15
June, 2026

A News 365Times Venture

15
Monday
June, 2026

A News 365Times Venture

ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಮಂಡಿಸಲಿ- ಬಿವೈ ವಿಜಯೇಂದ್ರ

Date:

ಶಿವಮೊಗ್ಗ,ಜೂನ್,15,2026 (www.justkannada.in):  ಸರ್ಕಾರ ಹಣವಿಲ್ಲದ ಬಗ್ಗೆ ಒಪ್ಪಿಕೊಳ್ಳದೆ ಗ್ಯಾರಂಟಿ ಪರಿಷ್ಕರಣೆಯ ಹುನ್ನಾರ ಮಾಡುತ್ತಿದೆ. ಹೀಗಾಗಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್  ಶ್ವೇತಪತ್ರ ಮಂಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಒತ್ತಾಯಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಹಣವಿಲ್ಲ ಅನ್ನೋದು ಒಪ್ಪಿಕೊಳ್ಳದೆ ಗ್ಯಾರಂಟಿ ಪರಿಷ್ಕರಣೆಯ ಹುನ್ನಾರ ನಡೆಸುತ್ತಿದೆ. ಪ್ರತಿಯೊಬ್ಬ ಮಹಿಳೆಗೂ ನೆರವು ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ಗ್ಯಾರಂಟಿಗೆ ಹಣ ಹೊಂದಿಸಲು ಕಷ್ಟವಾಗುತ್ತಿದೆ.  ಸಿಎಂ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಮಂಡಿಸಬೇಕು ಎಂದು ಆಗ್ರಹಿಸಿದರು.

ಹಿಮಾಚಲ ಪ್ರದೇಶ, ತೆಲಂಗಾಣ ಸರ್ಕಾರ,  ಗ್ಯಾರಂಟಿಯಿಂದ ನಲುಗಿವೆ. ಅಲ್ಲಿನ ಸರ್ಕಾರ ನೌಕರರಿಗೆ ಸಂಬಳವನ್ನು ನೀಡಲಾಗದ ಪರಿಸ್ಥಿತಿ ಇದೆ.  ರಾಜ್ಯ ಸರ್ಕಾರವೂ ಇದೇ ಪರಿಸ್ಥಿತಿಯಲ್ಲಿದೆ ಎಂಬ ಮಾತು  ಕೇಳಿ ಬರುತ್ತಿದೆ. ರಾಜ್ಯದ ಜನತೆ ಇವರ ಬಳಿ ಯಾವುದೇ ಗ್ಯಾರಂಟಿ ನಿರೀಕ್ಷಿಸಿರಲಿಲ್ಲ. ಡಿಕೆ ಶಿವ ಕುಮಾರ್ ನೇತೃತ್ವದ ಸರ್ಕಾರ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

Key words: CM, Guaranteed, revision, BY Vijayendra

The post ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಮಂಡಿಸಲಿ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

RSS ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ- ಮೋಹನ್ ಭಾಗವತ್ ತಿರುಗೇಟು

ತ್ರಿಶೂರ್,ಜೂನ್,15,2026 (www.justkannada.in): ಆರ್ ಎಸ್ಎಸ್ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ...

RSS ನೋಂದಣಿ ವಿಚಾರ: ಮೋಹನ್ ಭಾಗವತ್ ರಿಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜೂನ್, 15,2026 (www.justkannada.in) : ಆರ್ ಎಸ್ ಎಸ್ ನೋಂದಣಿ...

ಪ್ರಾಮಾಣಿಕತೆ, ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ ಸಾಧನೆ -ಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆ

ಬೆಂಗಳೂರು, ಜೂನ್,15,2026 (www.justkannada.in): ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ...

ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡ್ತೇವೆ- ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಜೂನ್,15,2026 (www.justkannada.in): ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ...