1
August, 2026

A News 365Times Venture

1
Saturday
August, 2026

A News 365Times Venture

10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ: ‘ಇಲಿ’ರಾಯನ ಕರಾಮತ್ತಿಗೆ ಬೆಸ್ತುಬಿದ್ದ ಜ್ಯುವೆಲರಿ ಶಾಪ್‌ ಮಾಲೀಕ

Date:

ತುಮಕೂರು, ಜುಲೈ, 30,2026 (www.justkannada.in): ಶೆಟರ್ ಒಡೆದಿಲ್ಲ. ಬೀಗ ಮುರಿದಿಲ್ಲ. ಕಳ್ಳನೂ ದರೋಡೆ ಮಾಡಿಲ್ಲ. ಆದರೂ ರಾತ್ರೋರಾತ್ರಿ ಜ್ಯೂವೆಲ್ಲರಿ ಶಾಪ್ ನಲ್ಲಿ  10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮಂಗಮಾಯವಾಗಿತ್ತು. ಈ ವೇಳೆ ಸಿಸಿಟಿವಿ ಪರಿಶೀಲಿಸಿದ ಮಾಲೀಕ ಅಚ್ಚರಿಯ ಕಳ್ಳನನ್ನ ನೋಡಿ ಬೆಸ್ತು ಬಿದ್ದಿದ್ದಾರೆ.

ಹೌದು, ತುಮಕೂರು ನಗರದಲ್ಲಿನ ವಿಶ್ವಾಸ್ ಜ್ಯುವೆಲರಿ ಶಾಪ್‌ ನಲ್ಲಿ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ 10 ಲಕ್ಷ ರೂ. ಮೌಲ್ಯದ ವಜ್ರ ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಅಂಗಡಿಯಲ್ಲಿ 50 ಗ್ರಾಂಗೂ ಅಧಿಕ ತೂಕದ ವಜ್ರ ಹಾಗೂ ಚಿನ್ನಾಭರಣಗಳು ಬೆಳಗ್ಗೆ ನೋಡುವಾಗ ಕಾಣೆಯಾಗಿದ್ದವು. ಸರಗಳು ಮತ್ತು ಉಂಗುರಗಳು ಸೇರಿದಂತೆ ಸುಮಾರು 10 ಲಕ್ಷ ರೂ. ಮೌಲ್ಯದ ಆಭರಣಗಳು ನಾಪತ್ತೆಯಾಗಿದ್ದರಿಂದ ಮಾಲೀಕರು ಹಾಗೂ ಸಿಬ್ಬಂದಿ ಆತಂಕಕ್ಕೊಳಗಾಗಿದ್ದರು.

ಈ ನಡುವೆ ಕಳ್ಳತನದ ಬಗ್ಗೆ   ಪೊಲೀಸರಿಗೆ ದೂರು ನೀಡುವ ಮೊದಲು ಜ್ಯೂವೆಲ್ಲರಿ ಶಾಪ್ ಮಾಲೀಕ ಅಂಗಡಿಯ ಸಿಸಿಟಿವಿ ದೃಶ್ಯಾವಳಿ ವೀಕ್ಷಿಸಿದ್ದು ಈ ವೇಳೆ ಇಲಿಯ ಕಳ್ಳತನದ ಕರಾಮತ್ತು ಬಯಲಾಗಿದೆ.

ಆಭರಣ ಎಗರಿಸಿದ್ದು ಇಲಿರಾಯ!

ಸಿಸಿಟಿವಿ ದೃಶ್ಯದಲ್ಲಿ ಒಂದು ಇಲಿ ಅಂಗಡಿಯೊಳಗೆ ಸದ್ದಿಲ್ಲದೆ ಓಡಾಡುತ್ತಿರುವುದು ಕಂಡುಬಂದಿದ್ದು. ಬಳಿಕ ಅದೇ ಇಲಿ ಚಿನ್ನಾಭರಣಗಳನ್ನು ಎಳೆದೊಯ್ದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಮಾರು 10 ಲಕ್ಷ ರೂ. ಮೌಲ್ಯದ ವಜ್ರ ಖಚಿತ ಚಿನ್ನಾಭರಣಗಳನ್ನು ಎಗರಿಸಿದ ಇಲಿ, ಅವುಗಳನ್ನು ತನ್ನ ಬಿಲದಲ್ಲಿ ಸಂಗ್ರಹಿಸಿಟ್ಟಿತ್ತು.

