸೇತುವೆ ಉಲ್ಲಂಘನೆ ಕಾರ್ಯಕ್ರಮದಲ್ಲಿ ಯಾವುದೇ...

ಆರೋಗ್ಯ ಸಮಸ್ಯೆಯಿರುವ ಅಂಗನವಾಡಿ, ಶಾಲಾ ಮಕ್ಕಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಿ-ಎಸ್.ಯುಕೇಶ್ ಕುಮಾರ್

ಮೈಸೂರು,ಜುಲೈ,15,2025 (www.justkannada.in): ಆರ್.ಬಿ.ಎಸ್.ಕೆ. ಕಾರ್ಯಕ್ರಮದ ಪ್ರಗತಿ ಉತ್ತಮಗೊಳಿಸಲು ಮತ್ತು ಆರೋಗ್ಯ ಸಮಸ್ಯೆಯಿಂದ...