5
April, 2026

A News 365Times Venture

5
Sunday
April, 2026

A News 365Times Venture

ಸಿದ್ದರಾಮಯ್ಯ ಅಧಿಕಾರದ ರುಚಿ ನೋಡಿದ್ಮೇಲೆ ‘ಪರ್ಮನೆಂಟ್ ಸಿಎಂ’ ಅಂತಿದಾರೆ- ಕೇಂದ್ರ ಸಚಿವ HDK ವ್ಯಂಗ್ಯ

Date:

ಮಂಡ್ಯ,ಏಪ್ರಿಲ್,3,2026 (www.justkannada.in): ಸಿದ್ದರಾಮಯ್ಯ 2013ರಲ್ಲಿ ಇದೇ ನನ್ನ ಕೊನೇ ಚುನಾವಣೆ ಎಂದಿದ್ದರು. ಅಧಿಕಾರದ ರುಚಿ ನೋಡಿದ್ಮೇಲೆ ಈಗ ‘ಪರ್ಮನೆಂಟ್ ಸಿಎಂ’ ಅಂತಿದಾರೆ ಎಂದು ಕೇಂದ್ರ ಸಚಿವ  ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಮಂಡ್ಯ ಜಿಲ್ಲೆ ಟಿ.ಎಸ್ ಛತ್ರದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮುಂದಿನ ಸಿಎಂ ಆಗಿ ಸಿದ್ದರಾಮಯ್ಯ  ಮುಂದುವರೆಯುವ ವಿಚಾರ ಚುನಾವಣೆವರೆಗೂ ಕಾದು ನೋಡಬೇಕು ಸಿದ್ದರಾಮಯ್ಯ 2028ಕ್ಕೂ ನಾನೇ ಸಿಎಂ ಅನ್ನುತ್ತಿದ್ದಾರೆ.  ಕೊನೇ ಉಸಿರಿರೊವರೆಗೂ ರಾಜಕೀಯ ಮಾಡುತ್ತೇನೆ ಎಂದಿದ್ದಾರೆ.  2013ರಲ್ಲಿ ಇದೇ ನನ್ನ ಕೊನೇ ಚುನಾವಣೆ ಎಂದಿದ್ದರು ಅಧಿಕಾರದ ರುಚಿ ನೋಡಿದ ಮೇಲೆ ಪರ್ಮನೆಂಟ್ ಸಿಎಂ ಎಂದಿದ್ದಾರೆ. ಈ ಬಗ್ಗೆ ಜನರೇ ಮುಂದೆ ತೀರ್ಮಾನ ಮಾಡುತ್ತಾರೆ ಎಂದರು.

ಕುಟುಂಬ ರಾಜಕಾರಣ ಆರೋಪ ಕುರಿತು ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಮೊದಲ ಮಗನನ್ನು ಬೆಳೆಸಲು ಓಡಾಡಿದ್ದರು.  ಆದರೆ ಮೊದಲ ಮಗನ ಅಕಾಲಿಕ ಮರಣದಿಂದ 2ನೇ ಮಗನನ್ನು ಕರೆತಂದಿದ್ದಾರೆ. ವೈದ್ಯರಾಗಿದ್ದವರನ್ನು ರಾಜಕೀಯಕ್ಕೆ ತಂದಿದ್ದಾರೆ ಡಿಸಿಎಂ ಕುಟುಂಬದಲ್ಲಿ ಎಷ್ಟು ಜನ ಅಧಿಕಾರ ಪಡೆದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಹೋದರರನ್ನು ಕೆಎಂಎಫ್ ಅಧ್ಯಕ್ಷರಾಗಿ ಮಾಡಲು ಮುಂದಾದರು.  ಎರಡರಿಂದ ಮೂರು ಜನ ಶಾಸಕರಿರುವ ಕುಟುಂಬ ಸಾಕಷ್ಟಿದೆ ಸಿಎಂಗೆ ಕುಟುಂಬ ರಾಜಕಾರಣ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಹೆಚ್.ಡಿಕೆ ಟಾಂಗ್ ಕೊಟ್ಟರು.

Key words: Siddaramaiah, permanent CM,  Union Minister, HDK

The post ಸಿದ್ದರಾಮಯ್ಯ ಅಧಿಕಾರದ ರುಚಿ ನೋಡಿದ್ಮೇಲೆ ‘ಪರ್ಮನೆಂಟ್ ಸಿಎಂ’ ಅಂತಿದಾರೆ- ಕೇಂದ್ರ ಸಚಿವ HDK ವ್ಯಂಗ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಗದೆ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ದ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ...

IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ

ಬೆಂಗಳೂರು,ಏಪ್ರಿಲ್,4,2026 (www.justkannada.in):  ನಾಳೆ ನಡೆಯಲಿರುವ ಐಪಿಎಲ್  ಆರ್ ಸಿಬಿ ವರ್ಸಸ್ ಸಿಎಸ್...

MYSORE: 2113 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ—ಡ್ರೋನ್ ಸರ್ವೆಗೆ ಚಾಲನೆ

  ಮೈಸೂರು, ಏ.04: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವ್ಯಾಪ್ತಿಯಲ್ಲಿ ದೊಡ್ಡಮಾರಗೌಡನಹಳ್ಳಿ, ಕಮರವಳ್ಳಿ,...

ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್...