9
August, 2026

A News 365Times Venture

9
Sunday
August, 2026

A News 365Times Venture

ಸೆಂಟಮ್ ಎಲೆಕ್ಟ್ರಾನಿಕ್ಸ್ ನಿಂದ ನಾಲ್ಕು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ-ಸಚಿವ ಎಂ. ಬಿ ಪಾಟೀಲ್

Date:

ಬೆಂಗಳೂರು,ಆಗಸ್ಟ್,7,2026 (www.justkannada.in):  ರಕ್ಷಣಾ ಉದ್ಯಮದಲ್ಲಿ ಹೆಸರು ಮಾಡಿರುವ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು ಈ ವರ್ಷದಿಂದ ಅನ್ವಯವಾಗುವಂತೆ ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 500 ಕೋಟಿ ರೂ. ಹೂಡಿಕೆ ಮಾಡಲಿದೆ. ಇದರಿಂದ 1,500 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ ತಮ್ಮನ್ನು ಇಲ್ಲಿನ ಖನಿಜ ಭವನದಲ್ಲಿ ಭೇಟಿಯಾಗಿದ್ದ ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿಖಿಲ್ ಮಲ್ಲವರಪು ಅವರೊಂದಿಗೆ ಸಚಿವ ಎಂ.ಬಿ ಪಾಟೀಲ್ ವಿಚಾರ ವಿನಿಮಯ ನಡೆಸಿದರು.

ಈ ಬಗ್ಗೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಹೋದ ವರ್ಷ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಹೂಡಿಕೆಯ ಸಂಬಂಧ ಒಡಂಬಡಿಕೆ ಆಗಿತ್ತು. ಸೆಂಟಮ್ ಕಂಪನಿಯು ಈಗಾಗಲೇ ದೇವನಹಳ್ಳಿ ಸಮೀಪದ ವೈಮಾಂತರಿಕ್ಷ ಮತ್ತು ರಕ್ಷಣಾ ಪಾರ್ಕಿನಲ್ಲಿ ಅಗತ್ಯ ಭೂಮಿ ಹೊಂದಿದೆ. ಅಲ್ಲಿ ಮುಂದಿನ ತಿಂಗಳು ಕಾಮಗಾರಿ ಆರಂಭವಾಗಲಿದೆ. ಇಲ್ಲಿ ಕಂಪನಿಯು ಅತ್ಯಾಧುನಿಕ ಎಲೆಕ್ಟ್ರಾನಿಕ್ಸ್, ರಕ್ಷಣಾ ವಿದ್ಯುನ್ಮಾನ, ರಡಾರ್ ಸೌಕರ್ಯ ಮತ್ತು ವಿದ್ಯುನ್ಮಾನ ಸಮರ ತಂತ್ರಜ್ಞಾನಗಳ ವಿಸ್ತರಣೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಕಂಪನಿಯು ಡಿ.ಆರ್.ಡಿ.ಒ, ರಕ್ಷಣಾ ವಲಯಕ್ಕೆ ಸಂಬಂಧಿಸಿದ ಸಾರ್ವಜನಿಕ ಉದ್ದಿಮೆಗಳು ಮತ್ತು ಇಸ್ರೋದಂತಹ ಸಂಸ್ಥೆಗಳೊಂದಿಗೆ ಸಹಭಾಗಿತ್ವ ಹೊಂದಿದ್ದು ಪ್ರಮುಖ ಕ್ಷಿಪಣಿ ಮತ್ತು ಉಪಗ್ರಹ ಯೋಜನೆಗಳಿಗೆ ಕೊಡುಗೆ ನೀಡಿದೆ. ಅಲ್ಲದೆ ವಿನ್ಯಾಸ, ಸಂಶೋಧನೆ ಮತ್ತು ಅಭಿವೃದ್ಧಿ, ಪರೀಕ್ಷಾ ಸೌಲಭ್ಯ ಮತ್ತು ಮೈಕ್ರೋ ಎಲೆಕ್ಟ್ರಾನಿಕ್ಸ್ ಅನುಕೂಲಗಳನ್ನು ಕಂಪನಿ ಹೊಂದಿದೆ. ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ಉದ್ದಿಮೆಯಲ್ಲಿ ರಾಜ್ಯವು ಮುಂಚೂಣಿಯಲ್ಲಿ ಇರಬೇಕು ಎನ್ನುವುದು ಸರಕಾರದ ತೀರ್ಮಾನವಾಗಿದೆ ಎಂದು ಅವರು ನುಡಿದಿದ್ದಾರೆ.

ಯಲಹಂಕದಲ್ಲಿ ಕೇಂದ್ರ ಕಚೇರಿ ಹೊಂದಿರುವ ಸೆಂಟಮ್ ಎಲೆಕ್ಟ್ರಾನಿಕ್ಸ್, 1993ರಿಂದಲೂ ಕ್ರಿಯಾಶೀಲವಾಗಿದೆ. ಇದು ದೇಶದ ಅತ್ಯಂತ ವಿಶ್ವಾಸಾರ್ಹ ಎಲೆಕ್ಟ್ರಾನಿಕ್ಸ್ ಕಂಪನಿಗಳಲ್ಲಿ ಒಂದಾಗಿದೆ. ಹೂಡಿಕೆ ಮತ್ತು ಉದ್ಯೋಗಸೃಷ್ಟಿ ಎರಡರ ಕಡೆಗೂ ಗಮನ ಹರಿಸಿರುವ ಕಂಪನಿಗೆ ಸರಕಾರದ ಕಡೆಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಪಾಟೀಲ ಭರವಸೆ ಕೊಟ್ಟಿದ್ದಾರೆ.

Key words: Centum Electronics, invest, Rs 500 crore, Minister, M. B. Patil

The post ಸೆಂಟಮ್ ಎಲೆಕ್ಟ್ರಾನಿಕ್ಸ್ ನಿಂದ ನಾಲ್ಕು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ-ಸಚಿವ ಎಂ. ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೊರಟ್ಟಿ ಹೃದಯ ವೈಶಾಲ್ಯತೆ ಶ್ಲಾಘನೀಯ: ಬದಲಿ ವ್ಯವಸ್ಥೆವರೆಗೂ ಅವರನ್ನೇ ಮುಂದುವರಿಸಲು ಶಿಫಾರಸ್ಸು- ಸಿಎಂ ಡಿಕೆಶಿ

ಬೆಂಗಳೂರು, ಆಗಸ್ಟ್,7,2026 (www.justkannada.in):  ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ...

ಆ.13ರ  ಬಂದ್ ಮುಂದೂಡುವುದು ಸೂಕ್ತ – ಕುರುಬೂರು ಶಾಂತಕುಮಾರ್

ಮೈಸೂರು,ಆಗಸ್ಟ್,7,2026 (www.justkannada.in):  ತಮಿಳುನಾಡಿಗೆ ನೀರು ಬಿಡುದಂತೆ ಆಗ್ರಹಿಸಿ ಆಗಸ್ಟ್ 13 ರಂದು...

ಎರಡು ದಿನ ಕಳೆದ್ರೆ ಎಲ್ಲರೂ ಸುಮ್ಮನಾಗ್ತಾರೆ- ಸಚಿವ ಪುಟ್ಟರಂಗಶೆಟ್ಟಿ

ಚಾಮರಾಜನಗರ,ಆಗಸ್ಟ್,7,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಸಚಿವ ಸ್ಥಾನ ಕೈತಪ್ಪಿದ...

ಮೈಸೂರಿನಲ್ಲಿಆಷಾಢ ಸಂಭ್ರಮ: ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಭಕ್ತರಿ ಅನ್ನಸಂತರ್ಪಣೆ

ಮೈಸೂರು,ಆಗಸ್ಟ್,7,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊನೆಯ ಆಷಾಢ ಸಂಭ್ರಮವಾಗಿದ್ದು ನಗರದ...