14
July, 2025

A News 365Times Venture

14
Monday
July, 2025

A News 365Times Venture

43 ಕ್ರಿಮಿನಲ್ ಪ್ರಕರಣ ಹಿಂಪಡೆದ ಆದೇಶ ರದ್ದು: ಕೋರ್ಟ್ ಮೇಲಿರುವ ನಂಬಿಕೆ ದುಪ್ಪಟ್ಟಾಗಿದೆ – ವಕೀಲ ಗಿರೀಶ್ ಭಾರದ್ವಾಜ್ 

Date:

ಮೈಸೂರು,ಮೇ,29,2025 (www.justkannada.in): ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ನಿರ್ಧರಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆಯಾಗಿದ್ದು, ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ.

ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಸೇರಿದಂತೆ 43 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿ, ಆದೇಶ ಹೊರಡಿಸಿತ್ತು. ಇದೀಗ ಸರ್ಕಾರದ 2024ರ ಅ.15ರ ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ರದ್ದು ಮಾಡಿ ಹೈಕೋರ್ಟ್ ಆದೇಶ ಹಿನ್ನಲೆ ಈ ಕುರಿತು ಪ್ರತಿಕ್ರಿಯಿಸಿರುವ ಪಿಐಎಲ್ ಸಲ್ಲಿಸಿದ್ದ ವಕೀಲ ಗಿರೀಶ್ ಭಾರದ್ವಾಜ್ , ಸರ್ಕಾರಕ್ಕೆ ಅಧಿಕಾರ ಇಲ್ಲದಿದ್ದರೂ ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆದಿತ್ತು . ಈಗ ಹೈಕೋರ್ಟ್ ಸರ್ಕಾರದ ಆದೇಶ ರದ್ದು ಮಾಡಿದೆ. ಜನ ಸಾಮಾನ್ಯರಿಗೆ ಕೋರ್ಟ್ ಮೇಲೆ ಇರುವ ನಂಬಿಕೆ ದುಪ್ಪಟ್ಟು ಆಗಿದೆ ಎಂದಿದ್ದಾರೆ.vtu

ಸರ್ಕಾರ ರಾಜಕೀಯವನ್ನು ರಾಜಕೀಯವಾಗಿ ಮಾಡಿದ್ರೆ ಒಳ್ಳೆಯದು. ರಾಜಕೀಯ ಲಾಭಕ್ಕಾಗಿ ಕ್ರಿಮಿನಲ್ ಕೇಸ್ ಗಳನ್ನು ವಾಪಸ್ ಪಡೆಯೋದು ತಪ್ಪು. ಸರ್ಕಾರಕ್ಕೆ ಇಂತಹ ಕೇಸ್ ಗಳನ್ನು  ವಾಪಸ್ ಪಡೆಯುವ ಹಕ್ಕಿಲ್ಲ. ಹೈ ಕೋರ್ಟ್ ಆದೇಶ ಖುಷಿ ತಂದಿದೆ. ಇಷ್ಟಕ್ಕೆ ಸರ್ಕಾರ ಬುದ್ಧಿ ಕಲಿತು ಸುಮ್ಮನಿದ್ರೆ ಒಳ್ಳೆಯದು. ಸುಪ್ರೀಂ ಕೋರ್ಟ್ ಗೆ ಅಪೀಲ್ ಹೋದರೆ. ನಾನು ಕೂಡ ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ವಕೀಲ ಗಿರೀಶ್ ಭಾರದ್ವಾಜ್ ಹೇಳಿದ್ದಾರೆ.

 

Key words: Order, withdrawing, 43 criminal cases, revoked, High court

The post 43 ಕ್ರಿಮಿನಲ್ ಪ್ರಕರಣ ಹಿಂಪಡೆದ ಆದೇಶ ರದ್ದು: ಕೋರ್ಟ್ ಮೇಲಿರುವ ನಂಬಿಕೆ ದುಪ್ಪಟ್ಟಾಗಿದೆ – ವಕೀಲ ಗಿರೀಶ್ ಭಾರದ್ವಾಜ್  appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿರಿಯ ನಟಿ ಬಿ.ಸರೋಜಾ ದೇವಿ ನಿಧನಕ್ಕೆ ಡಿಸಿಎಂ ಡಿಕೆಶಿ, ಅಶೋಕ್ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು,ಜುಲೈ,14,2025 (www.justkannada.in): ಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರು ವಯೋಸಹಜ ಕಾಯಿಲೆಯಿಂದ...

ಬಹಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು,ಜುಲೈ,14,2025 (www.justkannada.in): ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ಹಿರಿಯ ನಟಿ...

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...