1
July, 2025

A News 365Times Venture

1
Tuesday
July, 2025

A News 365Times Venture

ಸಿಎಂ ಸಿದ್ದರಾಮಯ್ಯ ಕಾರು ತಡೆದು ರೈತರಿಂದ ಆಕ್ರೋಶ

Date:

ದಾವಣಗೆರೆ,ಜೂನ್,16,2025 (www.justkannada.in): ಸಿಎಂ ಸಿದ್ದರಾಮಯ್ಯ ಇಂದು ದಾವಣಗೆರೆಗೆ ಪ್ರವಾಸ ಕೈಗೊಂಡಿದ್ದರು. ಈ ವೇಳೆ ರೈತರು ಸಿಎಂ ಸಿದ್ದರಾಮಯ್ಯ ಅವರ ಕಾರನ್ನ ತಡೆದು ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಹೌದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಪೊಲೀಸರು ಅವಕಾಶ ನೀಡದೇ ಇರುವುದರಿಂದ  ಕೋಪಗೊಂಡ ರೈತರು, ಸಿಎಂ ಸಿದ್ದರಾಮಯ್ಯ ಕಾರು ತಡೆದು ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರದ ಹೊರವಲಯದ ಸರ್ಕ್ಯೂಟ್ ಹೌಸ್ ಆವರರಣದಲ್ಲಿ ನಡೆಯಿತು.

ವಿವಿಧ ಬೇಡಿಕೆಗಳನ್ನು ಮುಖ್ಯ ಮಂತ್ರಿಯವರ ಬಳಿ ಹೇಳಿಕೊಳ್ಳಲು ಆಗಮಿಸಿದ್ದ ರೈತರಿಗೆ ಪೋಲೀಸರು ಅವಕಾಶ ಮಾಡಿಕೊಡಲಿಲ್ಲ. ಪೊಲೀಸರ ವರ್ತನೆಯಿಂದ ಅಸಮಾಧಾನಗೊಂಡ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರು ತಡೆದು, ಕಾರಿನ‌ ಮುಂದೆ ಮಲಗಿದರು.

ಮುಖ್ಯಮಂತ್ರಿಯ ಕಾರು ಚಾಲನೆ ಮಾಡುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ರೈತರ ಮನವೊಲಿಸಲು ಪ್ರಯತ್ನಿಸಿದರು. ಬಳಿಕ ಮುಖ್ಯಮಂತ್ರಿಯವರು ಕಾರಿನಲ್ಲಿ ಕುಳಿತೇ ರೈತರ ಬೇಡಿಕೆ ಆಲಿಸಿ, ಮನವಿ ಸ್ವೀಕರಿಸಿದರು.vtu

Key words: CM, Siddaramaiah, car, stop, farmers

The post ಸಿಎಂ ಸಿದ್ದರಾಮಯ್ಯ ಕಾರು ತಡೆದು ರೈತರಿಂದ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಲಕ್ಕಿ, ಲಾಟರಿ ಮುಖ್ಯಮಂತ್ರಿ- ಶಾಸಕ ಬಿ.ಆರ್ ಪಾಟೀಲ್

ಮಂಡ್ಯ,ಜುಲೈ,1,2025 (www.justkannada.in):  ಸಿದ್ದರಾಮಯ್ಯ ಲಕ್ಕಿ, ಲಾಟರಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ...

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ ಹೋಗ್ತಾರೆ ಕಾದು ನೋಡಿ- ಸ್ನೇಹಮಯಿ ಕೃಷ್ಣ

ಮೈಸೂರು,ಜುಲೈ,1,2025 (www.justkannada.in): ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ...

IPS ಅಧಿಕಾರಿ ಅಮಾನತು ರದ್ದು ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಸೂ‍ಕ್ತ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ,1,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ...

ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ- ಸಂಸದ ಗೋವಿಂದ ಕಾರಜೋಳ

ಬಾಗಲಕೋಟೆ,ಜುಲೈ,1,2025 (www.justkannada.in): ಕಾಂಗ್ರೆಸ್ ಸರ್ಕಾರ ಡಿಸೆಂಬರ್ 31 ದಾಟುವುದಿಲ್ಲ, ಸರ್ಕಾರ ಪತನವಾಗುತ್ತದೆ...