13
May, 2026

A News 365Times Venture

13
Wednesday
May, 2026

A News 365Times Venture

ಹತ್ತೇ ದಿನದಲ್ಲಿ ಸಮಸ್ಯೆ ಪರಿಹಾರ: ಯಾದವಗಿರಿ ಗೂಡ್ಸ್‌  ಟರ್ಮಿನಲ್‌ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದ ಸಂಸದ ಯದುವೀರ್‌

Date:

ಮೈಸೂರು, ಮೇ,13,2026 (www.justkannada.in):  ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿ ಯಾದವಗಿರಿ ಗೂಡ್ಸ್‌ ಟರ್ಮಿನಲ್‌ ರಸ್ತೆಯನ್ನು ಲಾರಿಗೆಳಿಗೆ ಸಂಚಾರ ಮುಕ್ತ ಮಾಡಿಸುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಯಶಸ್ವಿಯಾಗಿದ್ದಾರೆ.

ಯಾದವಗಿರಿ ಬಳಿಯ ಗೂಡ್ಸ್‌ ಟರ್ಮಿನಲ್‌ ರಸ್ತೆಯನ್ನು ಬಂದ್‌ ಮಾಡಿದ್ದರಿಂದ ಲಾರಿಗಳು ಐದಾರು ಕಿಲೋ ಮೀಟರ್‌  ಬಳಸಿ ಬರಬೇಕಾಗಿತ್ತು. ಇದರಿಂದ ಲಾರಿ ಮಾಲೀಕರಿಗೆ ಸಾವಿರಾರು ರೂಪಾಯಿ ನಷ್ಟವಾಗುತ್ತಿತ್ತು. ಈ ಕುರಿತು ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಹತ್ತು ದಿನಗಳ ಹಿಂದೆ ಸಂಸದ ಯದುವೀರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಸಂಸದ ಯದುವೀರ್‌ ಒಡೆಯರ್‌ ರೈಲ್ವೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ರೈಲ್ವೆ ಗೂಡ್ಸ್‌ ಟರ್ಮಿನಲ್‌ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರು.

ನಂತರ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌, ಈ ಸಮಸ್ಯೆ ಕುರಿತು ನನ್ನ ಗಮನಕ್ಕೆ ಬಂದ ಕೂಡಲೇ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿದೆ. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಅಧಿಕಾರಿಗಳು ಬೈಪಾಸ್‌ ಮಾದರಿಯಲ್ಲಿರುವ ಟರ್ಮಿನಲ್‌ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರು ಎಂದರು.

ಈ ಟರ್ಮಿನಲ್‌ ದಾರಿ ಸಂಚಾರಕ್ಕೆ ಮುಕ್ತವಾಗಿದ್ದರಿಂದ ಪ್ರತಿಯೊಂದು ಲಾರಿಗೆ ತಿಂಗಳಿಗೆ 10 ಸಾವಿರ ರೂಪಾಯಿ ಉಳಿತಾಯವಾಗಲಿದೆ. ಇದು ಲಾರಿಗಳ ಮಾಲೀಕರಿಗೆ, ಚಾಲಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು.

ಗೂಡ್ಸ್‌ ಟರ್ಮಿನಲ್‌ ಸ್ಥಳಾಂತರವಿಲ್ಲ

ಯಾದವಗಿರಿ ಗೂಡ್ಸ್‌ ಟರ್ಮಿನಲ್‌ ಅನ್ನು ಸ್ಥಳಾಂತರ ಮಾಡಲಾಗುತ್ತದೆ ಎಂಬ ವದಂತಿ ಹರಡಿದೆ. ಆದರೆ ಇದು ಕಪೋಲಕಲ್ಪಿತ. ಈ ರೀತಿಯ ಯಾವುದೇ ಪ್ರಸ್ತಾವನೆ ರೈಲ್ವೆ ಇಲಾಖೆ ಮುಂದಿಲ್ಲ ಎಂದರು.

ಈ ಗೂಡ್ಸ್‌ ಟರ್ಮಿನಲ್‌ ಸ್ಥಳಾಂತರ ಸ್ಥಳಾಂತರವಾಗುವುದಿಲ್ಲ, ವಂದೇಭಾರತ್‌ ರೈಲ್ವೆ ನಿರ್ವಹಣೆಗೂ ಇದು ಬಳಕೆಯಾಗಲಿದೆ. ಇಂಥ ವದಂತಿಗಳನ್ನು ಯಾರೂ ಹಬ್ಬಿಸಬಾರದು. ಗೂಡ್ಸ್‌ ಟರ್ಮಿನಲ್‌ ಇಲ್ಲೇ ಇರಲಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು.

ಲಾರಿ ಮಾಲೀಕರ ಸಂಘದ ಅಧ್ಯಕ್ಷ ಶಾಹೀದ್‌, ಯಾದವಗಿರಿ ನಿವಾಸಿಗಳ ಸಂಘದ ಅಧ್ಯಕ್ಷ ಎಸ್ ಕೆ ದಿನೇಶ್, ಸಾಮಾಜಿಕ ಉದ್ಯಮಿ ನಿಖಿಲೇಶ್, ಜಿಲ್ಲಾ ಸಂಘದ ಅಧ್ಯಕ್ಷ ಕೋದಂಡರಾಮ್ ಮತ್ತು ಇತರರು ಉಪಸ್ಥಿತರಿದ್ದರು.

ಸಂಸದ ಯದುವೀರ್‌ ನಮ್ಮ ಪಾಲಿಗೆ ಆಪತ್ಬಾಂಧವರು

ಇದೇ ಸಂದರ್ಭದಲ್ಲಿ ಮಾತನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷರಾದ ಶಾಹೀದ್‌, ಹಲವಾರು ವರ್ಷಗಳಿಂದ ಈ ಕುರಿತು ಸಮಸ್ಯೆ ಎದುರಿಸುತ್ತಿದ್ದೇವು. ಈ ಬಗ್ಗೆ ಹಿಂದಿನ ಸಂಸದರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ತಿಳಿಸಿದ್ದಾರೆ.

ನಮ್ಮ ಸಂಸದರಿಗೆ ಹತ್ತು ದಿನಗಳ ಹಿಂದಷ್ಟೇ ಹೋಗಿ ಮನವಿ ಸಲ್ಲಿಸಿದೆವು. ಕೂಡಲೇ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಟರ್ಮಿನಲ್‌ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ. ಇವರ ಋಣವನ್ನು ನಾವು ಯಾವತ್ತೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

ಮೈಸೂರಿಗೆ ಇಂಥ ಜನಪ್ರತಿನಿಧಿಗಳು ಬೇಕು

ನಮ್ಮ ಮಹಾರಾಜರು ಎಂದರೆ ಜನಾನುರಾಗಿಗಳು. ಈಗ ಜನಪ್ರತಿನಿಧಿಯಾಗಿ ಜನಸೇವೆಯಲ್ಲಿ ತೊಡಗಿದ್ದಾರೆ. ಇಂಥವರು ನಮ್ಮ ಜನಪ್ರತಿಧಿಗಳಾಗಿರಬೇಕು. ಇವರಿಗೆ ನಮ್ಮ ಸಂಪೂರ್ಣ ಬೆಂಬಲ ಎಂದು ಶಾಹೀದ್‌ ಘೋಷಿಸಿದಾಗ ಸಭೆಯಲ್ಲಿದ್ದವರು ಕೂಡ ದನಿ ಗೂಡಿಸಿದರು.

ಪ್ರತಿ ದಿನ 600ಕ್ಕೂ ಹೆಚ್ಚು ಲಾರಿಗಳು ಈ ಟರ್ಮಿನಲ್‌ ರಸ್ತೆಯಲ್ಲಿ ಈಗ ಸಂಚರಿಸುತ್ತದೆ. ಐದಾರು ಕಿಲೋ ಮೀಟರ್‌ ಕಡಿಮೆಯಾಗುತ್ತದೆ. ಇದರಿಂದ ಸಾವಿರಾರು ರೂಪಾಯಿ ಹಣ ಉಳಿತಾಯವಾಗುತ್ತದೆ. ಸಂಸದರ ನೆರವನ್ನು ನಾವು ಸದಾ ಸ್ಮರಿಸುತ್ತೇವೆ ಎಂದು ಶಾಹೀದ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Key words: MP, Yaduveer, opens, Yadavagiri Goods Terminal road

The post ಹತ್ತೇ ದಿನದಲ್ಲಿ ಸಮಸ್ಯೆ ಪರಿಹಾರ: ಯಾದವಗಿರಿ ಗೂಡ್ಸ್‌  ಟರ್ಮಿನಲ್‌ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದ ಸಂಸದ ಯದುವೀರ್‌ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...

ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

ರಾಮನಗರ,ಮೇ,13,2026 (www.justkannada.in):  ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ ನಿಧನರಾದ ನಟ ನಿರ್ದೇಶಕ...

ಕೇಂದ್ರದಲ್ಲಿ 1.5 ಲಕ್ಷ ಕೋಟಿ ನಷ್ಟ: ಈ ಬಗ್ಗೆ ಮಾತಾನಾಡೋದೆ ಇಲ್ಲ- ಸಚಿವ ಸಂತೋಷ್ ಲಾಡ್ ಟಾಂಗ್

ಧಾರವಾಡ,ಮೇ,13,2026 (www.justkannada.in): ಕೇಂದ್ರ ಸರ್ಕಾರ ತುಂಬಾನೇ ನಷ್ಟದಲ್ಲಿದೆ. ಕೇಂದ್ರಕ್ಕೆ 1.5 ಲಕ್ಷ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಪುಣೆ,ಮೇ,13,2026 (www.justkannada.in): ದೇಶಾದ್ಯಂತ ಭಾರೀ ಸುದ್ದಿಯಾಗಿರುವ ನೀಟ್ ಯುಜಿ ಪ್ರಶ್ನೆ ಪತ್ರಿಕೆ...