10
March, 2026

A News 365Times Venture

10
Tuesday
March, 2026

A News 365Times Venture

ಹೆಂಡತಿ ಬಿಟ್ಟು ಬಾಡಿಗೆ ಮನೆ ಮಾಲೀಕನ ಪತ್ನಿ ಮದುವೆಯಾಗಿದ್ದ ವ್ಯಕ್ತಿಯ ಕಿಡ್ನಾಪ್, ಹತ್ಯೆ

Date:

ಬೆಂಗಳೂರು,ಏಪ್ರಿಲ್,28,2025 (www.justkannada.in): ತನ್ನ ಹೆಂಡತಿಯನ್ನ ಬಿಟ್ಟು ಬಾಡಿಗೆ ಮನೆಯ ಮಾಲೀಕನ ಪತ್ನಿಯನ್ನ ಮದುವೆಯಾಗಿದ್ದ ವ್ಯಕ್ತಿಯನ್ನ ನಾಲ್ಕೈದು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸೋಲೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಿಲೀಪ್ ಹತ್ಯೆಯಾದ ವ್ಯಕ್ತಿ. ದಿಲೀಪ್  ಬೆಂಗಳೂರಿನ ದಾಬಸ್ ಪೇಟೆಯಲ್ಲಿ ಕಾರ್ಗೋ ನಡೆಸುತ್ತಿದ್ದನು. ಈ ಮಧ್ಯೆ ದಿಲೀಪ್  ಹೆಂಡತಿಯನ್ನ ಬಿಟ್ಟು ಬಾಡಿಗೆ ಮನೆಯಲ್ಲಿ ವಾಸವಿದ್ದ. ಸೋಲೂರಿನ ಬಾಡಿಗೆಮನೆಯಲ್ಲಿ ವಾಸವಿದ್ದ ದಿಲೀಪ್  ಮನೆ ಮಾಲೀಕನ ಪತ್ನಿ ಅಮೃತ ಎಂಬುವವರನ್ನ ಪರಿಚಯ ಮಾಡಿಕೊಂಡಿದ್ದ. ಈ ಮಧ್ಯೆ 5 ವರ್ಷಗಳ ಹಿಂದೆ ಗಂಡನನ್ನ ಬಿಟ್ಟು  ಅಮೃತ ದೀಲಿಪ್ ಮದುವೆಯಾಗಿದ್ದು , ಒಟ್ಟಾಗಿ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.  ಇದು ಅಮೃತಾ ಕುಟುಂಬದವರ ಕೆಂಗಣ್ಣಿಗೆ ಗುರಿಯಾಗಿತ್ತು.

ಈ ಮಧ್ಯೆ  ನಿನ್ನೆ ನೆಲಮಂಗಲದಲ್ಲಿ ಅಮೃತಾ ಮತ್ತು ದಿಲೀಪ್ ಸ್ನ್ಯಾಕ್ಸ್ ತಿನ್ನಲು ಬಂದಿದ್ದರು. ಈ ವೇಳೆ  ಐದಾರು ಜನರ ಗುಂಪು ದಿಲೀಪ್ ಮೇಲೆ ಮಚ್ಚನಿಂದ ಹಲ್ಲೆ ಮಾಡಿ ನಂತರ ಕಿಡ್ನಾಪ್ ಮಾಡಿದ್ದರು. ಇದೀಗ ತುಮಕೂರಿನಲ್ಲಿ ದಿಲೀಪ್   ಶವ ಪತ್ತೆಯಾಗಿದ್ದು, ಈ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Man, kidnapped, murdered, Bangalore

The post ಹೆಂಡತಿ ಬಿಟ್ಟು ಬಾಡಿಗೆ ಮನೆ ಮಾಲೀಕನ ಪತ್ನಿ ಮದುವೆಯಾಗಿದ್ದ ವ್ಯಕ್ತಿಯ ಕಿಡ್ನಾಪ್, ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...