ಚಿತ್ರದುರ್ಗ,ಫೆಬ್ರವರಿ,16,2026 (www.justkannada.in): ಎಸ್ಎಸ್ಎಲ್ ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಸಮೀಪದ ಡಿವಿಎಸ್ (DVS) ವಸತಿ ಶಾಲೆಯಲ್ಲಿ ನಡೆದಿದೆ.
ಕೊಟ್ರೇಶ್ ಆತ್ಮಹತ್ಯೆಗೆ ಶರಣಾದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ. ಮೃತ ವಿದ್ಯಾರ್ಥಿ ಚಿತ್ರದುರ್ಗ ತಾಲ್ಲೂಕಿನ ಕರಿಯಣ್ಣಹಳ್ಳಿ ನಿವಾಸಿಯಾಗಿದ್ದಾನೆ. ಡಿವಿಎಸ್ ವಸತಿ ಶಾಲೆಯಲ್ಲಿ ತಂಎಸ್ಎಸ್ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಕೊಟ್ರೇಶ್ ಶಾಲಾ ಕಟ್ಟಡದ 3ನೇ ಮಹಡಿಯಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಆದರೆ ಕೊಟ್ರೇಶ್ ಸಾವನ್ನಪ್ಪಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Key words: SSLC, student, commits suicide,
The post ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




