25
August, 2026

A News 365Times Venture

25
Tuesday
August, 2026

A News 365Times Venture

ವಿದೇಶಿ ಮಹಿಳೆ  ಸೇರಿ ಇಬ್ಬರ ಮೇಲೆ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಮಾರ್ಚ್,9,2025 (www.justkannada.in): ಕೊಪ್ಪಳ ಬಳಿ ವಿದೇಶ ಮಹಿಳೆ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದ್ದು ತನಿಖೆ ಮುಂದುವರೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಂಗಭದ್ರ ಎಡದಂಡೆ ಕಾಲುವೆ ಬಳಿ  ಪ್ರವಾಸಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣ ಸಂಬಂಧ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ವಿದೇಶಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳಾದ ಮಲ್ಲೇಶ್  ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತೊಬ್ಬ ಆರೋಪಿ ಸಾಯಿರಾಮ್ ತಲೆಮರಿಸಿಕೊಂಡಿದ್ದಾನೆ.  3ನೇ ಆರೋಪಿ ಕುರಿತು ಇನ್ನೂ ಮಾಹಿತಿ ಸಿಕ್ಕಿಲ್ಲ . ವಿಷಯ ಗೊತ್ತಾದ ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿದ್ದಾರೆ ಈ ಘಟನೆಯನ್ನ ಯಾರು ಊಹೆ ಮಾಡಿರಲಿಲ್ಲ. ನಾಲ್ವರು ಪ್ರವಾಸಿಗರ ಪೈಕಿ ಓರ್ವ  ಮೃತಪಟ್ಟಿದ್ದಾರೆ. ಆರೋಪಿಗಳ ಹೇಳಿಕೆ ಪಡೆಯಲಾಗಿದೆ. ತನಿಖೆ ಮುಂದುವರೆಯುತ್ತಿದೆ ಎಂದರು.

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಇಸ್ರೇಲಿ ಪ್ರವಾಸಿ ಮತ್ತು ಇತರ ಮೂವರು ಪುರುಷ ಪ್ರವಾಸಿಗರು ತಂಗಿದ್ದ ಹೋಂಸ್ಟೇಯ 29 ವರ್ಷದ ಮಹಿಳಾ ನಿರ್ವಾಹಕಿ ಪ್ರವಾಸಿಗರೊಂದಿಗೆ ತುಂಗಭದ್ರಾ ಎಡಗಂಡೆ ಕಾಲುವೆಯ ಪಕ್ಕದಲ್ಲಿ ಕುಳಿತು ಸಂಗೀತ ಆಲಿಸುತ್ತಿದ್ದರು. ಈ ವೇಳೆ ಬೈಕ್ ನಲ್ಲಿ  ಬಂದ ಮೂವರು ಪುರುಷರು ಅಲ್ಲಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರು ಮಹಿಳೆಯರ  ಮೇಲೆ ಅತ್ಯಾಚಾರವೆಸಗಿ ಪುರುಷ ಪ್ರವಾಸಿಗರನ್ನು ಕಾಲುವೆಗೆ ತಳ್ಳಿದ್ದರು ಎಂಬ ಆರೋಪವಿದೆ.

Key words: foreign woman, Rape case, Two,  arrested – Home Minister, Dr. G. Parameshwar

The post ವಿದೇಶಿ ಮಹಿಳೆ  ಸೇರಿ ಇಬ್ಬರ ಮೇಲೆ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...