23
July, 2026

A News 365Times Venture

23
Thursday
July, 2026

A News 365Times Venture

ಫುಟ್ ಪಾತ್ ತೆರವು ವೇಳೆ GBA ಅಧಿಕಾರಿಗಳ ಮೇಲೆ ಹಲ್ಲೆ, ಪೆಪ್ಪರ್ ಸ್ಪ್ರೇ: 7 ಜನ ವಶಕ್ಕೆ

Date:

ಬೆಂಗಳೂರು,ಜುಲೈ,21,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಟ್ ಪಾತ್ ಒತ್ತುವರಿ ತೆರವು ಮಾಡಲು ತೆರಳಿದ್ದ ಜಿಬಿಎ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪೆಪ್ಪರ್ ಸ್ಪ್ರೇ ಮಾಡಿರುವ ಘಟನೆ ನಡೆದಿದೆ.

ಶಿವಾಜಿನಗರದಲ್ಲಿ ಈ ಘಟನೆ ನಡೆದಿದೆ.  ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಅಧಿಕಾರಿಯ ಮೇಲೆ ದುಷ್ಕರ್ಮಿಗಳ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ. ಜಿಬಿಎ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಮಾಧವ್ ರಾವ್ , ಎಇ ಗೌತಮ್, ಎಇ ರುಚಿತಾ ಅವರ ಮೇಲೆ ಹಲ್ಲೆ ನಡೆಸಲಾಗಿದೆ  ಎಂದು ತಿಳಿದುಬಂದಿದೆ.  ಎಇ ರುಚಿತಾ ಅವರ ಮೇಲೆ ಪೆಪ್ಪರ್ ಸ್ಪ್ರೇ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಧಿಕಾರಿಗಳು ಶಿವಾಜಿನಗರ ಬಸ್ ನಿಲ್ದಾಣದ ಸುತ್ತಮುತ್ತ ರಸ್ತೆಬದಿಯ ಅಕ್ರಮ ಒತ್ತುವರಿಯನ್ನು ತೆರವುಗೊಳಿಸುತ್ತಿದ್ದರು. ಈ ವೇಳೆ ಕೆಲವರು ಕಾರ್ಯಾಚರಣೆಗೆ ಅಡ್ಡಿಪಡಿಸಿ ಏಕಾಏಕಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಸಂಬಂಧ 7 ಜನ ವಶಕ್ಕೆ

ಈ ಕುರಿತು ಮಾತನಾಡಿರುವ  ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಆಮ್ಟೆ ಫುಟ್​ಪಾತ್​ ತೆರವು ವೇಳೆ ಅಧಿಕಾರಿಗಳ ಮೇಲೆ ದಾಳಿ ಸಂಬಂಧ 7 ಜನರನ್ನು ವಶಕ್ಕೆ ಪಡೆಯಲಾಗಿದೆ.. ಕಮರ್ಷಿಯಲ್ ಸ್ಟ್ರೀಟ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಹಲ್ಲೆ ನಡೆದಿರುವ ಬಗ್ಗೆ ಎಇಇ ಮಾಧವ ರಾವ್ ದೂರಿನ ಮೇರೆಗೆ ಎಫ್‌ ಐಆರ್‌ ದಾಖಲಿಸಲಾಗಿದೆ. ವಿಶೇಷ ತಂಡ ರಚಿಸಿ ತನಿಖೆ ಮಾಡುತ್ತೇವೆ. ರಕ್ಷಣೆ ಕೋರಿ ಅಧಿಕಾರಿಗಳು ಮನವಿ ಸಲ್ಲಿಸಿದ್ದ ಬಗ್ಗೆ ಪರಿಶೀಲಿಸುತ್ತೇವೆ. ಕಾನೂನು ಕೈಗೆ ತೆಗೆದುಕೊಳ್ಳೋಕೆ ಯಾರಿಗೂ ಹಕ್ಕಿಲ್ಲ. ಯಾರೇ ತಪ್ಪು ಮಾಡಿದರೂ ಅವರನ್ನು ಯಾವುದೇ ಕಾರಣಕ್ಕೂ ಬಿಡುವುದಲ್ಲ ಎಂದು ತಿಳಿಸಿದ್ದಾರೆ.

Key words: GBA, officers, footpath clearance, attacked

The post ಫುಟ್ ಪಾತ್ ತೆರವು ವೇಳೆ GBA ಅಧಿಕಾರಿಗಳ ಮೇಲೆ ಹಲ್ಲೆ, ಪೆಪ್ಪರ್ ಸ್ಪ್ರೇ: 7 ಜನ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಪತ್ನಿ, ಮಕ್ಕಳನ್ನ ಹತ್ಯೆಗೈದು ಪತಿ ಆತ್ಮಹತ್ಯೆಗೆ ಶರಣು

ಮೈಸೂರು,ಜುಲೈ,21,2026 (www.justkannada.in): ಪತ್ನಿ, ಇಬ್ಬರು ಮಕ್ಕಳನ್ನು  ಹತ್ಯೆಗೈದು ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ...

KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ: ಪುರಸ್ಕೃತರ ಪಟ್ಟಿ ಹೀಗಿದೆ..

ಬೆಂಗಳೂರು,ಜುಲೈ,21,2026 (www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ...

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ

ಬೆಂಗಳೂರು ಜುಲೈ, 21,2026 (www.justkannada.in): ಗೂಗಲ್‌ ಕಂಪನಿಯು ಇತಿಹಾಸದಲ್ಲೇ ಮೊದಲ ಬಾರಿಗೆ...

ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿದ ಯಾರನ್ನೂ ಸಹ ಬಿಡುವುದಿಲ್ಲ- ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಜುಲೈ,21,2026 (www.justkannada.in): ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಿನ ಗಂಭೀರ...