ಬಳ್ಳಾರಿ,ಫೆಬ್ರವರಿ,12,2026 (www.justkannada.in): ಸಿಎಂ ಬದಲಾವಣೆ ವಿಚಾರ ರಾಜ್ಯದಲ್ಲಿ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ವರಿಷ್ಠರನ್ನ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.
ಸಿಎಂ ಬದಲಾವಣೆ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದು 2028ರವಗೆ ಸಿಎಂ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ . ಸಿದ್ದರಮಯ್ಯ ಸಾರಥ್ಯದಲ್ಲೇ 2028 ಚುನಾವಣೆಗೆ ಹೋಗುತ್ತೇವೆ. ನಮ್ಮದು ಹೈಕಮಾಂಡ್ ಪಕ್ಷ. ಸಿಎಂ ಬದಲಾವಣೆ ನಮ್ಮ ಕೈಯಲ್ಲಿ ಇಲ್ಲ ಎಂದರು.
ಇಂದು ನಿನ್ನೆ ದೆಹಲಿಗೆ ತೆರಳಿರುವ ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇಂದು ಬೆಳ್ಳಿಗ್ಗೆ ಸೋನಿಯಾಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಸುಮಾರು 30ನಿಮಿಷಕ್ಕೂ ಹೆಚ್ಚುಕಾಲ ಚರ್ಚಿಸಿದರು.
Key words: Siddaramaiah, CM, till 2028, Minister Zameer
The post 2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ- ಸಚಿವ ಜಮೀರ್ ಅಹ್ಮದ್ ಖಾನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




