30
July, 2025

A News 365Times Venture

30
Wednesday
July, 2025

A News 365Times Venture

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

Date:

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ ನಂ.1 ಸ್ವಚ್ಛನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛಾ ಸರ್ವೇಕ್ಷಣಾ 2024-25ನೇ ಸಾಲಿನ ಸಮೀಕ್ಷೆಯಲ್ಲಿ ಇಂದೋರ್ ದೇಶದ ನಂಬರ್ ಒನ್ ಕ್ಲೀನ್ ಸಿಟಿ ಅವಾರ್ಡ್  ಪಡೆದಿದೆ.   ಸ್ವಚ್ಛತಾ ಸಮೀಕ್ಷೆಯಲ್ಲಿ ಇಂದೋರ್  ಸತತ 8ನೇ ಬಾರಿಗೆ ಅಗ್ರಸ್ಥಾನ  ಪಡೆದಿದೆ.  ಗುಜರಾತ್ ​​ನ ಸೂರತ್ ಎರಡನೇ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರದ ನವಿ ಮುಂಬೈ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (MoHUA) ಆಯೋಜಿಸಿದ್ದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವಚ್ಛ ಸರ್ವೇಕ್ಷಣ್ 2024-25 ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಸಾಂಸ್ಕೃತಿಕ ನಗರಿ ಮೈಸೂರಿಗೆ 8ನೇ ಸ್ಥಾನ

ಸ್ವಚ್ಛಾ ಸರ್ವೇಕ್ಷಣಾ 2024-25ನೇ ಸಾಲಿನ ಸಮೀಕ್ಷೆಯಲ್ಲಿ ಕರ್ನಾಟಕದ ಮೈಸೂರು ಪಟ್ಟಿಯ ಟಾಪ್​ 10 ರಲ್ಲಿ ಕಾಣಿಸಿಕೊಂಡಿದೆ.  1 ಲಕ್ಷಕ್ಕೂ ಅಧಿಕ ಜನರು ವಾಸಿಸುವ ನಗರಗಳ ಪಟ್ಟಿಯಲ್ಲಿ ಅರಮನೆ ನಗರಿ 8ನೇ ಸ್ಥಾನ ಪಡೆದಿದೆ. ಈ ಹಿಂದೆ ಒಂದು ವರ್ಷ ಮಾತ್ರ ಮೈಸೂರು ನಗರವು ಸ್ವಚ್ಛತೆಯಲ್ಲಿ ದೇಶದಲ್ಲೇ ನಂಬರ್ ಒನ್ ಸ್ಥಾನ ಪಡೆದಿತ್ತು. 2016 ರಲ್ಲಿ ದೇಶದಲ್ಲಿಯೇ ನಂಬರ್​ 1 ಸ್ಥಾನ ಪಡೆದಿದ್ದ ಮೈಸೂರು ಬಳಿಕ ಕುಸಿತ ಕಂಡಿತ್ತು. ಬಳಿಕ ಮೈಸೂರು ನಗರಕ್ಕೆ ನಂಬರ್ ಒನ್ ಕ್ಲೀನ್ ಸಿಟಿ ಪಟ್ಟ ಪಡೆಯಲು ಸಾಧ್ಯವಾಗಿಲ್ಲ. ಅದರಲ್ಲೂ 2023 ನೇ ಸಾಲಿನಲ್ಲಿ 27 ನೇ ಸ್ಥಾನ ಪಡೆದುಕೊಂಡಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈಗ 19 ಸ್ಥಾನ ಜಿಗಿದಿದೆ. ಇದೇ ಪಟ್ಟಿಯಲ್ಲಿ ಅವಳಿ ಜಿಲ್ಲೆಗಳಾದ ಹುಬ್ಬಳ್ಳಿ- ಧಾರವಾಡವು 82ನೇ ಕ್ರಮಾಂಕದಲ್ಲಿದೆ.vtu

Key words: Cleanliness survey, Cleanest City, Indore,  Mysore

The post ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...