2
July, 2026

A News 365Times Venture

2
Thursday
July, 2026

A News 365Times Venture

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಸಚಿವಾಲಯದ ಕಚೇರಿ ಉದ್ಘಾಟನೆ

Date:

ಬೆಂಗಳೂರು, ಜುಲೈ,2,2026 (www.justkannada.in):  ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿನ ಸಚಿವಾಲಯದ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿದರು.

ಬಳಿಕ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳು ಹಾಗೂ ಮನವಿಗಳನ್ನು ಆಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಜನಪರ, ಪಾರದರ್ಶಕ ಹಾಗೂ ಉತ್ತರದಾಯಿ ಆಡಳಿತಕ್ಕೆ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಪುನರುಚ್ಚರಿಸಿದರು.

ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿಷಯಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ನಿರಂತರ ಸಮನ್ವಯ ಸಾಧಿಸಿ, ಸಮಸ್ಯೆಗಳಿಗೆ ತ್ವರಿತ ಹಾಗೂ ಪರಿಣಾಮಕಾರಿ ಸ್ಪಂದನೆ ನೀಡುವ ಉದ್ದೇಶದಿಂದ ಸಚಿವಾಲಯದ ಕಚೇರಿ ಸದಾ ಎಲ್ಲರಿಗೂ ಮುಕ್ತವಾಗಿರಲಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Key words: Minister, Yathindra Siddaramaiah, inaugurated, Secretariat Office, Vidhana Soudha

The post ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಸಚಿವಾಲಯದ ಕಚೇರಿ ಉದ್ಘಾಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್:  ಶೇ12.5 ರಷ್ಟು ವೇತನ ಹೆಚ್ಚಳ

ಬೆಂಗಳೂರು,ಜುಲೈ,2,2026 (www.justkannada.in):  ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು ವೇತನ...

52 ಕ್ರಿಮಿನಲ್ ಕೇಸ್ ಗಳನ್ನ ಹಿಂಪಡೆಯುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ

ಬೆಂಗಳೂರು,ಜುಲೈ,2,2026 (www.justkannada.in): 52 ಕ್ರಿಮಿನಲ್ ಪ್ರಕರಣಗಳನ್ನ ಹಿಂಪಡೆಯುವ  ರಾಜ್ಯ ಸರ್ಕಾರದ ಕ್ರಮಕ್ಕೆ...

ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ: ವರದಿ ಪಡೆದು ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,2,2026 (www.justkannada.in):  ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...

ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು ದಕ್ಷಿಣ, ಜುಲೈ, 2, 2026 (www.justkannada.in):  ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...