ಇಲಿಯ ಜಾಡು ಹಿಡಿದ ಜ್ಯುವೆಲರಿ ಶಾಪ್ ಸಿಬ್ಬಂದಿ, ಅದು ಸೇರಿಕೊಂಡಿದ್ದ ಬಿಲವನ್ನು ಪತ್ತೆಹಚ್ಚಿ ಬಳಿಕ ಬಿಲವನ್ನು ತೋಡಿದಾಗ ನಾಪತ್ತೆಯಾಗಿದ್ದ ಆಭರಣಗಳು ಅಲ್ಲಿ ಪತ್ತೆಯಾಗಿವೆ. ಬರೋಬ್ಬರಿ 10 ಉಂಗುರಗಳು ಹಾಗೂ 3 ಸರಗಳು ಬಿಲದಲ್ಲಿ ಪತ್ತೆಯಾಗಿದ್ದುಸದ್ಯ ಆಭರಣಗಳು ಸುರಕ್ಷಿತವಾಗಿ ವಾಪಸ್ ಸಿಕ್ಕ ಹಿನ್ನೆಲೆಯಲ್ಲಿ ಜ್ಯುವೆಲರಿ ಶಾಪ್ ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ.

Key words: Jewellery, stolen, Mouse, Tumkur

The post 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ: ‘ಇಲಿ’ರಾಯನ ಕರಾಮತ್ತಿಗೆ ಬೆಸ್ತುಬಿದ್ದ ಜ್ಯುವೆಲರಿ ಶಾಪ್‌ ಮಾಲೀಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾವೇರಿ ನೀರು ವಿವಾದ ವಿಚಾರ: ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ.ಕೆ ಶಿವಕುಮಾರ್

ನವದೆಹಲಿ, ಜುಲೈ,30,2026 (www.justkannada.in):  ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್...

ಡಾ.ರಾಜ್​ ಕುಮಾರ್ ಹಾಕಿ ಕೊಟ್ಟ ಜವಾಬ್ದಾರಿಯಂತೆ ರೈತರ ಪರ ಚಿತ್ರರಂಗ ನಿಲ್ಲುತ್ತೆ- ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲಾ

ಬೆಂಗಳೂರು,ಜುಲೈ,30,2026 (www.justkannada.in):  ತಮಿಳುನಾಡಿಗೆ 15 ದಿನಗಳವರೆಗೆ 3,500 ಕ್ಯೂಸೆಕ್‌ ನೀರನ್ನು ಬಿಡುವಂತೆ...

ಕರ್ನಾಟಕಕ್ಕೆ ಮತ್ತೊಂದು ಶಾಕ್: ಮೇಕೆದಾಟು ಡಿಪಿಆರ್ ವಾಪಸ್ ಕಳುಹಿಸಿದ ಕೇಂದ್ ಜಲ ಆಯೋಗ

ಬೆಂಗಳೂರು,ಜುಲೈ,30,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ...

ಮೈಸೂರಿಗೆ ವಿಶೇಷ ಪ್ಯಾಕ್ ಘೋಷಿಸಿ: ಪ್ರಧಾನಿ ಮೋದಿಗೆ ಕೆ.ವಿ. ಮಲ್ಲೇಶ್ ಆಗ್ರಹ

ಮೈಸೂರು,ಜುಲೈ,31,2026 (www.justkannada.in):  ಮೈಸೂರನ್ನು ಪ್ಯಾರಿಸ್ ಮಾಡುತ್ತೇನೆ, ಸ್ಮಾರ್ಟ್ ಸಿಟಿ ಮಾಡುತ್ತೇನೆ ಎಂದು...