1
July, 2026

A News 365Times Venture

1
Wednesday
July, 2026

A News 365Times Venture

ಸುಪ್ರೀಂ ಆದೇಶದ ಮೇರೆಗೆ ಫುಟ್ ಪಾತ್ ತೆರವು ಕಾರ್ಯಾಚರಣೆ- ಸಚಿವ ಕೃಷ್ಣಭೈರೇಗೌಡ

Date:

ಬೆಂಗಳೂರು,ಜುಲೈ,1,2026 (www.justkannada.in): ಸುಪ್ರೀಂ ಕೋರ್ಟ್’ ಆದೇಶದ ಮೇರೆಗೆ ನಾವು ಫುಟ್ ಪಾತ್ ತೆರವು ಕಾರ್ಯ ಮಾಡುತ್ತಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಸಚಿವ ಕೃಷ್ಣಭೈರೇಗೌಡ ಸೂಚನೆ ಮೇರೆಗೆ ಜಿಬಿಎ ಅಧಿಕಾರಿಗಳು ಇಂದಿನಿಂದ ಬೆಂಗಳೂರಿನಲ್ಲಿ  ಫುಟ್​​​​ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗಿಳಿದಿದ್ದಾರೆ. ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಒತ್ತುವರಿ ತೆರವು ಕಾರ್ಯ  ನಡೆಯುತ್ತಿದ್ದು,  ಫುಟ್ ​ಪಾತ್​ ಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡ್ತಿರುವವರು, ಹೋಟೆಲ್, ಕೆಫೆ, ಸಣ್ಣ ಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ.

ಫುಟ್​​ಪಾತ್ ತೆರವು ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದಾರೆ. ನೀವು ಫುಟ್ ಪಾತ್ ತೆರವು ಮಾಡಿದರೇ ಮತ್ತೆ ಇಲ್ಲೇ ವ್ಯಾಪಾರ ಮಾಡುತ್ತೇವೆ. ಈ ಸ್ಥಳ ಬಿಟ್ಟು ಹೋಗಲ್ಲ ಎಂದು ಬೀದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು 2000 ಕಿ.ಮೀ. ಮಾತ್ರ ತೆರವುಗೊಳಿಸಿ ಎಂದು ಸೂಚನೆ- ಕೃಷ್ಣ ಭೈರೇಗೌಡ

ಈ ಕುರಿತು ಮಾತನಾಡಿರುವ ಸಚಿವ ಕೃಷ್ಣಭೈರೇಗೌಡ,  ‘ಸುಪ್ರೀಂ ಕೋರ್ಟ್’ ಆದೇಶದ ಮೇರೆಗೆ ತೆರವು ಕಾರ್ಯ ಮಾಡುತ್ತಿದ್ದೇವೆ. ಇದರಿಂದ ನಾಗರಿಕರಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಫುಟ್​ ಪಾತ್ ತೆರವು ಮಾಡುತ್ತಿದ್ದೇವೆ. ಬೆಂಗಳೂರು ನಗರದಲ್ಲಿ 15 ಸಾವಿರ ಕಿ.ಮೀ. ಫುಟ್​ಪಾತ್ ಇದೆ. ಆದರೆ ನಾವು 2000 ಕಿ.ಮೀ. ಮಾತ್ರ ತೆರವುಗೊಳಿಸಿ ಅಂತಾ ಹೇಳಿದ್ದೇವೆ. ಹೆಚ್ಚು ಜನರು ಓಡಾಡುವ ಕಡೆ ಮಾತ್ರ ತೆರವು ಮಾಡುತ್ತಿದ್ದೇವೆ. ಫುಟ್​ಪಾತ್ ಒತ್ತುವರಿಯಿಂದಾಗಿ ಅಪಘಾತ ಸಂಭವಿಸುತ್ತಿದ್ದು, ಫುಟ್​ಪಾತ್ ತೆರವುಗೊಳಿಸುವಂತೆ ಜನರು ಕೇಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

Key words: Foot path, clearance, operation, Minister, Krishnabhairegowda

The post ಸುಪ್ರೀಂ ಆದೇಶದ ಮೇರೆಗೆ ಫುಟ್ ಪಾತ್ ತೆರವು ಕಾರ್ಯಾಚರಣೆ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋಡ ಬಿತ್ತನೆ ಚಿಂತನೆ ಇಲ್ಲ, ಅವಕಾಶ ಬಂದಾಗ ಮಾಡ್ತೇವೆ- ಡಿಸಿಎಂ ಪರಮೇಶ್ವರ್

ಬೆಳಗಾವಿ,ಜುಲೈ,1,2026 (www.justkannada.in):  ರಾಜ್ಯದಲ್ಲಿ ಮುಂಗಾರು ಮಳೆ ಸರಿಯಾಗಿ ಆಗದ ಹಿನ್ನೆಲೆಯಲ್ಲಿ ಕೃಷಿಗೆ...

ಸೆಸ್ಕ್ : ಗೃಹ ಜ್ಯೋತಿ ಫಲಾನುಭವಿಗಳ ಮಾಹಿತಿ ಸಂಗ್ರಹಣೆ

ಮೈಸೂರು, ಜು 01, 2026 (www.justkannada.in):  ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ...

ಗ್ಯಾರಂಟಿ ಯೋಜನೆ ದುರ್ಬಳಕೆ: ಎಲ್ಲವನ್ನೂ ಒಂದೇ ಸಲ ಕ್ಲೀನ್ ಅಪ್ ಮಾಡಿದ್ರೆ ಒಳ್ಳೆಯದು- ಮಧು ಬಂಗಾರಪ್ಪ

ಬೆಂಗಳೂರು,ಜುಲೈ,1,2026 (www.justkannada.in):  ಗ್ಯಾರಂಟಿ ಯೋಜನೆಗಳು ದುರ್ಬಳಕೆಯನ್ನು ತಪ್ಪಿಸಲು ರಾಜ್ಯ ಸರ್ಕಾರ ಮರುಪರಿಶೀಲನೆಗೆ...

ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವು

ಮಂಗಳೂರು, ಜುಲೈ,1,2026 (www.justkannada.in): ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು...