4
March, 2026

A News 365Times Venture

4
Wednesday
March, 2026

A News 365Times Venture

ಸಿಎಂ ವಿರುದ್ದ ED ಸಂಸ್ಥೆ ದುರ್ಬಳಕೆ: ಬಿಜೆಪಿಗರು ರಾಜ್ಯದ ಜನರ ಕ್ಷಮೆಯಾಚಿಸಲಿ- ಸಚಿವ ಡಾ.ಹೆಚ್ ಸಿ ಮಹದೇವಪ್ಪ

Date:

ಮೈಸೂರು,ಜುಲೈ,21,2025 (www.justkannada.in): ಸಿಎಂ ಸಿದ್ದರಾಮಯ್ಯ ವಿರುದ್ದ ED ಸಂಸ್ಥೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು ಬಿಜೆಪಿಗರು ರಾಜ್ಯದ ಜನರ ಕ್ಷಮೆಯಾಚಿಸಲಿ ಎಂದು ಸಚಿವ ಡಾ.ಹೆಚ್ ಸಿ ಮಹದೇವಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಹೆಚ್ ಸಿ ಮಹದೇವಪ್ಪ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ವಿಷಯದಲ್ಲಿ ರಾಜಕೀಯ ಪ್ರೇರಿತವಾಗಿ ನಡೆದುಕೊಳ್ಳುತ್ತಿದ್ದ ED ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಛಾಟಿ ಬೀಸಿದ್ದು, ಚುನಾವಣೆಗಳು ಚುನಾವಣಾ ಕಣದಲ್ಲಿ ನಡೆಯಲಿ, ನೀವು ರಾಜಕೀಯ ದಾಳವಾಗಿ ಬಳಕೆ ಆಗಬೇಡಿ. ನಾವು ಮಾತನಾಡಲು ಆರಂಭಿಸಿದರೆ ED ಸಂಸ್ಥೆಯ ವಿರುದ್ಧ ಬಹಳ ಕಟುವಾಗಿ ಮಾತನಾಡಬೇಕಾಗುತ್ತದೆ. ಮಹಾರಾಷ್ಟ್ರದಲ್ಲಿ ಇಂತಹ ಘಟನೆಗಳನ್ನು ನಾವು ಕಂಡಿದ್ದೇವೆ. ED ಸಂಸ್ಥೆಯು ದೇಶಾದ್ಯಂತ ಈ ರೀತಿಯ ಕೆಟ್ಟ ಪ್ರವೃತ್ತಿ ಹರಡುವುದನ್ನು ನಾವು ಸಹಿಸುವುದಿಲ್ಲ ಎಂದು ED ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಎಚ್ಚರಿಸಿದೆ.

ಈ ಮೂಲಕ ಬಿಜೆಪಿಗರು ವಿಪಕ್ಷಗಳನ್ನು ತೇಜೋವಧೆ ಮಾಡಲು ED ಯಂತಹ ತನಿಖಾ ಸಂಸ್ಥೆಗಳನ್ನು ದಾಳವಾಗಿ ಬಳಸಿಕೊಳ್ಳುತ್ತಿರುವುದು ಸ್ಪಷ್ಟವಾಗಿದ್ದು ಇಂತಹ ಹೀನ ರಾಜಕೀಯ ಕೃತ್ಯ ಮಾಡಿದ್ದಕ್ಕಾಗಿ ಅವರು ರಾಜ್ಯದ ಜನರ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಲಿ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಒತ್ತಾಯಿಸಿದ್ದಾರೆ.

ಇನ್ನು ರಾಜಕೀಯದ ಹಿಡಿತಕ್ಕೆ ಒಳಗಾಗದೇ ಸ್ವತಂತ್ರ ತನಿಖಾ ಸಂಸ್ಥೆಗಳು ತಮ್ಮ ಜವಾಬ್ದಾರಿಯನ್ನು ಸೂಕ್ತವಾಗಿ ನಿರ್ವಹಿಸಿ ಸಂಸ್ಥೆಗಳ ಘನತೆಯನ್ನು ಮತ್ತು ಅದರ ಮಹತ್ವವನ್ನು ಉಳಿಸಿಕೊಳ್ಳುವ ಕೆಲಸ ಮಾಡಲಿ ಎಂದು ಈ ವೇಳೆ ಆಗ್ರಹಿಸುತ್ತೇನೆ. ದೇಶದ ಸರ್ವೋಚ್ಛ ಅಂಗವಾದ ನ್ಯಾಯಾಂಗವೇ ED ಸಂಸ್ಥೆಯ ಅಧಿಕಾರ ದುರ್ಬಳಕೆ ವಿಷಯದಲ್ಲಿ ದನಿ ಎತ್ತಿರುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಉತ್ತಮ ಬೆಳವಣಿಗೆ ಆಗಿದ್ದು ಇದನ್ನು ನಾನು ಮನದುಂಬಿ ಸ್ವಾಗತಿಸುತ್ತೇನೆ ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ.vtu

Key words: ED,  BJP,  apologies, Minister, Dr HC Mahadevappa

The post ಸಿಎಂ ವಿರುದ್ದ ED ಸಂಸ್ಥೆ ದುರ್ಬಳಕೆ: ಬಿಜೆಪಿಗರು ರಾಜ್ಯದ ಜನರ ಕ್ಷಮೆಯಾಚಿಸಲಿ- ಸಚಿವ ಡಾ.ಹೆಚ್ ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...