28
August, 2026

A News 365Times Venture

28
Friday
August, 2026

A News 365Times Venture

9 ವಿಶ್ವವಿದ್ಯಾಲಯಗಳನ್ನ ಮುಚ್ಚುವುದಿಲ್ಲ, ವಿಲೀನ ಮಾಡುತ್ತಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

Date:

ಬೆಂಗಳೂರು, ಮಾರ್ಚ್​,6,2025 (www.justkannada.in): 9 ವಿಶ್ವವಿದ್ಯಾಲಯಗಳನ್ನ ಮುಚ್ಚುವುದಿಲ್ಲ, ಅವುಗಳನ್ನ ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತಿದ್ದೇವೆ ಎಂದು  ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ  9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರ ಮುಂದಾಗಿರುವ ಬಗ್ಗೆ  ವಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು.

ಈ ವೇಳೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್, ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ. ಮುಚ್ಚುತ್ತಿದ್ದೇವೆ ಅಂತಲ್ಲ. ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ಅಥವಾ ಮಂಡ್ಯ ವಿವಿಯಲ್ಲಿ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸ ಇದೆ. ಎಸ್.ಎಂ. ಕೃಷ್ಣ ವಿದೇಶಾಂಗ ಸಚಿವರಾಗಿದ್ದಾಗ ವಿಜಯೇಂದ್ರ ಅವರ ಅಕ್ಕನ ಮಗನಿಗೆ ಪಿಇಎಸ್ ವಿವಿಯಲ್ಲಿ ಓದಿದ್ದರೂ ವಿದೇಶಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಸಿಗಲಿಲ್ಲ. ಬೆಂಗಳೂರಿಗೆ ಪಿಇಎಸ್ ಫೇಮಸ್ ಕಾಲೇಜು. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವೇಶ ಸಿಗಲಿಲ್ಲ. ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ ಮುಚ್ಚುತ್ತಿದ್ದೇವೆ ಅಂತಲ್ಲ ಎಂದು ತಿಳಿಸಿದರು.

Key words: 9 universities, not close, merge, DCM, DK Sivakumar

The post 9 ವಿಶ್ವವಿದ್ಯಾಲಯಗಳನ್ನ ಮುಚ್ಚುವುದಿಲ್ಲ, ವಿಲೀನ ಮಾಡುತ್ತಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಿಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ನಾನು ಬೇಕಾಗಿದ್ದೀನಾ? ಹೆಚ್ ಡಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬೆಂಗಳೂರು,ಆಗಸ್ಟ್,28,2026 (www.justkannada.in): ತಮ್ಮ ವಿರುದ್ದ ಭ್ರಷ್ಟಾಚಾರ ಆರೋಪ ಮಾಡಿ ರಾಜೀನಾಮೆಗೆ ಆಗ್ರಹಿಸಿದ...

ಮೈಸೂರು ದಸರಾ: ಅರಮನೆ ಪ್ರವೇಶ ವೇಳೆ ಗಾಬರಿಗೊಂಡ ‘ಶ್ರೀರಾಮ’ ಆನೆ

ಮೈಸೂರು,ಆಗಸ್ಟ್,28,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ...

ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು, ಆಗಸ್ಟ್,27,2026 (www.justkannada.in):   ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ...

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 27,2026 (www.justkannada.in): “ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ...