30
April, 2026

A News 365Times Venture

30
Thursday
April, 2026

A News 365Times Venture

ಹಾಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಿ- ಕೆ.ವಿವೇಕಾನಂದ ಮನವಿ

Date:

ಮೈಸೂರು,ಜುಲೈ,23,2025 (www.justkannada.in): ನ್ಯಾಯಾಲಯದಲ್ಲಿ ವ್ಯಾಜ್ಯ ಮುಗಿಯುವವರೆಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರಿಗೆ ವಿಧಾನಪರಿಷತ್ ಸದಸ್ಯ ಕೆ.ವಿವೇಕಾನಂದ ಮನವಿ ಮಾಡಿದ್ದಾರೆ.

ಈ ಕುರಿತು ಸಚಿವ ಎಂ.ಸಿ ಸುಧಾಕರ್ ಅವರಿಗೆ ಪತ್ರ ಬರೆದಿರುವ ಎಂಎಲ್ ಸಿ ವಿವೇಕಾನಂದ, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವಾ ಅವಧಿ ದಿನಾಂಕ:-2/8/2025 ರಂದು ಮುಗಿಯಲ್ಲಿದೆ.  ಏಕ ಕಾಲದಲ್ಲಿ ಸರಿ ಸುಮಾರು 10500 ಅತಿಥಿ ಉಪನ್ಯಾಸಕರು ಕರ್ತವ್ಯದಿಂದ ಬಿಡುಗಡೆ ಹೊಂದಲಿದ್ದಾರೆ. ಇದರಿಂದ ಕಾಲೇಜಿನಲ್ಲಿ ಪಾಠಪ್ರವಚನಕ್ಕೆ ತೊಂದರೆಯಾಗಲಿದ್ದು, ಅಲ್ಲದೆ ಸ್ಥಾನಕ್ಕೆ ಪರ್ಯಾಯವಾಗಿ ನೇಮಿಸಿಕೊಳ್ಳಲು ನ್ಯಾಯಾಲಯದಲ್ಲಿ ವ್ಯಾಜ್ಯವಿರುವುದರಿಂದ ಯಾವುದೇ ನೇಮಕಾತಿಯ ಕೌನ್ಸಿಲಿಂಗ್ ಪ್ರಕ್ರಿಯೆ ಕೈಗೊಂಡಿರುವುದಿಲ್ಲ.

ಈ ಕಾರಣದಿಂದಾಗಿ ಇಲಾಖೆಯು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಾಗದಿರುವುದರಿಂದ ಹಾಗೂ ವಿದ್ಯಾರ್ಥಿಗಳಿಗೆ ಇನ್ನೂ 2 ತಿಂಗಳಿಗೆ ಪರೀಕ್ಷೆ ಬರುವುದರಿಂದ. ವಿದ್ಯಾರ್ಥಿಗಳ & ಶೈಕ್ಷಣಿಕ ಹಿತದೃಷ್ಟಿಯಿಂದ ವ್ಯಾಜ್ಯವು ಇತ್ಯರ್ಥ ಆಗುವವರೆಗೂ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಗಳನ್ನು ಸೇವೆಯಲ್ಲಿ ಮುಂದುವರೆಸಲು ಅಗತ್ಯ ಕ್ರಮಕೈಗೊಳ್ಳುವಂತೆ ಕೋರಿದ್ದಾರೆ.vtu

Key words: Continue, guest lecturers, service, MLC,  K.Vivekananda

 

The post ಹಾಲಿ ಅತಿಥಿ ಉಪನ್ಯಾಸಕರ ಸೇವೆಯನ್ನು ಮುಂದುವರೆಸಿ- ಕೆ.ವಿವೇಕಾನಂದ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...