25
February, 2026

A News 365Times Venture

25
Wednesday
February, 2026

A News 365Times Venture

ಶಾಸಕರು ಕೇಳೋದ್ರಲ್ಲಿ ತಪ್ಪೇನಿದೆ: ಹೊಸ ಪೀಳಿಗೆ ಬೆಳೆಯಬೇಕಲ್ವಾ..? ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಫೆಬ್ರವರಿ,24,2026 (www.justkannada.in): ಸಚಿವ ಸಂಪುಟ ಪುನರಚನೆ ಮಾಡಿ ಹೊಸ ಶಾಸಕರಿಗೂ ಅವಕಾಶ ನೀಡುವಂತೆ ಹೈಕಮಾಂಡ್ ಗೆ ಹೊಸ ಶಾಸಕರು ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಕೆ ಶಿವಕುಮಾರ್, ಪತ್ರಿಕೆಯಲ್ಲಿ ನೋಡಿದ್ದೇನೆ ನನಗೆ ಇನ್ನೂ ಪತ್ರ ತಲುಪಿಲ್ಲ. ಎಲ್ಲ ಶಾಸಕರಿಗೂ ಮಂತ್ರಿ ಆಗಬೇಕು ಎನ್ನುವ ಆಸೆ ಇರುತ್ತೆ. ಸಿಎಂ ಆಗದಿದ್ರೂ ಕೆಲವರು ಮಂತ್ರಿ ಆಗಿದ್ದವರು ಇದ್ದಾರೆ. ಶಾಸಕರೇ ಅಲ್ಲದಿದ್ದರೂ ಸಚಿವರಾದವರಿದ್ದಾರೆ  ಅದಕ್ಕೆ ಶಾಸಕರು ಸಂಪುಟ ಪುನಾರಚನೆಗೆ ಬೇಡಿಕೆ ಇಟ್ಟಿದ್ದಾರೆ ಹೊಸ ಪೀಳಿಗೆ ಬೆಳೆಯಬೇಕು ಅಲ್ಲವಾ?  ನಾನು ಮಂತ್ರಿ ಆಗಿ 36 ವರ್ಷ ಆಯಿತು ಹೊಸ ಜನರೇಷನ್ ಬರಬೇಕು ಹೊಸ ಆಲೋಚನೆ ಬರಬೇಕು. ಶಾಸಕರು ಕೇಳ್ತಾರೆ ಅವರು ಕೇಳೋದ್ರಲ್ಲಿ ತಪ್ಪೇನು?  ಎಂದು ಪ್ರಶ್ನಿಸಿದರು.

ಸತೀಶ್ ಜಾರಕಿಹೊಳಿ ನಮ್ಮ ಹಿರಿಯ ನಾಯಕರು.  ಅವರಿಗೆ ಪಕ್ಷದ ಬಗ್ಗೆ  ಅಪಾರ ಚಿಂತನೆ ಇದೆ. ಸರ್ಕಾರ ವಾಪಸ್ ತರೀಕೆ ನಾವೆಲ್ಲಾ ಯೋಜನೆ ಮಾಡುತ್ತಿದ್ದೀವಿ ನಾವಿಬ್ಬರೂ ವಾರಕ್ಕೊಮ್ಮೆ ಮಾತನಾಡುತ್ತಿರುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: MLAs, Minister post, DCM, DK Shivakumar

 

The post ಶಾಸಕರು ಕೇಳೋದ್ರಲ್ಲಿ ತಪ್ಪೇನಿದೆ: ಹೊಸ ಪೀಳಿಗೆ ಬೆಳೆಯಬೇಕಲ್ವಾ..? ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಲಿತರ ಪಾಲಿನ ಹಣ ಯಾರ ಮನೆಗೆ ಹೋಯ್ತು? ಗ್ಯಾರಂಟಿಗಳನ್ನ ಟೀಕಿಸಿದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಬಗ್ಗೆ ವಿಧಾನ...

ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು...

ಧಾರವಾಡ ವಿದ್ಯಾರ್ಥಿಗಳ ಹೋರಾಟಕ್ಕೆ ಸರ್ಕಾರ ಗಡಗಡ: ಸುಳ್ಳುರಾಮಯ್ಯ ಅಂತಾಗಬೇಡಿ- ಅರವಿಂದ ಬೆಲ್ಲದ್

ಹುಬ್ಬಳ್ಳಿ,ಫೆಬ್ರವರಿ,25,2026 (www.justkannada.in):  ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ...

ರಾಜ್ಯದಲ್ಲಿ ಎಐ ಡೇಟಾ ಹಬ್ ಅಭಿವೃದ್ಧಿ: ಎಂ ಬಿ ಪಾಟೀಲ

  ಬೆಂಗಳೂರು,ಫೆ.೨೫,೨೦೨೬:  ಇ.ಎಸ್.ಡಿ.ಎಂ ವಲಯದ ಬೆಳವಣಿಗೆಗೆ ಪೂರಕವಾಗಿ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ...