25
February, 2026

A News 365Times Venture

25
Wednesday
February, 2026

A News 365Times Venture

ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್ ಭರವಸೆ

Date:

ಬೆಂಗಳೂರು,ಫೆಬ್ರವರಿ,25,2026 (www.justkannada.in): ಖಾಲಿ ಹುದ್ದೆಗಳ ಭರ್ತಿಗೆ ಕೂಡಲೇ ನೇಮಕಾತಿ ಆರಂಭಕ್ಕೆ ಆಗ್ರಹಿಸಿ ನಿನ್ನೆ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೃಹತ್ ಹೋರಾಟ ನಡೆಸಿದ ಬೆನ್ನಲ್ಲೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಈ ಕುರಿತು ಮಾತಾನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ಯಾವುದೇ ಹಗರಣವಾಗದ ರೀತಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು  ಆಗಿಲ್ಲ. ಆ ಅವಧಿಯಲ್ಲಿ ಹಲವು ಹಗರಣಗಳು ನಡೆದವು. ಒಳಮೀಸಲಾತಿ ವಿಚಾರದಲ್ಲಿ ಕೆಲವು ಅಡಚಣೆಗಳು ಎದುರಾಗುತ್ತಿವೆ. ನಿರುದ್ಯೋಗಿ ಯುವಕರಿಗೆ ನೆರವಾಗುವ ಉದ್ದೇಶದಿಂದಲೇ ಯುವನಿಧಿ ಯೋಜನೆ ಜಾರಿಗೆ ತಂದಿದ್ದೇವೆ ನಮಗೆ ಯುವಕರ ನೋವು ಅರ್ಥವಾಗುತ್ತದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸುತ್ತೇವೆ ಎಂದರು.

ಕೆಪಿಎಸ್‌ಸಿ ಸೇರಿದಂತೆ ವಿವಿಧ ನೇಮಕಾತಿ ಸಂಸ್ಥೆಗಳಿಗೆ ಜವಾಬ್ದಾರಿ ನೀಡಲಾಗಿದೆ. ಶಿಕ್ಷಕರ ಹಾಗೂ ಆರೋಗ್ಯ ಇಲಾಖೆಯ ಹುದ್ದೆಗಳ ಭರ್ತಿ ಪ್ರಕ್ರಿಯೆ ಮುಂದುವರಿದಿದೆ ಎಂದು  ಡಿಕೆ ಶಿವಕುಮಾರ್ ತಿಳಿಸಿದರು.

Key words: Action, fill, vacant, posts, DCM, DK Shivakumar

The post ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಲಿತರ ಪಾಲಿನ ಹಣ ಯಾರ ಮನೆಗೆ ಹೋಯ್ತು? ಗ್ಯಾರಂಟಿಗಳನ್ನ ಟೀಕಿಸಿದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಬಗ್ಗೆ ವಿಧಾನ...

ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು...

ಧಾರವಾಡ ವಿದ್ಯಾರ್ಥಿಗಳ ಹೋರಾಟಕ್ಕೆ ಸರ್ಕಾರ ಗಡಗಡ: ಸುಳ್ಳುರಾಮಯ್ಯ ಅಂತಾಗಬೇಡಿ- ಅರವಿಂದ ಬೆಲ್ಲದ್

ಹುಬ್ಬಳ್ಳಿ,ಫೆಬ್ರವರಿ,25,2026 (www.justkannada.in):  ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ...

ರಾಜ್ಯದಲ್ಲಿ ಎಐ ಡೇಟಾ ಹಬ್ ಅಭಿವೃದ್ಧಿ: ಎಂ ಬಿ ಪಾಟೀಲ

  ಬೆಂಗಳೂರು,ಫೆ.೨೫,೨೦೨೬:  ಇ.ಎಸ್.ಡಿ.ಎಂ ವಲಯದ ಬೆಳವಣಿಗೆಗೆ ಪೂರಕವಾಗಿ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ...