9
July, 2026

A News 365Times Venture

9
Thursday
July, 2026

A News 365Times Venture

ಮೈಸೂರು: ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೀದಿಗೆ ಬಿದ್ದ ಕುಟುಂಬ

Date:

ಮೈಸೂರು,ಜುಲೈ,7,2026 (www.justkannada.in): ಖಾಸಗಿ ಫೈನಾನ್ಸ್ ಕಿರುಕುಳದಿಂದ ಬೀದಿಗೆ ಬಿದ್ದ ಕುಟುಂಬವು ನ್ಯಾಯಕ್ಕಾಗಿ ತಹಸೀಲ್ದಾರ್  ಮೊರೆ ಹೋದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.

ನಂಜನಗೂಡು ತಾಲೂಕು ಹರದನಹಳ್ಳಿ ಗ್ರಾಮದ ರೇವಮ್ಮ ಎಂಬುವರ ಮನೆಗೆ ಫೈನಾನ್ಸ್ ಸಿಬ್ಬಂದಿ ಬೀಗ ಜಡಿದಿದ್ದು ಕಂಗಾಲಾದ ಕುಟುಂಬಸ್ಥರು ಇದೀಗ ನ್ಯಾಯ ಕೊಡಿಸಲು ತಹಶೀಲ್ದಾರ್   ಅವರಿಗೆ ಮನವಿ ಮಾಡಿದ್ದಾರೆ.

ಎರಡು ವರ್ಷಗಳ ಹಿಂದೆ ‘ಇಕ್ವಿಟಿ ಸ್ಮಾಲ್ ಫೈನಾನ್ಸ್’  ನಲ್ಲಿ ರೇಖಾ ಹಾಗೂ ರೇವಮ್ಮ ಸಾಲ ಪಡೆದಿದ್ದರು. 3.15 ಲಕ್ಷ ಸಾಲ ಪಡೆದಿದ್ದು ಪ್ರತಿ ತಿಂಗಳು 7 ಸಾವಿರ ಕಂತು ಪಾವತಿ ಮಾಡುತ್ತಿದ್ದರು. ಆದರೆ  ಅನಾರೋಗ್ಯದ ನಿಮಿತ್ತ ಎರಡು ತಿಂಗಳು ಕಂತು ಕಟ್ಟಿಲ್ಲ. ಈ ಬಗ್ಗೆ ಫೈನಾನ್ಸ್ ಗೆ ತೆರಳಿ ಕುಟುಂಬ ಸಮಯಾವಕಾಶ ಕೇಳಿದ್ದು, ಆದರೂ ಸಹ  ಅತ್ತೆ ರೇವಮ್ಮ ಹಾಗೂ ಸೊಸೆ ಮನೆಯಲ್ಲಿ ಇಲ್ಲದ ವೇಳೆ  ಫೈನಾನ್ಸ್ ಸಿಬ್ಬಂದಿಗಳು ಮನೆಗೆ ಬೀಗ  ಜಡಿದು ನೋಟಿಸ್ ಅಂಟಿಸಿದ್ದಾರೆ. ಈ ಮೂಲಕ ಸರ್ಕಾರದ ಆದೇಶ ಗಾಳಿಗೆ ತೂರಿದ್ದಾರೆ.

ಮನೆಗೆ ಬೀಗ ಜಡಿದ ಹಿನ್ನೆಲೆಯಲ್ಲಿ ರೇವಮ್ಮ ಕುಟುಂಬದವರಿಗೆ 15 ದಿನಗಳಿಂದ ಮನೆ ಮುಂದಿನ ಜಗುಲಿಯೇ ಆಶ್ರಯತಾಣವಾಗಿದ್ದು ಇದೀಗ ನ್ಯಾಯ ಸಿಗದಿದ್ದರೆ ವಿಷ ಕುಡಿಯುವ ಎಚ್ಚರಿಕೆ ನೀಡಿದ್ದಾರೆ.

Key words: Mysore , Family, finance, harassment, Justice

The post ಮೈಸೂರು: ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೀದಿಗೆ ಬಿದ್ದ ಕುಟುಂಬ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಶಸ್ಸಿಗೆ ಶಿಸ್ತು ಮತ್ತು ಅಣುಕು ಪರೀಕ್ಷೆಗಳು ಅತ್ಯಗತ್ಯ: ನಿತೀಶ್ ಪಾಟೀಲ್

ಮೈಸೂರು, ಜುಲೈ,7,2026 (www.justkannada.in): ಅಭ್ಯರ್ಥಿಗಳು ಮನೆಯಲ್ಲಿ ಎಷ್ಟೇ ಓದಿದರೂ ಪರೀಕ್ಷಾ ಕೇಂದ್ರದ...

ರಾಜಕೀಯ ಪ್ರೇರಿತ ದೂರುಗಳಿಗೆ ಚು.ಆಯೋಗ ಬೆಲೆ ಕೊಡಲ್ಲ-ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಜುಲೈ,7,2026 (www.justkannada.in): ರಾಜ್ಯ ಸರ್ಕಾರ ಎಸ್ ಐಆರ್ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ...

ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿಸಿದ್ರೆ ಕ್ರಮ- ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

ಕಲಬುರುಗಿ,ಜುಲೈ,7,2026 (www.justkannada.in):  ಬರ ಪರಿಸ್ಥಿತಿ ನಿರ್ವಹಣೆ ನಿರ್ಲಕ್ಷ್ಯ ತೋರಿಸಿದರೇ ಕ್ರಮ ಕೈಗೊಳ್ಳಲಾಗುತ್ತದೆ...

SIR : ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ, ಅರಿವು ಮೂಡಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಮೈಸೂರು, ಜುಲೈ 7,2026 (www.justkannada.in):  ಮೈಸೂರು ಜಿಲ್ಲೆಯ ವರುಣ ವಿಧಾನಸಭಾ ಕ್ಷೇತ್ರ...