25
August, 2026

A News 365Times Venture

25
Tuesday
August, 2026

A News 365Times Venture

ಮೈಸೂರು: ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೀದಿಗೆ ಬಿದ್ದ ಕುಟುಂಬ

Date:

ಮೈಸೂರು,ಜುಲೈ,7,2026 (www.justkannada.in): ಖಾಸಗಿ ಫೈನಾನ್ಸ್ ಕಿರುಕುಳದಿಂದ ಬೀದಿಗೆ ಬಿದ್ದ ಕುಟುಂಬವು ನ್ಯಾಯಕ್ಕಾಗಿ ತಹಸೀಲ್ದಾರ್  ಮೊರೆ ಹೋದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.

ನಂಜನಗೂಡು ತಾಲೂಕು ಹರದನಹಳ್ಳಿ ಗ್ರಾಮದ ರೇವಮ್ಮ ಎಂಬುವರ ಮನೆಗೆ ಫೈನಾನ್ಸ್ ಸಿಬ್ಬಂದಿ ಬೀಗ ಜಡಿದಿದ್ದು ಕಂಗಾಲಾದ ಕುಟುಂಬಸ್ಥರು ಇದೀಗ ನ್ಯಾಯ ಕೊಡಿಸಲು ತಹಶೀಲ್ದಾರ್   ಅವರಿಗೆ ಮನವಿ ಮಾಡಿದ್ದಾರೆ.

ಎರಡು ವರ್ಷಗಳ ಹಿಂದೆ ‘ಇಕ್ವಿಟಿ ಸ್ಮಾಲ್ ಫೈನಾನ್ಸ್’  ನಲ್ಲಿ ರೇಖಾ ಹಾಗೂ ರೇವಮ್ಮ ಸಾಲ ಪಡೆದಿದ್ದರು. 3.15 ಲಕ್ಷ ಸಾಲ ಪಡೆದಿದ್ದು ಪ್ರತಿ ತಿಂಗಳು 7 ಸಾವಿರ ಕಂತು ಪಾವತಿ ಮಾಡುತ್ತಿದ್ದರು. ಆದರೆ  ಅನಾರೋಗ್ಯದ ನಿಮಿತ್ತ ಎರಡು ತಿಂಗಳು ಕಂತು ಕಟ್ಟಿಲ್ಲ. ಈ ಬಗ್ಗೆ ಫೈನಾನ್ಸ್ ಗೆ ತೆರಳಿ ಕುಟುಂಬ ಸಮಯಾವಕಾಶ ಕೇಳಿದ್ದು, ಆದರೂ ಸಹ  ಅತ್ತೆ ರೇವಮ್ಮ ಹಾಗೂ ಸೊಸೆ ಮನೆಯಲ್ಲಿ ಇಲ್ಲದ ವೇಳೆ  ಫೈನಾನ್ಸ್ ಸಿಬ್ಬಂದಿಗಳು ಮನೆಗೆ ಬೀಗ  ಜಡಿದು ನೋಟಿಸ್ ಅಂಟಿಸಿದ್ದಾರೆ. ಈ ಮೂಲಕ ಸರ್ಕಾರದ ಆದೇಶ ಗಾಳಿಗೆ ತೂರಿದ್ದಾರೆ.

ಮನೆಗೆ ಬೀಗ ಜಡಿದ ಹಿನ್ನೆಲೆಯಲ್ಲಿ ರೇವಮ್ಮ ಕುಟುಂಬದವರಿಗೆ 15 ದಿನಗಳಿಂದ ಮನೆ ಮುಂದಿನ ಜಗುಲಿಯೇ ಆಶ್ರಯತಾಣವಾಗಿದ್ದು ಇದೀಗ ನ್ಯಾಯ ಸಿಗದಿದ್ದರೆ ವಿಷ ಕುಡಿಯುವ ಎಚ್ಚರಿಕೆ ನೀಡಿದ್ದಾರೆ.

Key words: Mysore , Family, finance, harassment, Justice

The post ಮೈಸೂರು: ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೀದಿಗೆ ಬಿದ್ದ ಕುಟುಂಬ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ: CWRC ಆದೇಶ ಎತ್ತಿಹಿಡಿದ CWMA

ನವದೆಹಲಿ, ಆಗಸ್ಟ್, 25,2026 (www.justkannada.in):  ಕಾವೇರಿ ನದಿ ನೀರು ವಿವಾದಕ್ಕೆ  ಸಂಬಂಧಿಸಿದಂತೆ...

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ...

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...