10
November, 2025

A News 365Times Venture

10
Monday
November, 2025

A News 365Times Venture

ಹಾಡಹಗಲೇ ಮಹಿಳಾ ಅಧಿಕಾರಿಗೆ ಲೈಂಗಿಕ ದೌರ್ಜನ್ಯ: ಮೊಬೈಲ್ ಕಿತ್ತುಕೊಂಡು ದರೋಡೆಕೋರ ಪರಾರಿ

Date:

ಬೆಂಗಳೂರು, ಆಗಸ್ಟ್​ 13,2025 (www.justkannada.in): ಹಾಡಹಗಲೇ ದರೋಡೆಕೋರನೋರ್ವ  ಪಿಜಿಗೆ ನುಗ್ಗಿ ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಹೆದರಿಸಿ ಲೈಂಗಿಕ ದೌರ್ಜನ್ಯವೆಸಗಿ ನಂತರ ಮೊಬೈಲ್​ ಕಿತ್ತುಕೊಂಡು ಪರಾರಿ  ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆಗಸ್ಟ್​ 11ರಂದು ಜುಡಿಷಿಯಲ್ ಲೇಔಟ್​ನ ಲೇಡಿಸ್ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ. ಬೆಸ್ಕಾಂನಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿರುವ ಮಹಿಳೆ ಮೇಲೆಯೇ ಈ ದೌರ್ಜನ್ಯವೆಸಗಲಾಗಿದೆ.

15 ದಿನಗಳ ಹಿಂದಷ್ಟೇ ಮಹಿಳೆ ಜುಡಿಷಿಯಲ್ ಲೇಔಟ್​ ನ ಶಿವಾಸ್ ಲೇಡಿಸ್ ಪಿಜಿಗೆ ಸೇರಿಕೊಂಡಿದ್ದರು. ಆಗಸ್ಟ್​ 11ರಂದು ಮಧ್ಯಾಹ್ನ ಕೆಲಸ ಮುಗಿಸಿ ಪಿಜಿಯಲ್ಲಿನ 3ನೇ ಮಹಡಿಯಲ್ಲಿರುವ ತನ್ನ ರೂಮಿಗೆ ಆಗಮಿಸಿದ್ದರು.

ಈ ವೇಳೆ ಏಕಾಏಕಿ ಬಂದ ದರೋಡೆಕೋರ ಚಾಕು ಸಮೇತ  ಪಿಜಿಗೆ ನುಗ್ಗಿ ಮಹಿಳೆಯಿದ್ದ ರೂಮ್​​ ಡೋರ್ ಬಡೆದಿದ್ದಾನೆ. ಪಿಜಿಯವರು ಇರಬಹುದೆಂದು ಮಹಿಳೆ ಬಾಗಿಲು ತೆರೆದಿದ್ದಾರೆ.  ಈ ವೇಳೆ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿದ್ದ ಖದೀಮ, ದೌರ್ಜನ್ಯವೆಸಗಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಬಳಿಕ ಬೆಡ್​ ಮೇಲಿದ್ದ 2 ಮೊಬೈಲ್​ ಗಳು ತೆಗೆದುಕೊಂಡು ಪರಾರಿ ಆಗಿದ್ದಾನೆ. ಘಟನೆ ಕುರಿತು ಯಲಹಂಕ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Key words: Female officer, sexually, assault, Robber

The post ಹಾಡಹಗಲೇ ಮಹಿಳಾ ಅಧಿಕಾರಿಗೆ ಲೈಂಗಿಕ ದೌರ್ಜನ್ಯ: ಮೊಬೈಲ್ ಕಿತ್ತುಕೊಂಡು ದರೋಡೆಕೋರ ಪರಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...