30
April, 2026

A News 365Times Venture

30
Thursday
April, 2026

A News 365Times Venture

40 ಶಾಲೆಗಳಿಗೆ ಬಾಂಬ್ ಬೆದರಿಕೆ: ಯಾವುದನ್ನೂ ಲಘುವಾಗಿ ತೆಗೆದುಕೊಳ್ಳಲ್ಲ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಜುಲೈ,18,2025 (www.justkannada.in):  ಬೆಂಗಳೂರಿನ  40 ಶಾಲೆಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಮೇಲ್ ಮಾಡಿದ್ದು ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದಾರೆ.

ಆರ್. ಆರ್ ನಗರ ಹಾಗೂ ಕೆಂಗೇರಿ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆಯೊಡ್ಡಲಾಗಿದೆ.ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.   40 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದು, ಮಕ್ಕಳ ಬ್ಯಾಗ್ ನಲ್ಲಿ ಕಪ್ಪು ಬಣ್ಣದ ಕವರ್ ನಲ್ಲಿ ಸ್ಫೋಟಕ ಇರಿಸಿದ್ದೇನೆ, ಪ್ರಪಂಚದ ಪ್ರತಿಯೊಬ್ಬರನ್ನು ಹತ್ಯೆ ಮಾಡುತ್ತೇನೆ ಯಾರನ್ನೂ ಬಿಡುವುದಿಲ್ಲ ಎಂದು ಬರೆಯಲಾಗಿದೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬಾಂಬ್ ಬೆದರಿಕೆ ಯಾಕೆ ಬಂದಿದೆ ಅಂತಾ ಪರಿಶೀಲನೆ ಮಾಡುತ್ತೇವೆ  ಈ ಹಿಂದೆಯೂ ಶಾಲೆಗಳಿಗೆ ಬಾಂಬೆ ಬೆದರಿಕೆ ಬಂದಿದೆ.  ನಾವು ಮೊದಲು ಪರಿಶೀಲನೆ ಮಾಡತ್ತೇವೆ. ಯಾವುದನ್ನೂ ಕೂಡ ಲಘುವಾಗಿ ತೆಗೆದುಕೊಳ್ಳಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ಸಭಾಪತಿ ಬಸವರಾಜ ಹೊರಟ್ಟಿ,  ಬಾಂಬ್ ಬೆದರಿಕೆ ನಿರಂತರವಾಗಿ ಬರುತ್ತಿದೆ. ಈ ರೀತಿ ಕರೆಗಳು ಬರುತ್ತಿವೆ . ಹೀಗಾಗಿ ಈ ರೀತಿ ಆಗದಂತೆ ರಾಜ್ಯ ಸರ್ಕಾರ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.vtu

Key words: Bomb threat, 40 schools, Minister, Parameshwar

The post 40 ಶಾಲೆಗಳಿಗೆ ಬಾಂಬ್ ಬೆದರಿಕೆ: ಯಾವುದನ್ನೂ ಲಘುವಾಗಿ ತೆಗೆದುಕೊಳ್ಳಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ...